Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅನೇಕ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಪಕ್ಷವನ್ನು ಸಂಘಟಿಸುವುದು ಸಂಘಟನ್ ಸೃಜನ್ ಅಭಿಯಾನದ ಉದ್ದೇಶ ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಜಿಲ್ಲಾ ವೀಕ್ಷಕ ರಿಪಿನ್‍ಬೊಹರಾ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ರಾಹುಲ್‍ಗಾಂಧಿರವರ ಭಾರತ್ ಜೋಡೊ ಯಾತ್ರೆಯ ಉದ್ದೇಶ. ದೇಶದ ಪ್ರತಿ ಪ್ರಜೆಗೆ ತಲುಪಿಸುವುದು ಅಭಿಯಾನದ ಗುರಿ. 2025ರಲ್ಲಿ ಆರಂಭಗೊಂಡ ಈ ಅಭಿಯಾನ 22 ರಾಜ್ಯಗಳಲ್ಲಿದೆ. 2027 ಕ್ಕೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಮುಂಬರುವ ವಿಧಾನಸಭೆ, ಪಾರ್ಲಿಮೆಂಟ್ ಚುನಾವಣೆ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅನೇಕ ರಾಜಕೀಯ ಸವಾಲುಗಳನ್ನು ಪಕ್ಷ ಎದುರಿಸುತ್ತಿದೆ. ಆರು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಶಾಸಕರು, ಮಾಜಿ ಶಾಸಕರು, ಎಂಎಲ್‍ಸಿ. ಎಕ್ಸ್ ಎಂ.ಪಿ.ಗಳ ಜೊತೆ ಚರ್ಚಿಸಿ ನಂತರ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಈ ಸಂಬಂಧ ಆರು ಹೆಸರುಗಳನ್ನು ಎಐಸಿಸಿ. ಹಾಗೂ ಕೆಪಿಸಿಸಿ. ಕಳಿಸಲಾಗುವುದು. ಧರ್ಮ ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಕೋಮುವಾದಿ ಬಿಜೆಪಿ.ಯನ್ನು ಕಿತ್ತೊಗೆದು ಮುಂದೆ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರ ತರಬೇಕು. ಶೋಷಿತರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಬಿಜೆಪಿ. ತಾರತಮ್ಯವೆಸಗುತ್ತಿದೆ. ಕಾಂಗ್ರೆಸ್‍ನಿಂದ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಲಿದೆ ಎಂದರು.

ಕೆಪಿಸಿಸಿ. ಉಪಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಮಾತನಾಡಿ ಸಂವಿಧಾನ ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ರಾಹುಲ್‍ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದರು. ಈಗ ರಾಷ್ಟ್ರ ವ್ಯಾಪಿ ಸಂಘಟನ್ ಸೃಜನ್ ಅಭಿಯಾನ ಹಮ್ಮಿಕೊಂಡಿದೆ. ಪ್ರದಕ್ಷಿಣೆ ರಾಜಕಾರಣವನ್ನು ದೂರವಿಟ್ಟು ಪಕ್ಷದ ನೈಜ ಕಾರ್ಯಕರ್ತರು ಹಾಗೂ ಜನಸಾಮಾನ್ಯರಿಂದ ಮಾಹಿತಿ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಆರು ಜನರ ಹೆಸರನ್ನು ಆಯ್ಕೆ ಮಾಡಿ ಎಐಸಿಸಿ.ಗೆ ಕಳಿಸಲಾಗುವುದು.

ಅಪ್ಪರ್‍ಭದ್ರಾ, ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಅನುದಾನದ ಕೊರತೆ, ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ಪಕ್ಷ ಸಂಘಟಿಸುವ ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕಾಂಗ್ರೆಸ್ ಗೆಲ್ಲಬೇಕೆಂದರು.

ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಮುರಳಿಧರ ಹಾಲಪ್ಪ ಮಾತನಾಡಿ ಕಾರ್ಯಕರ್ತರು ಹಾಗೂ ಮುಖಂಡರುಗಳಿಂದ ಮಾಹಿತಿ ಕಲೆ ಹಾಕಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ರಾಜ್ಯದಲ್ಲಿ

ನಲವತ್ತು ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಪಕ್ಷಕ್ಕೆ ಶಕ್ತಿ ತುಂಬುವುದು ಸಂಘಟನ್ ಸೃಜನ್ ಅಭಿಯಾನದ ಉದ್ದೇಶ ಎಂದು ಹೇಳಿದರು.

ಸೈಯದ್ ಅಹಮದ್ ಮಾತನಾಡಿ ಹೊಸ ನಾಯಕತ್ವ ಸಂಘಟನ್ ಸೃಜನ್ ಅಭಿಯಾನದ ಗುರಿ. ಪಕ್ಷಕ್ಕೆ ಕೆಲಸ ಮಾಡುವ ನೈಜ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಇದರಿಂದ ಪಕ್ಷಕ್ಕೆ ಶಕ್ತಿ ತುಂಬಿದಂತಾಗುತ್ತದೆಂದು ನುಡಿದರು.

ಸೌಗಂಧಿಕ ರಘುನಾಥ್ ಮಾತನಾಡುತ್ತ ಚಿತ್ರದುರ್ಗಕ್ಕೆ ಐದು ಮಂದಿ ವೀಕ್ಷಕರನ್ನು ಎಐಸಿಸಿ ಮತ್ತು ಕೆಪಿಸಿಸಿಯಿಂದ ನೇಮಿಸಿದ್ದು, ಆರು ಹೆಸರುಗಳನ್ನು ಸಂಗ್ರಹಿಸಿ ಅದರಲ್ಲಿ ಒಬ್ಬರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೂರಿಸಲಾಗುವುದು. ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿಯಿರುವುದರಿಂದ ಮಹಿಳೆಯರು ಜಿಲ್ಲಾಧ್ಯಕ್ಷ ಸ್ಥಾನಕೆ ಪೈಪೋಟಿ ನೀಡಬಹುದೆಂದು ತಿಳಿಸಿದರು.

ಎನ್.ರಮೇಶ್ ಮಾತನಾಡಿ ಸಂಘಟನ್ ಸೃಜನ್ ಅಭಿಯಾನ ಪಕ್ಷಕ್ಕೆ ಅತ್ಯಂತ ಮಹತ್ವದ್ದು, ಮುಂಬರುವ ವಿಧಾನಸಭೆ, ಪಾರ್ಲಿಮೆಂಟ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲಾಗುವುದು. ನೀಟ್ ವಿರುದ್ದ ರಾಹುಲ್‍ಗಾಂಧಿ ವಿದ್ಯಾರ್ಥಿಗಳಿಗೆ ಬೆಂಬಲಿಸಿ ಹೋರಾಟಕ್ಕೆ ಇಳಿದ ಪರಿಣಾಮ ಕೇಂದ್ರ ಸಚಿವರ ತಲೆದಂಡವಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರಾದ ಡಿ.ಟಿ.ವೆಂಕಟೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ನ್ಯಾಯವಾದಿ ಜಿ.ಎಸ್.ಕುಮಾರ್‍ಗೌಡ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಅಲ್ಲಾಭಕ್ಷಿ, ಗ್ಯಾರೆಂಟಿ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್‍ರಾಮನಾಯ್ಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅನಂತ್, ರುದ್ರಾಣಿ ಗಂಗಾಧರ್, ಮಧುಪಾಲೆಗೌಡ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!