Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಲ್ಲೆ ಮತ್ತು ಲೈಂಗಿಕ ಕಿರುಕುಳ, ಹೆಚ್.ಡಿ. ರೇವಣ್ಣಗೆ ಸುಪ್ರೀಂ ನೋಟಿಸ್!:

Advertisement
Advertisement

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮನೆಕೆಲಸದ ಮಹಿಳೆಯ ಮೇಲೆ ಹಲ್ಲೆ ಮತ್ತು ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಕರಣದಲ್ಲಿ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್​ 354 (ಮಹಿಳೆಯ ಘನತೆಗೆ ಧಕ್ಕೆ) ಅಡಿಯಲ್ಲಿನ ಆರೋಪವನ್ನು ರದ್ದುಗೊಳಿಸಿದ್ದ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಈ ನೋಟಿಸ್ ನೀಡಿದ್ದು, ರಾಜ್ಯ ಸರ್ಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿದ ಸುಪ್ರೀಂ ಕೋರ್ಟ್:
ವಿಚಾರಣೆ ವೇಳೆ ಹೈಕೋರ್ಟ್‌ನ ತೀರ್ಪಿನ ನಡೆಗೆ ಆಶ್ಚರ್ಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಪೀಠವು ಹಲವು ಪ್ರಮುಖ ಪ್ರಶ್ನೆಗಳನ್ನು ಎತ್ತಿದೆ.

"ಮಾಜಿ ಸಚಿವ ರೇವಣ್ಣ ಅವರ ಮೇಲಿರುವ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಹೈಕೋರ್ಟ್ ಹಲ್ಲೆಯ ಆರೋಪವನ್ನು ಕೈಬಿಟ್ಟಿದ್ದು ಹೇಗೆ?"

"ಕೇವಲ ಲೈಂಗಿಕ ಕಿರುಕುಳದ ಆರೋಪದ ಮೇಲೆ ಮಾತ್ರ ವಿಚಾರಣೆ ನಡೆಸುವಂತೆ ಸೂಚಿಸಿ, ಆರೋಪಿಯ ವಿರುದ್ಧದ ಚಾರ್ಜ್‌ಗಳನ್ನು ಕೋರ್ಟ್ ಬದಲಾಯಿಸಿದ್ದು ಹೇಗೆ?" ಎಂದು ಪ್ರಶ್ನಿಸಿದೆ.

ಮುಂದುವರಿದು, "ಮಗ ಪ್ರಜ್ವಲ್ ರೇವಣ್ಣ ಮೇಲಿರುವುದು ಅತ್ಯಾಚಾರದ ಆರೋಪ, ತಂದೆ ರೇವಣ್ಣ ಮೇಲೂ ಬೇರೆ ಗಂಭೀರ ಆರೋಪಗಳಿವೆ. ಇಬ್ಬರ ಮೇಲೂ ಭಿನ್ನ ಹಾಗೂ ಗಂಭೀರ ಆರೋಪಗಳಿರುವಾಗ ಹೈಕೋರ್ಟ್ ಈ ರೀತಿ ಚಾರ್ಜ್‌ಗಳನ್ನು ಹೇಗೆ ಬದಲಾಯಿಸಲು ಸಾಧ್ಯ?" ಎಂದು ವಿವರಣೆ ಕೇಳಿದೆ.

ರಾಜ್ಯ ಸರ್ಕಾರಕ್ಕೂ ತರಾಟೆ:
ಇದೇ ವೇಳೆ ತಡವಾಗಿ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ ಸರ್ಕಾರವನ್ನೂ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

"ಹೈಕೋರ್ಟ್ ಆದೇಶ ಬಂದಿದ್ದು 2025ರ ನವೆಂಬರ್-ಡಿಸೆಂಬರ್ ಅವಧಿಯಲ್ಲಿ. ಅದನ್ನು ಈಗ (2026ರಲ್ಲಿ) ಪ್ರಶ್ನಿಸಿ ಅರ್ಜಿ ಸಲ್ಲಿಸುತ್ತಿರುವುದೇಕೆ? ಹೈಕೋರ್ಟ್ ಆರೋಪ ಕೈಬಿಟ್ಟ ತಕ್ಷಣವೇ ಯಾಕೆ ತಕರಾರು ಸಲ್ಲಿಸಲಿಲ್ಲ?" ಎಂದು ಪ್ರಶ್ನಿಸಿದ ನ್ಯಾಯಪೀಠವು, ನ್ಯಾಯಾಂಗದ ಶಿಸ್ತನ್ನು ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಹಿನ್ನೆಲೆ: ಹೈಕೋರ್ಟ್ ಆದೇಶ ಹಾಗೂ ರೇವಣ್ಣ ಖುಲಾಸೆ:
2025
ರ ನವೆಂಬರ್ 19 ರಂದು ಹೈಕೋರ್ಟ್, ರೇವಣ್ಣ ಅವರ ವಿರುದ್ಧದ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪವನ್ನು (ಐಪಿಸಿ ಸೆಕ್ಷನ್ 354) ರದ್ದುಗೊಳಿಸಿತ್ತು. ದೂರಿನ ಅಂಶಗಳು ಸೆಕ್ಷನ್ 354ಕ್ಕಿಂತ ಹೆಚ್ಚಾಗಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಬರುತ್ತವೆ ಎಂದು ಅಭಿಪ್ರಾಯಪಟ್ಟಿತ್ತು. ಈ ಆದೇಶದ ಬೆನ್ನಲ್ಲೇ, 2025ರ ಡಿಸೆಂಬರ್ 29 ರಂದು ವಿಚಾರಣಾ ನ್ಯಾಯಾಲಯವು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರನ್ನು ಖುಲಾಸೆಗೊಳಿಸಿತ್ತು. ಇದನ್ನು ಈಗ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸವಾಲು ಮಾಡಿದೆ.

ಏನಿದು ಪ್ರಕರಣ?:
ಹೊಳೆನರಸೀಪುರದ ತಮ್ಮ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ. ರೇವಣ್ಣ ಹಾಗೂ ಅವರ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2024ರ ಏಪ್ರಿಲ್ 28 ರಂದು ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದಲ್ಲಿ ಈಗಾಗಲೇ ಕೆಳಹಂತದ ನ್ಯಾಯಾಲಯದಿಂದ ರಿಲೀಫ್ ಪಡೆದಿದ್ದ ಹೆಚ್.ಡಿ. ರೇವಣ್ಣ ಅವರಿಗೆ ಈಗ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವುದು ಕಾನೂನು ಸಂಕಷ್ಟ ಮತ್ತೊಮ್ಮೆ ತಲೆದೋರುವಂತೆ ಮಾಡಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.