LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ಭದ್ರಾ ನೀರು ಬಿಡದಿದ್ದರೆ ಬಂದ್": ರಾಷ್ಟ್ರೀಯ ಹೆದ್ದಾರಿ ತಡೆದು ಅಚ್ಚುಕಟ್ಟು ರೈತರ ಬೃಹತ್ ಆಕ್ರೋಶ

Advertisement
Advertisement

"ಭದ್ರಾ ನೀರು ಬಿಡದಿದ್ದರೆ ಬಂದ್": ರಾಷ್ಟ್ರೀಯ ಹೆದ್ದಾರಿ ತಡೆದು ಅಚ್ಚುಕಟ್ಟು ರೈತರ ಬೃಹತ್ ಆಕ್ರೋಶ
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ಮುಂಗಾರು ಹಂಗಾಮಿನ ಬೆಳೆಗಳಿಗೆ ತಕ್ಷಣವೇ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಭದ್ರಾ ಅಚ್ಚುಕಟ್ಟು ಪ್ರದೇಶದ ನೂರಾರು ರೈತರು ಹರಿಹರದ ಬಳಿಯ ರಾಷ್ಟ್ರೀಯ ಹೆದ್ದಾರಿ-48ನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಭಾರತೀಯ ರೈತ ಒಕ್ಕೂಟದ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಮಾಜಿ ಸಚಿವ ಎಸ್. ರವೀಂದ್ರನಾಥ್ ಸೇರಿದಂತೆ ಪ್ರಮುಖ ರೈತ ಮುಖಂಡರು ಹಾಗೂ ನೂರಾರು ರೈತರು ಭಾಗವಹಿಸಿದ್ದರು.

ರೈತರ ಆಕ್ರೋಶ ಮತ್ತು ಬಂದ್ ಎಚ್ಚರಿಕೆ: ಐಸಿಸಿ ಸಭೆಯ ವಿರುದ್ಧ ಅಸಮಾಧಾನ: ಆಗಸ್ಟ್ 18ರಂದು ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ICC) ಸಭೆಯಲ್ಲಿ ನೀರು ಬಿಡುಗಡೆ ಕುರಿತು ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆ-ಹರಿಹರ ಬಂದ್ ಎಚ್ಚರಿಕೆ: ಜಲಾಶಯದಲ್ಲಿ ಪ್ರಸ್ತುತ 175 ಅಡಿ ನೀರಿದ್ದು, ದಿನಕ್ಕೆ 4-5 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಿಂದೆ 40-50 ಅಡಿ ನೀರಿದ್ದಾಗಲೂ ನೀರು ಹರಿಸಲಾಗಿತ್ತು. ಹೀಗಿದ್ದರೂ ನೀರು ಬಿಡದಿದ್ದರೆ ಮುಂಬರುವ ದಿನಗಳಲ್ಲಿ ದಾವಣಗೆರೆ ಮತ್ತು ಹರಿಹರ ನಗರಗಳನ್ನು ಸಂಪೂರ್ಣ ಬಂದ್ ಮಾಡುವುದಾಗಿ ರೈತರು ಎಚ್ಚರಿಸಿದ್ದಾರೆ.

ಪ್ರತಿಭಟನಾನಿರತರ ವಶ:
ಹೆದ್ದಾರಿಯ ಬಳಿ ಬೃಹತ್ ಸಭೆ ನಡೆಸಿದ ನಂತರ ರೈತರು ರಾಷ್ಟ್ರೀಯ ಹೆದ್ದಾರಿ-48ನ್ನು ಬಂದ್ ಮಾಡಿ ವಾಹನ ಸಂಚಾರಕ್ಕೆ ತಡೆ ಒಡ್ಡಿದರು. ಈ ವೇಳೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮುಂದುವರಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ ರೈತರು:
ಸ್ಥಳೀಯ ಶಾಸಕರು ಹಾಗೂ ಸಚಿವರು ತಮ್ಮ ಅಧಿಕಾರ ಉಳಿಸಿಕೊಳ್ಳುವುದರ ಜೊತೆಗೆ ರೈತರ ಭತ್ತದ ಬೆಳೆಯನ್ನು ಉಳಿಸಲು ನೀರು ಕೊಡಿಸಬೇಕು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ಜಿಲ್ಲೆಯ ತೋಟಗಳನ್ನು ಉಳಿಸಿಕೊಳ್ಳಲು ಸಭೆಯಲ್ಲಿ ಧ್ವನಿ ಎತ್ತಿದ್ದಾರೆ, ಆದರೆ ದಾವಣಗೆರೆ ಜಿಲ್ಲೆಯ ಸಚಿವರು ಹಾಗೂ ನಾಯಕರು ಸಭೆಯಲ್ಲಿದ್ದರೂ ಮೌನ ವಹಿಸಿದ್ದಾರೆ ಎಂದು ಯುವ ರೈತ ಹರೀಶ್ ಹಾಗೂ ರೈತ ಮುಖಂಡ ಬೀರಪ್ಪ ಪೈಲ್ವಾನ್ ಆಕ್ರೋಶ ಹೊರಹಾಕಿದರು. ಕಾಲುವೆಗೆ ನೀರು ಬಿಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ ಆಧುನಿಕ ಜಗತ್ತಿನ ಕಣ್ಣಿಗೆ ಕಾಣದ ಶತ್ರು: ‘ಫ್ಯಾಟಿ ಲಿವರ್’ ತುಂಗಭದ್ರಾ ನದಿಯಲ್ಲಿ ಮುಳುಗಿ ತಾಯಿ-ಮಗಳು ಸಾವುಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಸೋಶಿಯಲ್ ಮೀಡಿಯಾ ನಂಟು: ದೊಡ್ಡಬಳ್ಳಾಪುರದಲ್ಲಿ ಯುವಕನ ಬಂಧನ"ಭದ್ರಾ ನೀರು ಬಿಡದಿದ್ದರೆ ಬಂದ್": ರಾಷ್ಟ್ರೀಯ ಹೆದ್ದಾರಿ ತಡೆದು ಅಚ್ಚುಕಟ್ಟು ರೈತರ ಬೃಹತ್ ಆಕ್ರೋಶಮಹದಾಯಿ ರೈತರ ಮೇಲಿನ ಸುಳ್ಳು ಕೇಸ್ ಹಿಂಪಡೆಯಿರಿ: ವೀರೇಶ ಸೊಬರದಮಠ ಒತ್ತಾಯಮೂರನೇ ವ್ಯಕ್ತಿಯ ದೂರು ಆಧರಿಸಿ ಜಾತಿ ಪ್ರಮಾಣಪತ್ರ ರದ್ದುಪಡಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು"ನಿಮ್ಮ ಸೀರೆ ಚಕ್ರಕ್ಕೆ ಸಿಲುಕಲಿದೆ": ಬೈಕ್ ಸವಾರರನ್ನು ವಂಚಿಸಿ ಸರಗಳ್ಳತನ ಮಾಡುತ್ತಿದ್ದ ಮೂವರ ಬಂಧನಐಟಿ ಕಂಪನಿಗಳಿಗೆ ಬ್ಯಾಕ್ ಬಿಲ್ ವಸೂಲಿ ಇಲ್ಲ: ಬೆಸ್ಕಾಂ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್