Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಬಸವಣ್ಣನವರ ಚಿಂತನೆಗಳು ಸರ್ವ ಕಾಲಕ್ಕೂ ಮಾದರಿ-ಸೋಮಶೇಖರ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆಯಲ್ಲಿ ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿ, ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ ಎಂದು ದೇವಾಲಯದ ಮಂಡಳಿಯ ಸದಸ್ಯ  ಟಿ. ಪಿ. ಸೋಮಶೇಖರ್ ಹೇಳಿದರು.

ತೂಬಗೆರೆಯಲ್ಲಿ 200 ವರ್ಷಗಳಿರುವ ಇತಿಹಾಸ ಹೊಂದಿರುವ ಬಸವಣ್ಣ ದೇವಾಲಯದಲ್ಲಿ ಇಂದು ಬಸವಣ್ಣ ಜಯಂತಿಯನ್ನು ಅದ್ದೂರಿಯಾಗಿ ನೆರವೇರಿಸಿದರು, ಬೆಳಗಿನಿಂದಲೇ ವಿಶೇಷ ಪೂಜೆಗಳನ್ನು ಸಲ್ಲಿಸಿ , ಹೆಸರು ಬೆಳೆ, ಪಾನಕ ಮಜ್ಜಿಗೆಯನ್ನು ವಿತರಣೆ ಮಾಡಿದರು.

  ಇನ್ನು ಸಂಜೆ ಹೂವಿನ ಪಲ್ಲಕ್ಕಿ ರಥೋತ್ಸವದಲ್ಲಿ ಬಸವಣ್ಣವರ ವಿಗ್ರಹವನ್ನು ಮೆರವಣಿಗೆ ಮಾಡಲಾಗುತ್ತದೆ  ಹಾಗೂ ವೀರಗಾಸೆಡೊಳ್ಳು ಕುಣಿತ ಇನ್ನೂ ಅನೇಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಟಿ. ಪಿ.ಸೋಮಶೇಖರ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ‌ವಚನಗಳಲ್ಲಿ ಸಾಮಾಜಿಕ, ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು. ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯ ಬದ್ರಿನಾಥ್, ದೇವಾಲಯದ ಅರ್ಚಕ  ಸದಾನಂದ ಹಾಗು ಊರಿನ ಮುಖಂಡರುಗಳು ಹಾಜರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!