ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಬೆಂಗಳೂರು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ನಿಯೋಗವು ಗೃಹಕಚೇರಿ 'ಕೃಷ್ಣಾ'ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.
ಸಂಘದ ಪದಾಧಿಕಾರಿಗಳು ಉಪಮುಖ್ಯಮಂತ್ರಿಗಳನ್ನು ಗೌರವಿಸಿ, ಸರ್ಕಾರಿ ಮಹಿಳಾ ನೌಕರರ ವಿವಿಧ ಬೇಡಿಕೆಗಳು ಹಾಗೂ ವೃತ್ತಿಪರ ಕುಂದುಕೊರತೆಗಳ ಕುರಿತು ಅವರ ಗಮನಸೆಳೆದರು. ನಿಯೋಗದ ಅಹವಾಲುಗಳನ್ನು ಆಲಿಸಿದ ಸಿಎಂ, ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಉಪಸ್ಥಿತರಿದ್ದರು.



