Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಣಿ ವಿಲಾಸ ಸಾಗರದ ಭದ್ರತೆಗಾಗಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ನೇಮಿಸಿ

Advertisement
Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.


ವಾಣಿ ವಿಲಾಸ ಸಾಗರವು ಪ್ರಮುಖ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದು ರಾಜ್ಯದ ಮೊದಲ ಅಣೆಕಟ್ಟು ಆಗಿದೆ. ವೇದಾವತಿ ನದಿಗೆ ಅಡ್ಡಲಾಗಿ ಮೈಸೂರು ಮಹಾರಾಜರು ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾಗಿದೆ. 118 ವರ್ಷಗಳಷ್ಟು ಹಳೆಯದಾಗಿದೆ.


ಇಂತಹ ಪ್ರಮುಖ ವಿಮಾನ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಿಗೆ ಸೂಕ್ತ ಭದ್ರತೆ ಒದಗಿಸಲಾಗುತ್ತಿದೆ. ಆದರೆ ವಾಣಿ ವಿಲಾಸ ಸಾಗರ ಡ್ಯಾಂ ಸೂಕ್ಷ್ಮ ಡ್ಯಾಂ ಆಗಿದ್ದು ಸೂಕ್ತ ಭದ್ರತೆ ಒದಗಿಸುವಲ್ಲಿ ನಿರ್ಲಕ್ಷಿಸಿದ್ದಾರೆ.


ಇಲ್ಲಿಯ ಅಣೆಕಟ್ಟಿಗೆ ಯಾವುದೇ ಖಾಯಂ ರಕ್ಷಣಾ ಸಿಬ್ಬಂದಿ ನೇಮಿಸಿಲ್ಲ. ಈ ಜಲಾಶಯಕ್ಕೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಸುವುದು ಮುಖ್ಯವಾಗಿದೆ. ಹಾಗೂ ಪುಂಡರಿಂದ ಬೆದರಿಕೆ ದಾಳಿ ಮತ್ತು ಯುದ್ದ ಭೀತಿ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ರೈತ ಸಂಘ ಆತಂಕ ವ್ಯಕ್ತಪಡಿಸಿದೆ.


ಅಣೆಕಟ್ಟೆಯ ಭದ್ರತಾ ದೃಷ್ಟಿಯಿಂದ, ಪ್ರವಾಸಿಗಾರ ಹಿತದೃಷ್ಟಿಯಿಂದ ಕೆಎಸ್ಐಎಸ್ಎಸ್ ಸಂಸ್ಥೆಯಿಂದ ಭದ್ರತೆಗಾಗಿ ಖಾಯಂ ಅಧಿಕಾರಿ ಹಾಗು ಸಿಬ್ಬಂದಿಗಳನ್ನು ನೇಮಿಸಬೇಕೆಂದು ಸರ್ಕಾರಕ್ಕೆ ಹಾಗು

ಪೊಲೀನ್ ಇಲಾಖೆಗೆ ಶೀಪಾರಸ್ಸು ಮಾಡಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿ ರೈತ ಸಂಘದ ಜಿಲ್ಲಾ ಪ್ರಭಾರಿ ಅಧ್ಯಕ್ಷ ಅಧ್ಯಕ್ಷ ಪಿ.ಸೂರಪ್ಪ, ಭರಮಸಾಗರ ಹೋಬಳಿ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಹೆಚ್.ರಂಗಸ್ವಾಮಿ ಅವರು ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ