Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ಮುಖ್ಯಮಂತ್ರಿ ಶಿವಕುಮಾರ್ ತೀವ್ರ ಆಕ್ರೋಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆದಿರುವ ಘಟನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ. "ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ" ಎಂದು ಮಾರ್ಮಿಕವಾಗಿ ನುಡಿದಿರುವ ಅವರು, ಈ ಕೃತ್ಯವು ವಿರೋಧ ಪಕ್ಷದವರ ಹತಾಶೆಯ ಪರಮಾವಧಿಯಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ತರಗೆಲೆ ರಾಜಕಾರಣ, ಬೌದ್ಧಿಕ ದಿವಾಳಿತನ!:
​ಟ್ವಿಟರ್ (X) ಮೂಲಕ ಈ ಘಟನೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿಗಳು, "ಒಬ್ಬ ಯುವ ನಾಯಕನ ಜನಪ್ರಿಯತೆ ಹಾಗೂ ಮಾತುಗಳನ್ನು ಜೀರ್ಣಿಸಿಕೊಳ್ಳಲಾಗದೆ, ತರ್ಕದ ವೇದಿಕೆಯಿಂದ ತರಗೆಲೆ ರಾಜಕಾರಣಕ್ಕೆ ಇಳಿದಿರುವುದು ನಿಮ್ಮ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವದ ಆಶಯಗಳನ್ನು ಬೀದಿಗೆ ತಂದು ಹರಾಜಿಗಿಟ್ಟಿರುವ ನೀವು, ನಿಮ್ಮ ಕಾರ್ಯಕರ್ತರಿಗೆ ಕಲಿಸುತ್ತಿರುವ ಸಂಸ್ಕಾರವಾದರೂ ಇಂತಹುದೇನಾ?" ಎಂದು ವಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

​ಹೋರಾಟದ ಹಾದಿ ಮತ್ತಷ್ಟು ಗಟ್ಟಿ:
​ಇಂತಹ ಹಿಂಸಾತ್ಮಕ ದಾಳಿಗಳು ನಮ್ಮ ನಾಯಕರ ಹೋರಾಟದ ಹಾದಿಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆಯೇ ಹೊರತು ಎಂದಿಗೂ ಧೃತಿಗೆಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಡಿ.ಕೆ. ಶಿವಕುಮಾರ್, "ಇದು ಬಸವಣ್ಣನವರ, ಕುವೆಂಪು ಅವರ ಶಾಂತಿಪ್ರಿಯ ಕರ್ನಾಟಕ. ಇಲ್ಲಿ ಇಂತಹ ವಿಕೃತ, ಹಿಂಸಾತ್ಮಕ ಪುಂಡಾಟಿಕೆಗಳಿಗೆ ಜಾಗವಿಲ್ಲ," ಎಂದು ಎಚ್ಚರಿಸಿದ್ದಾರೆ.

​"ಸಾರ್ವಜನಿಕ ಸಭ್ಯತೆಯ ಗಡಿ ದಾಟಿದ ಪ್ರತಿಯೊಬ್ಬರ ವಿರುದ್ಧವೂ ನಾವು ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ.‌ಪ್ರದೀಪ್ ಈಶ್ವರ್ ಅವರು ಧೃತಿಗೆಡಬೇಕಿಲ್ಲ; ಅವರ ಜೊತೆ ನಾವೆಲ್ಲರೂ ಇದ್ದೇವೆ."
ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ.

​ಯುವ ಶಾಸಕ ಪ್ರದೀಪ್ ಈಶ್ವರ್ ಮೇಲಿನ ಈ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಶಾಸಕರಿಗೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗಕ್ಕೆ ಆಗಮಿಸಲಿರುವ ಅಂತರಾಷ್ಟ್ರೀಯ ಆಧ್ಯಾತ್ಮಿಕ ಗುರು ಸದ್ಗುರು ಶ್ರೀ  ಜಗ್ಗಿ ವಾಸುದೇವ್ಹಾಡೋನಹಳ್ಳಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆಕೆಂಪೇಗೌಡರ ಜಾತ್ಯತೀತ ಕಲ್ಪನೆ ಇಂದಿಗೂ ಆದರ್ಶ-ಡಾ.ಕೆ.ಸುಧಾಕರ್ಪಲ್ಸ್ ಪೋಲಿಯೋ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆಹಿರಿಯ ಪತ್ರಕರ್ತ, ನಿರ್ದೇಶಕ ಎನ್.ಎಸ್.ಶಂಕರ್ ನಿಧನ: ಕೆಯುಡಬ್ಲ್ಯೂಜೆ ತೀವ್ರ ಸಂತಾಪಯೋಗಭ್ಯಾಸವು ಮಾನವನಲ್ಲಿ ಅಳತೆ ಮತ್ತು ಪ್ರಮಾಣಗಳ ವಿವೇಕಜ್ಞಾನ ಮೂಡಿಸುತ್ತದೆ: ಯೋಗಾಚಾರ್ಯ ಚಿನ್ಮಯಾನಂದಜೆಡಿಎಸ್ ಬೂತ್ ಮಟ್ಟದ ಏಜೆಂಟರ ಕಾರ್ಯಾಗಾರ: ಮುಂಬರುವ ಚುನಾವಣಾ ಸಿದ್ಧತೆ ಕುರಿತು ತೀವ್ರ ಚರ್ಚೆಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯಿಂದ 'ಮತ ದ್ರೋಹ': ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪಹಸಿರು ಅಭಿಯಾನಕ್ಕೆ ಜಾಗತಿಕ ಗಿನ್ನಿಸ್ ರೆಕಾರ್ಡ್ ಮನ್ನಣೆ: ಮುಖ್ಯಮಂತ್ರಿ ಶಿವಕುಮಾರ್ ಹೆಮ್ಮೆಯ ಘೋಷಣೆಕಾರ್ಮಿಕರ ಘನತೆ, ಹಕ್ಕುಗಳ ರಕ್ಷಣೆಗೆ ಕರ್ನಾಟಕ ಬದ್ಧ: ಮುಖ್ಯಮಂತ್ರಿ ಶಿವಕುಮಾರ್