Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

33 ನೂತನ ಕ್ರೆಸ್ಟ್ ಗೇಟ್‌ಗಳು ಲೋಕಾರ್ಪಣೆ!

ಚಂದ್ರವಳ್ಳಿ ನ್ಯೂಸ್, ಹೊಸಪೇಟೆ/ಮುನಿರಾಬಾದ್:
ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಗುರುವಾರ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ದಿನವಾಗಿ ದಾಖಲಾಗಿದೆ. ಸುಮಾರು
73 ವರ್ಷಗಳ ಹಿಂದೆ ಅಳವಡಿಸಲಾಗಿದ್ದ ಅಣೆಕಟ್ಟಿನ ಹಳೆಯ ಕ್ರೆಸ್ಟ್ ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದ್ದು, ಹೊಸದಾಗಿ ನಿರ್ಮಿಸಲಾದ 33 ನೂತನ ಕ್ರೆಸ್ಟ್ ಗೇಟ್‌ಗಳನ್ನು ಜಂಟಿಯಾಗಿ ಲೋಕಾರ್ಪಣೆಗೊಳಿಸಲಾಗಿದೆ.

ಮುನಿರಾಬಾದ್ ಸಮೀಪದ ತುಂಗಭದ್ರಾ ಅಣೆಕಟ್ಟೆಯಲ್ಲಿ ನಡೆದ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಸೇರಿದಂತೆ ಮೂರು ರಾಜ್ಯಗಳ ಪ್ರಮುಖ ನಾಯಕರು ಸಾಕ್ಷಿಯಾದರು.

ಒಂದೇ ವೇದಿಕೆಯಲ್ಲಿ 3 ರಾಜ್ಯಗಳ ಸಿಎಂ, ಕೇಂದ್ರ ಸಚಿವರು:
ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರ ಒಗ್ಗಟ್ಟು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಒಂದೇ ವೇದಿಕೆಯಲ್ಲಿ ಭಾಗವಹಿಸಿ ಜಲಾಶಯದ ಸುರಕ್ಷತೆಗೆ ಕೈಜೋಡಿಸಿದರು.

ಅಣೆಕಟ್ಟಿನ 18ನೇ ಗೇಟ್ ಸಮೀಪ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಿದ ಬಳಿಕ ನೂತನ ಗೇಟ್‌ಗಳ ಲೋಕಾರ್ಪಣೆ ನಡೆಯಿತು. 18ನೇ ಗೇಟ್: ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಚಾಲನೆ. 17ನೇ ಗೇಟ್: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಂದ ಉದ್ಘಾಟನೆ. 19ನೇ ಗೇಟ್: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರಿಂದ ಲೋಕಾರ್ಪಣೆ.

20ನೇ ಗೇಟ್: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಂದ ಚಾಲನೆ.
ಬೆಳಿಗ್ಗೆ 11.15ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವು ಸುಮಾರು ಒಂದೂಕಾಲು ಗಂಟೆ ತಡವಾಗಿ ಆರಂಭವಾಯಿತು. ಉದ್ಘಾಟನೆ ಬಳಿಕ ನಾಲ್ಕೂ ನಾಯಕರು ಪರಸ್ಪರ ಕೈಎತ್ತಿ ಒಗ್ಗಟ್ಟು ಪ್ರದರ್ಶಿಸಿದರು. ತುಂಗಭದ್ರಾ ಜಲಾಶಯ ಮತ್ತು ನೀರಿನ ಹಂಚಿಕೆ ವಿಷಯಗಳಲ್ಲಿ ಮುಂದೆಯೂ ಮೂರು ರಾಜ್ಯಗಳು ಸಹಕಾರದಿಂದ ಕಾರ್ಯನಿರ್ವಹಿಸಲಿವೆ ಎಂಬ ಬಲವಾದ ಸಂದೇಶವನ್ನು ಈ ಮೂಲಕ ರವಾನಿಸಲಾಯಿತು.

ಗೇಟ್ ಬದಲಾವಣೆಗೆ ಕಾರಣವಾಗಿದ್ದ 2024 ರ ಆ ಘಟನೆ!:
2024
ರ ಆಗಸ್ಟ್‌ನಲ್ಲಿ ತುಂಗಭದ್ರಾ ಡ್ಯಾಂನ 19ನೇ ಕ್ರೆಸ್ಟ್ ಗೇಟ್ ಚಾಲನೆ ತಡೆದುಕೊಳ್ಳಲಾರದೆ ಕೊಚ್ಚಿ ಹೋಗಿತ್ತು. ಈ ಘಟನೆ ಇಡೀ ದೇಶದ ಗಮನ ಸೆಳೆದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದ ಡ್ಯಾಂ ಸುರಕ್ಷತಾ ತಜ್ಞರ ತಂಡ ಹಾಗೂ ಕೇಂದ್ರ ಜಲಶಕ್ತಿ ಆಯೋಗ ಜಂಟಿಯಾಗಿ ಸಮಗ್ರ ಪರಿಶೀಲನೆ ನಡೆಸಿದ್ದವು. ಅಣೆಕಟ್ಟಿನ ಭದ್ರತೆಯ ದೃಷ್ಟಿಯಿಂದ 1953ರಲ್ಲಿ ಅಳವಡಿಸಲಾಗಿದ್ದ, ಸದ್ಯ ಸವಕಳಿಗೊಂಡಿದ್ದ ಎಲ್ಲಾ 33 ಹಳೆಯ ಕ್ರೆಸ್ಟ್ ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಾಯಿಸಲು ತಜ್ಞರು ಸೂಚನೆ ನೀಡಿದ್ದರು.

ನೂತನ ಕ್ರೆಸ್ಟ್ ಗೇಟ್‌ಗಳ ವಿಶೇಷತೆಗಳೇನು? ಒಟ್ಟು ವೆಚ್ಚ: ಸುಮಾರು 51 ಕೋಟಿ ರೂಪಾಯಿ.
ಬದಲಾದ ಗೇಟ್‌ಗಳು:
1953ರ ಅವಧಿಯ ಒಟ್ಟು 33 ಹಳೆಯ ಗೇಟ್‌ಗಳ ಜಾಗಕ್ಕೆ ಹೊಸ ಗೇಟ್ ಅಳವಡಿಕೆ. ಪ್ರತಿಯೊಂದು ಗೇಟ್ ಸುಮಾರು 20 ಅಡಿ ಎತ್ತರ ಹಾಗೂ 60 ಅಡಿ ಅಗಲವನ್ನು ಹೊಂದಿದೆ. ಒಂದೊಂದು ಗೇಟ್ ಬರೋಬ್ಬರಿ 48.50 ಟನ್ ತೂಕವಿದೆ.

ತುಂಗಭದ್ರಾ ಜಲಾಶಯದ ನೀರನ್ನು ಅವಲಂಬಿಸಿರುವ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ಸಹಕಾರದ ಸಂಕೇತವಾಗಿ ಈ ಕಾರ್ಯಕ್ರಮ ಮೂಡಿಬಂದಿದೆ. ಈ ಐತಿಹಾಸಿಕ ಹೆಜ್ಜೆಯಿಂದಾಗಿ ಜಲಾಶಯದ ಆಯುಷ್ಯ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ಪ್ರವಾಹ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆ ಮತ್ತಷ್ಟು ಸುಲಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!