Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಶೋಷಿತರಿಗೆ ಧ್ವನಿ ನೀಡಿದ ಧೀಮಂತ ನಾಯಕ ಬಾಬೂಜಿ- ಸಚಿವ ಸುಧಾಕರ್

ಚಂದ್ರಳ್ಳಿ ನ್ಯೂಸ್, ಚಿತ್ರದುರ್ಗ:
ಡಾ.ಬಾಬು ಜಗಜೀವನ್ ರಾಮ್ ಅವರದು ಎಂದೆಂದಿಗೂ ನೆನಪಿನಲ್ಲಿ ಉಳಿಯುವಂತಹ ವ್ಯಕ್ತಿತ್ವ. ಅವರು ಕೇವಲ ರಾಜಕಾರಣಿ ಅಲ್ಲ, ಒಂದು ಚಳುವಳಿಯೇ ಆಗಿದ್ದರು. ತಮ್ಮ ಜೀವನದ  ಎಲ್ಲಾ ಹಂತಗಳಲ್ಲಿ ದಲಿತ, ಹಿಂದುಳಿದ ವರ್ಗ, ಶೋಷಿತ ಸಮುದಾಯಗಳಿಗೆ ಧ್ವನಿ ನೀಡಿದ  ಧೀಮಂತ ನಾಯಕ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

     ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‍ರಾಮ್‍ರವರ 118ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

       ದೇಶಾದ್ಯಂತ ಬಾಬೂಜಿ' ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ದೇಶದ ಮೊದಲ ದಲಿತ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.

       ಬಾಬೂಜಿ ಅವರು 1908 ರ ಏಪ್ರಿಲ್ 05 ರಂದು ಬಿಹಾರದ ಸಣ್ಣ ಗ್ರಾಮವಾದ ಚಾಂದ್ವದ, ಭೋಜಪುರ ಜಿಲ್ಲೆಯಲ್ಲಿ ಒಂದು ಹಿಂದುಳಿದ ಕುಟುಂಬದಲ್ಲಿ ಜನಿಸಿದರು. ಬಾಲ್ಯದಿಂದಲೇ ಜಾತಿ ಮೂಲದ ಭೇದಭಾವದ ನೋವು ಅನುಭವಿಸಿದ ಜಗಜೀವನ್ ರಾಮ್ ಅವರು, ಅದರ ವಿರುದ್ಧ ಧೈರ್ಯವಾಗಿ ಪ್ರತಿರೋಧ ವ್ಯಕ್ತಪಡಿಸುತ್ತಾ ಶಿಕ್ಷಣ, ಸಾಮಾಜಿಕ ಚಟುವಟಿಕೆ ಹಾಗೂ ರಾಜಕೀಯದ ಮೂಲಕ ತಮ್ಮನ್ನು ತಾವೇ ರೂಪಿಸಿಕೊಂಡರು. ಬಡತನ, ಹಿಂಸೆಯ ನಡುವೆಯೂ ಅವರು ಸಾಧನೆಯ ಶಿಖರ ತಲುಪಿದರು ಎಂದು ಹೇಳಿದರು.

ಜಗಜೀವನ್ ರಾಮ್ ಅವರು ಗಾಂಧೀಜಿಯಯವರ ತತ್ವ, ಆದರ್ಶಗಳಿಂದ ಪ್ರಭಾವಿತರಾಗಿ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.  ಅವರ ನಿಷ್ಠೆ ಮತ್ತು ನಾಯಕತ್ವದಿಂದ ಹಲವು ಬಾರಿ ಸಂಸತ್ತಿಗೆ ಆಯ್ಕೆಯಾದರು ಮತ್ತು ಸಚಿವರಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದರು. ಡಾ. ಬಾಬು ಜಗಜೀವನರಾಂ ಅವರು ದಲಿತರ ಸಾಮಾಜಿಕ ಸಮಾನತೆ ಮತ್ತು ಸಮಾನ ಹಕ್ಕುಗಳಿಗಾಗಿ ಹೋರಾಡಿದರು.

1967 ರಿಂದ 1970 ರವರೆಗೆ ಇಂದಿರಾಗಾಂಧಿ ಸರ್ಕಾರದಲ್ಲಿ ಕೇಂದ್ರ ಆಹಾರ ಮತ್ತು ಕೃಷಿ ಸಚಿವರಾಗಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಭಾರತದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರುವ ಮೂಲಕ ಹಸಿರುಕ್ರಾಂತಿ ಹರಿಕಾರಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.  ಅಲ್ಲದೇ 1979 ರಲ್ಲಿ ಭಾರತದ ಪ್ರಥಮ ದಲಿತ  ಉಪಪ್ರಧಾನ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುವ ಮೂಲಕ ಅವರು ದೇಶದ ಜನತೆಗೆ ನೀಡಿದ ನಿರಂತರ ಕೊಡುಗೆಗಳಿಂದಾಗಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.  ಅವರು ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಪ್ರತಿನಿಧಿಯಾಗಿದ್ದರು. ಅಲ್ಲದೇ ಅತ್ಯಂತ ನೀತಿವಂತ, ಶ್ರಮಜೀವಿ, ಹಾಗೂ ಪ್ರಜಾಪ್ರಭುತ್ವದ ಸತ್ಯವಾದ ಆರಾಧಕರಾಗಿದ್ದರು ಎಂದು ಹೇಳಿದರು.

       ಬಾಬು ಜಗಜೀವನ್ ರಾಮ್ ಅವರ ಕೊಡುಗೆಗಳನ್ನು ಕೇವಲ ಒಂದು ದಿನದಲ್ಲಿ ನೆನೆಯಲು ಸಾಕಾಗುವುದಿಲ್ಲ. ಅವರ ತತ್ವಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮಾತ್ರವೇ ನಿಜವಾದ ಗೌರವ. ಬಾಬೂಜಿಯವರ ಕನಸುಗಳಾದ ಮಕ್ಕಳಿಗೆ ಉತ್ತಮ ಶಿಕ್ಷಣ, ಯುವಕರಿಗೆ ಸಮೃದ್ಧ ಭವಿಷ್ಯ, ಮಹಿಳೆಯರಿಗೆ ಗೌರವದ ಬದುಕು ಹಾಗೂ ಶೋಷಿತರಿಗಾಗಿ ನ್ಯಾಯ ಇವುಗಳನ್ನು ನಿಜವಾಗಿಸೋಣ, ಜಾತಿ-ಭೇದಭಾವಗಳ ವಿರುದ್ಧ ಮೆಟ್ಟಿ ನಿಲ್ಲೋಣ, ಸಮಾನತೆಯ ಸಮಾಜ ನಿರ್ಮಿಸೋಣ ಎಂದರು.

ಸಂಸದ ಗೋವಿಂದ ಎಂ ಕಾರಜೋಳ ಮಾತನಾಡಿ, ಡಾ.ಬಾಬು ಜಗಜೀವನ್ ರಾಮ್ ದೇಶಕಂಡ ಅಪ್ರತಿಮ ನಾಯಕ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿದರು. ಪರಿಶಿಷ್ಟ ಜಾತಿಯಲ್ಲಿಯೇ ಅತ್ಯಂತ ಹಿಂದುಳಿದವರಿಗಾಗಿ ಒಳ ಮೀಸಲಾತಿ ಕಲ್ಪಿಸುವಂತೆ ದೇಶದ ಹಲವು ರಾಜ್ಯಗಳಲ್ಲಿ ಹೋರಾಟ ನಡೆಸಲಾಗುತ್ತಿದೆ. 2024 ಆಗಸ್ಟ್ 1 ರಂದು ಸರ್ವೋಚ್ಛ ನ್ಯಾಯಾಲಯ ರಾಜ್ಯ ಸರ್ಕಾರಗಳು ಪರಿಶಿಷ್ಟರ ಪಟ್ಟಿಯಲ್ಲಿ ಉಪವರ್ಗೀಕರಣ ಮಾಡಿ,

ಈಗ ನೀಡಿರುವ ಮೀಸಲಾತಿಯಲ್ಲಿಯೇ ಒಳಮೀಸಲಾತಿ ಹಂಚಿಕೆ ಮಾಡಬಹುದು ಎಂದು ತೀರ್ಪು ನೀಡಿದೆ. ಇದೊಂದು ಐತಿಹಾಸಿಕ ತೀರ್ಪು ಎನಿಸಿದೆ. ಕೇಂದ್ರ ಸರ್ಕಾರವು ಸಹ ಒಳ ಮೀಸಲಾತಿ ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ತಿಳಿಸಿದೆ. ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಒಳ ಮೀಸಲಾತಿ ಜಾರಿಗೆ ಪ್ರಯತ್ನಿಸಬೇಕಿದೆ. ಈ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿ ಬಗ್ಗೆ ಡಾ.ಬಾಬು ಜಗಜೀವನ್ ರಾಮ್ ಕಂಡಿದ್ದ ಕನಸನ್ನು ಸಾಕಾರ ಮಾಡಬೇಕಿದೆ ಎಂದರು.  

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಮಾತನಾಡಿ, ಜಗಜೀವನ್‍ರಾಮ್ ದೇಶ ಕಂಡ ಅಪ್ರತಿಮ ರಾಜಕಾರಣಿ. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದು, ಹಸಿರು ಕ್ರಾಂತಿ ಮೂಲಕ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ತಿಳಿಸಿದ ಅವರು, ಬಾಬೂಜಿ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸಬೇಡಿ. ಅವರು ಇಡೀ ಪ್ರಪಂಚಕ್ಕೆ ಮಾದರಿ ಎಂದು ಹೇಳಿದರು.

   ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲರ ಹೋರಾಟಕ್ಕೆ ಪ್ರತಿಫಲ ಸಿಗಲಿದೆ ಎಂದು ತಿಳಿಸಿದರು.
ನಿವೃತ್ತ ಉಪನ್ಯಾಸಕ ಡಾ. ವಿ.ಬಸವರಾಜ್ ಉಪನ್ಯಾಸ ನೀಡಿ, ರಾಜಕಾರಣಿ ಹೇಗೆ ಇರಬೇಕು ಎಂಬುದಕ್ಕೆ ಮಾದರಿ ಬಾಬೂಜಿ. ಅವರು ಮೇಲು-ಕೀಳೆಂಬ ತಾರತಮ್ಯ, ಜಾತಿಪದ್ಧತಿ, ಅಸ್ಪøಶ್ಯತೆಯನ್ನು ತೊಡೆದುಹಾಕಲು ಶ್ರಮಿಸುವ ಮೂಲಕ ಸಾಮಾಜಿಕ ಬದಲಾವಣೆಗಾಗಿ ಹೋರಾಡಿದವರು ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರುಎಡಿಸಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ದಲಿತ ಮುಖಂಡರಾದ ಎಸ್.ಜಯಣ್ಣ, ಬಿ.ರಾಜಪ್ಪ, ನಿರಂಜನಮೂರ್ತಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!