Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು ದಕ್ಷಿಣ ಆರ್‌ಟಿಒ ಕಚೇರಿ ಹಾಗೂ ಹಾವೇರಿಯಲ್ಲಿ ಏಕಕಾಲಕ್ಕೆ ಭರ್ಜರಿ ದಾಳಿ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ಮತ್ತೆ ಅಸ್ತ್ರ ಝಳಪಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾ ಆರ್‌ಟಿಒ ಕಚೇರಿ ಹಾಗೂ ಹಾವೇರಿ ಜಿಲ್ಲೆಯ ಅಕ್ರಮ ಮರಳು ಗಣಿಗಾರಿಕೆ ದಂಧೆಯ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿ ಶಾಕ್ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಆರ್‌ಟಿಒ ಕಚೇರಿ ಮೇಲೆ ದಾಳಿ: ಇಂಚಿಂಚೂ ತಪಾಸಣೆ! ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಎಸ್‌ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದ ತಂಡ ಬೆಂಗಳೂರು ದಕ್ಷಿಣ ಜಿಲ್ಲಾ ಆರ್‌ಟಿಒ ಕಚೇರಿ ಮೇಲೆ ಹಠಾತ್ ದಾಳಿ ನಡೆಸಿತು. ವಿಶೇಷವೆಂದರೆ, ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿಯ ಮೇಲೆ ನಡೆಯುತ್ತಿರುವ 3ನೇ ಲೋಕಾಯುಕ್ತ ದಾಳಿ ಇದಾಗಿದೆ.

ದಾಳಿ ವೇಳೆ ಬೆಳಕಿಗೆ ಬಂದ ಶಾಕಿಂಗ್ ಸತ್ಯಗಳು:
ತಾಯಿಯ ಬದಲು ಮಗಳ ದರ್ಬಾರ್: ಕಚೇರಿಯ ಅಧಿಕೃತ ಮಹಿಳಾ ಸಿಬ್ಬಂದಿಯೊಬ್ಬರ ಬದಲಿಗೆ, ಅವರ ಮಗಳೇ ಕಚೇರಿಗೆ ಬಂದು ಸಾರ್ವಜನಿಕರ ಕೆಲಸ ನಿರ್ವಹಿಸುತ್ತಿದ್ದ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ.

ಸ್ಮಾರ್ಟ್ ಕಾರ್ಡ್‌ಗಳ ದೂಳು ಮುಚ್ಚಿದ ಕಡತ: ವಾಹನ ಸವಾರರು ಅರ್ಜಿ ಸಲ್ಲಿಸಿ 3 ತಿಂಗಳು ಕಳೆದರೂ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸದೇ ಕಚೇರಿಯಲ್ಲೇ ಬಾಕಿ ಉಳಿಸಿಕೊಳ್ಳಲಾಗಿದೆ.

ಏಜೆಂಟ್‌ಗಳ ಹಾವಳಿ: ಮಧ್ಯವರ್ತಿಗಳು ಅಥವಾ ಏಜೆಂಟ್‌ಗಳ ಮೂಲಕ ಬಂದರೆ ಮಾತ್ರ ಇಲ್ಲಿ ಕೆಲಸಗಳಾಗುತ್ತವೆ ಎಂಬ ಆರೋಪಕ್ಕೆ ಪುಷ್ಟಿ ಸಿಕ್ಕಿದೆ. ಇತ್ತೀಚೆಗೆ ಕಚೇರಿಯಲ್ಲಿ ಏಜೆಂಟ್‌ಗಳ ನಡುವೆ ದೊಡ್ಡ ಹೊಡೆದಾಟ ನಡೆದಿದ್ದರೂ, ಪ್ರಾದೇಶಿಕ ಸಾರಿಗೆ ಆಯುಕ್ತರು ಯಾವುದೇ ದೂರು ನೀಡದೆ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಗುತ್ತಿಗೆ ನೌಕರರ ಹಾವಳಿ: ಕಚೇರಿಯಲ್ಲಿ ನಿಯಮಬಾಹಿರವಾಗಿ ಗುತ್ತಿಗೆ ನೌಕರರ ದರ್ಬಾರ್ ನಡೆಯುತ್ತಿದ್ದು, ಲೋಕಾಯುಕ್ತ ಎಸ್‌ಪಿ ಸ್ನೇಹಾ ಅವರ ಖಡಕ್ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಆರ್‌ಟಿಒ ಅಧಿಕಾರಿ ಟಿ.ಎ.ಸತೀಶ್ ಬಾಬು ತಬ್ಬಿಬ್ಬಾಗಿದ್ದಾರೆ.

ಹಾವೇರಿಯಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್: ಕೋಟ್ಯಂತರ ಮೌಲ್ಯದ ಸೊತ್ತು ವಶ
ಹಾವೇರಿ ಜಿಲ್ಲೆಯ ನದಿ ಪಾತ್ರಗಳಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ದಂಧೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ಸರಣಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಮರಳು ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಾಳಿ ನಡೆದ ಸ್ಥಳಗಳು: ರಾಣೇಬೆನ್ನೂರು ತಾಲ್ಲೂಕಿನ ನಿಟಪಳ್ಳಿ, ಚಂದಾಪುರ, ಬೆಲೂರು, ಐರಣಿ ಹರನಗಿರಿ, ಕೋಟಿಹಾಳ ಮತ್ತು ಚಿಕ್ಕಕುರವತ್ತಿ ಗ್ರಾಮ ಸೇರಿದಂತೆ ಒಟ್ಟು 8 ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ರೇಡ್ ನಡೆಸಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ವಿವರ:
12,779
ಮೆಟ್ರಿಕ್ ಟನ್ ಅಕ್ರಮ ಮರಳು ಭಂಡಾರ. ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 2 ಜೆಸಿಬಿ ಯಂತ್ರಗಳು. ನದಿಯಿಂದ ಮರಳು ಎತ್ತಲು ಬಳಸುತ್ತಿದ್ದ 4 ತೆಪ್ಪಗಳು.

ಲೋಕಾಯುಕ್ತರ ಈ ಅದಿರು ಮತ್ತು ಕಚೇರಿಗಳ ಮೇಲಿನ ಸರಣಿ ದಾಳಿಗಳು ಭ್ರಷ್ಟ ಅಧಿಕಾರಿಗಳು ಹಾಗೂ ಮರಳು ಮಾಫಿಯಾಗೆ ನಡುಕ ಹುಟ್ಟಿಸಿವೆ. ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!