Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಚಿವ ಸಂಪುಟ ವಿಸ್ತರಣೆ ಆಗಲಿದೆ-ಯತೀಂದ್ರ

ಚಂದ್ರವಳ್ಳಿ ನ್ಯೂಸ್, ರಾಯಚೂರು:
ಸಚಿವ ಸಂಪುಟ ವಿಸ್ತರಣೆ ಆಗಲಿದೆ ಅಂತ ಹಿರಿಯ ಸಚಿವರುಗಳು ಸೇರಿದಂತೆ ಮುಖ್ಯಮಂತ್ರಿ ಅವರು ಸೂಚ್ಯವಾಗಿ ತಿಳಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು
, ಡಿಸೆಂಬರ್​ ತಿಂಗಳಲ್ಲಿ ಬಹುಶಃ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.

ಸಿಎಂ ಸಚಿವರ ಔತಣಕೂಟದ ನೆಪದಲ್ಲಿ ಬಿಹಾರಕ್ಕೆ ಯಾರ‍್ಯಾರು ಎಷ್ಟೆಷ್ಟು ಕೊಡಬೇಕು ಅಂತ ನಿರ್ಧರಿಸಲು ಕರೆದಿದ್ದಾರೆ ಎಂಬ ವಿಪಕ್ಷ ನಾಯಕ ಆರ್‌. ಅಶೋಕ್​ ಅವರ ಹೇಳಿಕೆ ಕುರಿತು ಟೀಕಿಸಿದ ಮಾತನಾಡಿದ ಅವರು ನಮ್ಮ ಪಕ್ಷದಲ್ಲಿ ನಡೆಯೋದು ಅವರಿಗೆ ಹೇಗ್ರಿ ಗೊತ್ತಾಗುತ್ತೆ. ಅವರು ಏನಾದ್ರು ಹೇಳ್ತಾರೆ, ಅವರು ಹೇಳೋದು ನಿಜ ಆಗುತ್ತಾ ಎಂದು ಕಿಡಿಕಾರಿದರು.


ಸಿಎಂ ಅವರು ಆಗಾಗ್ಗೆ ಔತಣಕೂಟ ಆಯೋಜಿಸುತ್ತಿರುತ್ತಾರೆ. ಎಷ್ಟೋ ಬಾರಿ ಸಿಎಲ್​​ಪಿ ಮೀಟಿಂಗ್ ವೇಳೆ ಕರೆದಿದ್ದಾರೆ, ಮನೆಗೂ ಕರೆದಿದ್ದಾರೆ. ಶಾಸಕರು, ಸಚಿವರನ್ನು ಕರೆದಿದ್ದಾರೆ. ಅದರಲ್ಲಿ ಬಿಹಾರ ಚುನಾವಣೆ ಕೂಡ ಚರ್ಚೆ ಆಗಬಹುದು. ಅದರ ಅರ್ಥ ದುಡ್ಡಿನ ವಿಚಾರ ಅಂತಲ್ಲ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಏನಿದೆ ಹಾಗೂ ಅವರವರ ಇಲಾಖೆಗಳು ಹೇಗೆ ನಡೀತಿವೆ. ಸಮಸ್ಯೆ ಇದೆಯಾ ಅನ್ನೋದನ್ನು ಕೇಳಿ, ಬಿಹಾರ ಎಲೆಕ್ಷನ್ ಬಗ್ಗೆಯೂ ಮಾತನಾಡಿರಬಹುದು ಎಂದು ಯತೀಂದ್ರ ಹೇಳಿದರು.

ರಾಜ್ಯದಲ್ಲಿ ನವೆಂಬರ್ ತಿಂಗಳ ನಂತರ ರಾಜಕೀಯ ಕ್ರಾಂತಿಯಾಗಿ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಶಾಸಕರ ಹೇಳಿಕೆ ಕುರಿತು ಮಾತನಾಡಿದ ಅವರು, ನಿಜವಾಗಿ ಏನು ಮಾತುಕತೆ ನಡೆದಿದೆ ಎಂಬುದು ಯಾರಿಗೂ ತಿಳಿದಿಲ್ಲ. ಎಲ್ಲರೂ ಊಹಾಪೋಹದ ಆಧಾರದಲ್ಲಿ ಹೇಳುತ್ತಾರೆ. ನನಗೆ ಗೊತ್ತಿರೋ ಹಾಗೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಪದವಿಗೆ ಅರ್ಹತೆ ಇರೋರು ಪಕ್ಷದಲ್ಲಿ ಬಹಳಷ್ಟು ಜನ ಇದ್ದಾರೆ. ಹೀಗಾಗಿ ಆಗಾಗ ಕ್ಲೇಮ್ ಮಾಡುತ್ತಾರೆ, ಅದರಲ್ಲೇನು ತಪ್ಪಿಲ್ಲ ಎಂದು ಯತೀಂದ್ರ ಹೇಳಿದರು.

ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ವಿರುದ್ಧ ಕಮಿಷನ್ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ಈ ಪ್ರತಾಪ್ ಸಿಂಹ ಯಾರ್ರೀ, ಆತ ರಾಜಕೀಯದಲ್ಲಿ ಪ್ರಸಿದ್ಧಿ ಆಗಿರಬೇಕು. ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ಲದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಅವರ ಪಕ್ಷವೇ ಅವರನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ನಾವ್ಯಾಕೆ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಯತೀಂದ್ರ ಟಾಂಗ್ ನೀಡಿದರು.

ಎಲ್ಲಿವರೆಗೂ ಸಿದ್ದರಾಮಯ್ಯ ಅವರು ಸಿಎಂ ಆಗಿರ್ತಾರೋ, ಅಲ್ಲಿವರೆಗೂ ಅವರ ಸಂಪುಟದಲ್ಲಿ ನನ್ನ ಮಂತ್ರಿ ಮಾಡಲ್ಲ ಅಂತ ಹೇಳಿದ್ದಾರೆ. ಹಾಗಾಗಿ ನನ್ನ ಮಂತ್ರಿ ಸ್ಥಾನದ ಬಗ್ಗೆ ಪ್ರಶ್ನೆಯೇ ಬರಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದ ರಂಗಮಂದಿರಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ತೆರಳುವ ವೇಳೆ ಬೃಹತ್ ಮೆರವಣಿಗೆ ಆಯೋಜಿಸಲಾಗಿತ್ತು. ಈ ಮೆರವಣಿಗೆಯಲ್ಲಿ ವಿಧಾನ ಪರಿಷತ್​ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಅಭಿಮಾನಿಗಳು ಸಂಭ್ರಮಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!