Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ದಲಿತರ ಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದಲಿತರ ಜನಸಂಖ್ಯೆಗನುಗುಣವಾಗಿ ೨೦೨೬-೨೭ ರ ಬಜೆಟ್‌ನಲ್ಲಿ ಶೇ.೨೪.೧ ರಷ್ಟು ಅನುದಾನ ಮೀಸಲಿರಿಸಿ ಹಣ ದುರ್ಬಳಕೆ ತಡೆಯಲು ಎಸ್ಸಿಪಿ. ಟಿಎಸ್ಪಿ. ಕಾಯಿದೆ ಸೆಕ್ಷನ್ ೭(ಸಿ) ರದ್ದುಪಡಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ತಮಟೆ ಬಾರಿಸುವ ಮೂಲಕ ಸರ್ಕಾರದ ಗಮನ ಸೆಳೆದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ ಮಾತನಾಡಿ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಸಿರುವ ೨೫ ಸಾವಿರ ಕೋಟಿ ರೂ.ಗಳನ್ನು ಹಿಂತಿರುಗಿಸಬೇಕು. ಸ್ವಂತ ನಿವೇಶನವಿಲ್ಲದ ಬಡವರು ನಿವೇಶನ ಖರೀಧಿಸಲು ಐದು ಲಕ್ಷ ರೂ.ಗಳ ನೆರವು ನೀಡಬೇಕು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿ ಭೂಮಿ ಖರೀಧಿಸಬೇಕು. ಬಗರ್‌ಹುಕುಂ ಸಾಗುವಳಿದಾರರು ಸಕ್ರಮಕ್ಕಾಗಿ ಸಲ್ಲಿಸಿರುವ ನಮೂನೆ ೫೭ ರ ಅರ್ಜಿಗಳನ್ನು ಸೂಕ್ತವಾದ ಕಾರಣ ನೀಡದೆ ಏಕಪಕ್ಷೀಯವಾಗಿ ತಿರಸ್ಕಾರ ಮಾಡಿ ಭೂಮಿ ಇಲ್ಲದಿರುವ ಬಡವರನ್ನು ಒಕ್ಕಲೆಬ್ಬಿಸುವುದು ನಿಲ್ಲಬೇಕು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಅವರ ಜನ್ಮದಿನ ಜೂ.೯ ನ್ನು ರಜಾರಹಿತ ದಿನವನ್ನಾಗಿ ಆಚರಣೆ ಮಾಡಬೇಕು. ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಕುಟುಂಬಗಳ ವಸತಿ ರಹಿತರಿಗೆ ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಬೇಕು. ಚುನಾಯಿತ ಪ್ರತಿನಿಧಿಗಳಿಗೆ ಹೆಚ್ಚಿಸಿದಂತೆ ದೇವದಾಸಿ, ವಿಧವಾ ಮಹಿಳೆಯರು, ವೃದ್ದರು ಹಾಗೂ ವಿಕಲಚೇತರಿಗೆ ನೀಡುತ್ತಿರುವ ಮಾಸಿಕ ವೇತನವನ್ನು ಐದು ಸಾವಿರ ರೂ.ಗಳಿಗೆ ಏರಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಅಭಿವೃದ್ದಿಗಾಗಿ ಅನುಷ್ಟಾನಗೊಳಿಸಲಾಗುತ್ತಿರುವ ಗಂಗಾ ಕಲ್ಯಾಣ, ಭೂ ಒಡೆತನ, ನೇರಸಾಲ, ಉದ್ಯಮಶೀಲತಾ ಸ್ವಾವಲಂಭಿ ಸಾರಥಿ ಯೋಜನೆ ಸಾಲ ಸೌಲಭ್ಯಗಳ ಘಟಕ ವೆಚ್ಚವನ್ನು ದ್ವಿಗುಣಗೊಳಿಸುವಂತೆ ಕೆಂಗುಂಟೆ ಜಯಪ್ಪ ಒತ್ತಾಯಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಕೆ.ಆರ್.ಶ್ರೀಧರಮೂರ್ತಿ, ಸಹ ಸಂಚಾಲಕ ಎನ್.ಪ್ರಭಾಕರ್, ಅಂಜನಮೂರ್ತಿ ಆರ್, ಗಣೇಶ, ನಾಗರಾಜ, ರಂಗಪ್ಪ, ಮಂಜಪ್ಪ, ಶ್ರೀನಿವಾಸ, ಶೇಖರಪ್ಪ, ನುಲೇನೂರಿನ ದುರುಗಮ್ಮ, ರಂಗಮ್ಮ, ಕರಿಯಮ್ಮ, ಚಿಕ್ಕಂದವಾಡಿಯ ಶಿವಮ್ಮ, ಭಾಗ್ಯಮ್ಮ, ರುದ್ರಮ್ಮ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!