Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಾನು ಮಾಜಿ ಸಿಎಂ; ಸಿದ್ದರಾಮಯ್ಯ ಮಾರ್ಮಿಕ ನುಡಿ!

 ಚಂದ್ರವಳ್ಳಿ ನ್ಯೂಸ್, ಮೈಸೂರು:
"ಈಗ ನಾನು ಮುಖ್ಯಮಂತ್ರಿಯಲ್ಲ
, ಮಾಜಿ ಮುಖ್ಯಮಂತ್ರಿ. ರಾಹುಲ್ ಗಾಂಧಿ ಅವರು ಹೇಳಿದ ಮೇಲೆ ಮರು ಮಾತನಾಡದೇ ಗೌರವದಿಂದ ರಾಜೀನಾಮೆ ಕೊಟ್ಟು ಹೊರಬಂದಿದ್ದೇನೆ. ಈಗ ಮಾಜಿ ಸಿಎಂ ಆಗಿಯೇ ನಿಮ್ಮ ಮುಂದೆ ನಿಂತಿದ್ದೇನೆ..."- ಹೀಗೆಂದು ಅಭಿಮಾನಿಯೊಬ್ಬರ ಘೋಷಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯಲ್ಲೇ ಅತ್ಯಂತ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ ಪ್ರಸಂಗ ಜರುಗಿದೆ.

ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಶ್ರೀ ಗುರುಮಲ್ಲೇಶ್ವರ ಮಹಾ ಸಂಸ್ಥಾನ ದಾಸೋಹ ಮಠದಲ್ಲಿ ನಡೆದ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಸಿದ್ದರಾಮಯ್ಯ ಭಾಷಣಕ್ಕೆ ನಿಲ್ಲುತ್ತಿದ್ದಂತೆ ಅಭಿಮಾನಿಯೊಬ್ಬ "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಯವಾಗಲಿ" ಎಂದು ಕೂಗಿದಾಗ, ಸಿದ್ದರಾಮಯ್ಯ ತಾವು ಸದ್ಯ ಅಧಿಕಾರದಲ್ಲಿ ಇಲ್ಲದಿರುವುದನ್ನು ಸ್ಪಷ್ಟಪಡಿಸಿದರು.

ಬಸವಣ್ಣನವರ ಸಮ ಸಮಾಜದ ಕನಸು ಇನ್ನೂ ನನಸಾಗಿಲ್ಲ!
ಕಾರ್ಯಕ್ರಮದಲ್ಲಿ ಶ್ರೀ ಗುರುಮಲ್ಲೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ
, ಜ್ಯೋತಿ ಬೆಳಗಿಸಿ ಮಾತನಾಡಿದ ಸಿದ್ದರಾಮಯ್ಯ, ಶರಣರ ತತ್ವಗಳು ಹಾಗೂ ಇಂದಿನ ಸಾಮಾಜಿಕ ವ್ಯವಸ್ಥೆಯ ಬಗ್ಗೆ ಕಳಕಳಿ ವ್ಯಕ್ತಪಡಿಸಿದರು.

ಬಸವಣ್ಣನವರ ಅನುಯಾಯಿ: "ನಾನು ಬಸವಣ್ಣನವರ ಪರಮ ಅನುಯಾಯಿ. ಇದೇ ಕಾರಣಕ್ಕೆ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದ್ದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದೆ" ಎಂದರು.

ಅಸಮಾನತೆ ಇನ್ನೂ ಜೀವಂತ: 12ನೇ ಶತಮಾನದಿಂದ ಇಂದಿನವರೆಗೆ ಸಮಾಜ ಸಾಕಷ್ಟು ಬದಲಾಗಿದೆ. ಆದರೆ, ಜಾತಿ ಮತ್ತು ಅಂತಸ್ತಿನ ತಾರತಮ್ಯ ಮುಕ್ತವಾದ ಸಮ ಸಮಾಜದ ಶರಣರ ಕನಸು ಇನ್ನೂ ನನಸಾಗಿಲ್ಲ. ನಾವೆಲ್ಲರೂ ಪರಸ್ಪರರನ್ನು ಮನುಷ್ಯರನ್ನಾಗಿ ನೋಡುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಅಂಬೇಡ್ಕರ್ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದೆ
ಹಳೆಯ ವರ್ಣಾಶ್ರಮ ವ್ಯವಸ್ಥೆಯು ಬಹುಜನರನ್ನು ಅಕ್ಷರ ಸಂಸ್ಕೃತಿಯಿಂದ ವಂಚಿಸಿತ್ತು ಎಂದು ಬೇಸರ ವ್ಯಕ್ತಪಡಿಸಿದ ಸಿದ್ದರಾಮಯ್ಯ
, "ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದಾಗಿ ಇಂದು ಎಲ್ಲರಿಗೂ ಸಮಾನ ಅವಕಾಶ ಸಿಕ್ಕಿದೆ. ಆ ಸಂವಿಧಾನದ ಶಕ್ತಿಯಿಂದಲೇ ನನ್ನಂಥವನು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು" ಎಂದು ಸ್ಮರಿಸಿದರು. ಶರಣರ ಪ್ರೇರಣೆಯಿಂದಲೇ ತಾವು ಈ ಹಿಂದೆ 'ಮೌಢ್ಯ ನಿಷೇಧ ಕಾಯ್ದೆ' ತಂದಿದ್ದಾಗಿ ಹಾಗೂ ಜನಪದರ ಹಸಿವು ನೀಗಿಸಲು 'ಗ್ಯಾರಂಟಿ ಯೋಜನೆ'ಗಳನ್ನು ರೂಪಿಸಿದ್ದಾಗಿ ಅವರು ತಿಳಿಸಿದರು.

ವಿದ್ಯಾವಂತರ ಮೌಢ್ಯಕ್ಕೆ ವಿಷಾದ: "ಶಿಕ್ಷಣವಿಲ್ಲದೆ ಪ್ರಗತಿ ಸಾಧ್ಯವಿಲ್ಲ ನಿಜ. ಆದರೆ, ಇಂದು ಉತ್ತಮ ಶಿಕ್ಷಣ ಪಡೆದು, ದೊಡ್ಡ ಅಧಿಕಾರ ಹಿಡಿದಿರುವ ವಿದ್ಯಾವಂತ ಸಮಾಜವೇ ಮೌಢ್ಯಾಚರಣೆಗಳಲ್ಲಿ ಮುಳುಗಿರುವುದು ಅತ್ಯಂತ ದುರಂತದ ಸಂಗತಿ" ಎಂದು ಸಿದ್ದರಾಮಯ್ಯ ಕಳಕಳಿ ವ್ಯಕ್ತಪಡಿಸಿದರು.

ದೇವನೂರು ಮಠದ ನೂತನ ಬಸವ ಮಹಾದ್ವಾರ ಉದ್ಘಾಟನೆ
ಇದಕ್ಕೂ ಮುನ್ನ ಮಠದಲ್ಲಿ ನೂತನವಾಗಿ ನಿರ್ಮಿಸಲಾಗಿರುವ
'ಬಸವ ಮಹಾದ್ವಾರ' ಮತ್ತು 'ಕಲ್ಯಾಣಿ'ಯನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಹಾಗೂ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಜಂಟಿಯಾಗಿ ಉದ್ಘಾಟಿಸಿದರು. ಕಂತೆ ಭಿಕ್ಷೆ ಬೇಡಿ, ಹಸಿದವರ ಹೊಟ್ಟೆ ತುಂಬಿಸಿದ ದೇವನೂರು ಶ್ರೀ ಗುರುಮಲ್ಲೇಶ್ವರರ ದಾಸೋಹ ಸೇವೆ ಅವಿಸ್ಮರಣೀಯ ಎಂದು ಗಣ್ಯರು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ವಹಿಸಿದ್ದರು. ಸೋಮಹಳ್ಳಿ ಮಠದ ಶ್ರೀ ಸಿದ್ದಮಲ್ಲ ಸ್ವಾಮಿಗಳು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್, ಗಣೇಶ್ ಪ್ರಸಾದ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!