Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ರಾಜ್ಯದಲ್ಲಿ 1 ಕೋಟಿ 60 ಲಕ್ಷ ಅಸಂಘಟಿತ ಕಾರ್ಮಿಕರು-ಸಚಿವ ಸಂತೋಷ್ ಲಾಡ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ, ಬೆಂ.ಗ್ರಾ.ಜಿಲ್ಲೆ:
ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನ ಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಹೇಳಿದರು.


ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 91 ಅಸಂಘಟಿತ ವಲಯಗಳನ್ನು ಗುರ್ತಿಸಲಾಗಿದ್ದು ಕಾರ್ಮಿಕ ಇಲಾಖೆಯ ಮಂಡಳಿಗಳ ಮೂಲಕ ಹಲವು ಸೌಲಭ್ಯ ಒದಗಿಸುತ್ತಿದ್ದೇವೆ. ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ, ಅಪಘಾತ ಮದುವೆ ಸಹಾಯಧನ, ತಾಯಿ ಮಗು ಸಹಾಯ ಹಸ್ತ ಮುಂತಾದ ಸೌಲಭ್ಯಗಳು ನೀಡಲಾಗುತ್ತಿದೆ.

ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿಯಡಿ 23 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಅಸಂಘಟಿತ ವಲಯದ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು, ಪತ್ರಿಕಾ ವಿತರಕ ಕಾರ್ಮಿಕರು ಹಾಗೂ ಖಾಸಗಿ ವಾಣಿಜ್ಯ ಸಾರಿಗೆ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ ಎಂದರು.

ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ-
ಕರ್ನಾಟಕ ಸರ್ಕಾರವು ರಾಜ್ಯದ ಗಿಗ್ ಕಾರ್ಮಿಕರಿಗಾಗಿ (ಸ್ವತಂತ್ರ ಉದ್ಯೋಗಿ) ವಿಶೇಷ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆನ್ಲೈನ್ ಮೂಲಕ ಸರಕು ಸೇವೆ ಒದಗಿಸುವು ಸ್ವಿಗ್ಗಿ
, ಜೊಮಾಟೋ, ಅಮೆಜಾನ್, ಫ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದೆ. ಅಪಘಾತಾದಲ್ಲಿ ಆಕಸ್ಮಿಕವಾಗಿ ಸತ್ತಿರುವವರಿಗೆ ಮೊದಲು ಅವರಿಗೆ 2ಲಕ್ಷ ನೀಡಲಾಗಿತ್ತಿತ್ತು, ಈಗ 5 ಲಕ್ಷ ಕೊಡುತ್ತಿದ್ದೇವೆ. ಇದರ ಉದ್ದೇಶ ಅವರ ಕುಟುಂಬಕ್ಕೆ ಆರ್ಥಿಕವಾಗಿ ಅವರ ಜೀವನ ನಡೆಸಲು ಆಸರೆಯಾಗಬೇಕು ಎನ್ನುವುದು ನಮ್ಮ ಆಶಯ, ಆದ್ದರಿಂದ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಆಶಾದೀಪ ಯೋಜನೆ- ರಾಜ್ಯ ಸರ್ಕಾರವು, ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಠಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ ಆಶಾದೀಪ ಯೋಜನೆ ಜಾರಿಗೊಳಿಸಲಾಗಿದೆ.

ಈ ಯೋಜನೆಯಡಿ ಮಾಲೀಕರು ಪಾವತಿಸುವ ಇ.ಎಸ್.ಐ. ಮತ್ತು ಇ.ಪಿ.ಎಫ್. ವಂತಿಕೆ ಮರುಪಾವತಿ ಮಾಡಲಾಗುವುದು. ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಶಿಷ್ಯವೇತನ (Stipend) ಮರುಪಾವತಿ ಮಾಡಲಾಗುವುದು.

ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಿ, ಸ್ವಾವಲಂಭಿಗಳಾಗಲು ಉತ್ತೇಜನ ನೀಡಲಾಗುತ್ತದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಡ ನಿರ್ಮಾಣಗೊಂಡಿದ್ದು ಅದಕ್ಕೆ ಬೇಕಾದ ಸೌಲಭ್ಯಗಳು ಮತ್ತು ಉಪಕರಣಗಳು ಸರಬರಾಜು ಮಾಡಬೇಕಿದೆ. ಹಾಗಾಗಿ ನಾವು ಕೇಂದ್ರ ಸರ್ಕಾರದ ಸಚಿವರೊಂದಿಗೆ ಇದರ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಸತಿ ಸಮುಚ್ಚಯಗಳನ್ನು ಉದ್ಘಾಟಿಸಿ ಮಾತನಾಡಿ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಸೌಲಭ್ಯಗಳನ್ನು ನಮ್ಮ ಸರ್ಕಾರ ನೀಡುತ್ತಿದ್ದ ಕಾರ್ಮಿಕರ ಸಚಿವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಾದ್ಯಂತ ಕೈಗಾರಿಕೆಗಳು ಬೃಹದಾಕಾರವಾಗಿ ಬಳೆಯುತ್ತಿವೆ. ಹಲವಾರು ಕುಟುಂಬಗಳು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಒಂದು ತರಬೇತಿ ಕೇಂದ್ರ ಸ್ಥಾಪಿಸಿದರೆ ಉತ್ತಮ. ಇದರಿಂದ ಹಲವು ಅಭ್ಯರ್ಥಿಗಳು ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಉದ್ಯೋಗ ಪಡೆಯುವಂತಾಗುತ್ತದೆ. ಇದರ ಬಗ್ಗೆ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದರು.

ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ದೊಡ್ಡಬಳ್ಳಾಪುರದಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ, 25 ಸಾವಿರಕ್ಕೂ ಹೆಚ್ಚಿನ ಮಗ್ಗಗಳು ಇವೆ. 3 ಲಕ್ಷಕ್ಕು ಅಧಿಕ ಕಾರ್ಮಿಕರು ವಲಸೆ ಬಂದು ದೊಡ್ಡಬಳ್ಳಾಪುರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಕಾರ್ಮಿಕರಿಗೆ ಭದ್ರತೆ ಸಿಗುವಂತೆ ಮಾಡಬೇಕು ಜೊತೆಗೆ ಸರ್ಕಾರ ನಿಗದಿ ಮಾಡಿರುವ ಸ್ಥಳೀಯ ಮಟ್ಟದ ಕಾರ್ಮಿಕರಿಗೆ ಉದ್ಯೋಗದಲ್ಲಿ 70% ಅವಕಾಶ ಕಲ್ಪಿಸಿರುವುದು ನಿರುದ್ಯೋಗ ನಿವಾರಣೆಗೆ ಹೆಚ್ಚು ಅನುಕೂಲವಾಗಿದೆ. ಅತೀ ಶೀಘ್ರವಾಗಿ ಇ.ಎಸ್.ಐ ಆಸ್ಪತ್ರೆ ಉದ್ಘಾಟನೆಯಾಗಬೇಕು ಜೊತೆಗೆ ಕಾರ್ಮಿಕ ಮಕ್ಕಳಿಗೆ ವಸತಿ ಶಾಲೆಯನ್ನು ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಭಾರತಿ, ಸದಸ್ಯರಾದ ರಮೇಶ್, ಜಾನಿ, ಬಸಪ್ಪ, ಶ್ರೀಯಾನ್ಸ್, ವಿಜಯಕುಮಾರ್, ಕಾರ್ಮಿಕರ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಮಾಜಿ ಶಾಸಕರಾದ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿಶ್ವನಾಥ ಸೇರಿದಂತೆ ಅಧಿಕಾರಿಗಳು, ಕಾರ್ಮಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!