Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸಿಗರು ನಿಯತ್ತಿನ ನಾಯಿಗಳು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು. ನಾಯಿಗಳ ಸ್ವಭಾವ ಋಣ ತೀರಿಸೋದು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಸಚಿವ ಮಹಾದೇವಪ್ಪ ಅವರಿಗೆ ತಿರುಗೇಟು ನೀಡಿದರು.


ನಾಯಕತ್ವ ಬದಲಾವಣೆ ಬಗ್ಗೆ ಶಾಸಕರ ಹೇಳಿಕೆ ಕುರಿತು ಸಚಿವ‌ಹೆಚ್.ಸಿ.ಮಹಾದೇವಪ್ಪ, ಬೀದಿ ನಾಯಿಗಳ ಕುರಿತಂತೆ ಹೈಕೋರ್ಟ್ ಸೂಚನೆ ಪ್ರಸ್ತಾಪಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೀದಿನಾಯಿಗಳಿಗೆ ಊಟ ಹಾಕೋದು, ನನ್ನನ್ನು ಕಾಯುತ್ತೆ ಅಂತ. ನಾಯಿಗಿರುವ ನಿಯತ್ತು, ಮನುಷ್ಯನಿಗಿಲ್ಲ‌ಎಂಬ ಸಾಕಷ್ಟು ನಾನ್ನುಡಿಗಳಿವೆ. ಯಾವತ್ತೂ ಕೂಡ ಋಣ ಇಟ್ಕೊಂಡು ತೀರಿಸುವುದು ನಾಯಿಗಳು ಎಂದು ಸುರೇಶ್ ಕಟು ಶಬ್ದಗಳಲ್ಲಿ ಟೀಕಿಸಿದರು.

ಶಾಸಕರ ವಿದೇಶಿ ಪ್ರವಾಸ ಕುರಿತು ಮಾತನಾಡಿದ ಸುರೇಶ್, ಶಾಸಕರಾದವರನ್ನು ಪ್ರವಾಸಕ್ಕೆ ಕರ್ಕೊಂಡು ಹೋಗಿರುತ್ತಾರೆ‌. ಕೆಲವರು ದೇಶ ನೋಡಲು ಹೋಗಿರುತ್ತಾರೆ. ಕೆಲವರು ವಿಶ್ವಾಸಕ್ಕೆ ಹೋಗಿರುತ್ತಾರೆ. ನೀವೂ ಶಾಸಕರಾದ್ರೆ ವಿದೇಶ ಪ್ರವಾಸಕ್ಕೆ ಕರ್ಕೊಂಡು ಹೋಗ್ತಾರೆ. ವಿದೇಶ ಪ್ರವಾಸದಿಂದ ಮೈಂಡ್ ಪ್ರೆಶ್ ಆಗುತ್ತದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಉತ್ಪನ್ನಕ್ಕೆ ಅಪಪ್ರಚಾರ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿ. ನಂದಿನಿ ಉತ್ಪಾದನೆಯಲ್ಲಿ ಗುಣಮಟ್ಟವಿದೆ. ಅಲ್ಲಿ ಕಲಬೆರಕೆ ಇರಲ್ಲ. ಕೆಲವು ಕಿಡಿಗೇಡಿಗಳು ಅಪಪ್ರಚಾರ ಮಾಡ್ತಾರೆ. ಅದರಲ್ಲಿ ಕೆಲವು ಖಾಸಗಿಯವರೂ ಇರಬಹುದು‌. ನಂದಿನಿ ಗುಣಮಟ್ಟದಲ್ಲಿ ಹಿಂದೆ ಅನ್ನೋದು ಸರಿಯಲ್ಲ‌. ಮುಂದಕ್ಕೆ ಕೂಡ ಅದನ್ನು ಮುಂದುವರಿಸುತ್ತೇವೆ. ವ್ಯಾಪಾರ ಅಂದ್ರೆ ಪೈಪೋಟಿ ಇದ್ದೇ ಇರುತ್ತೆ. ಇದೆಲ್ಲ ಸಹಜ ಎಂದು ಸುರೇಶ್ ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ ಅವರ ದಲಿತ ಸಿಎಂ ಕುರಿತ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಹೆಚ್.ಸಿ.ಮಹದೇವಪ್ಪನವರು ಅವರ ಅಭಿಪ್ರಾಯ ಹೇಳಿದ್ದಾರೆ. ಮಹದೇವಪ್ಪ ಸಮರ್ಥರು. ಯಾವುದೇ ಜವಾಬ್ದಾರಿ ಕೊಟ್ಟರೂ ತೆಗೆದುಕೊಳ್ಳುವುದಕ್ಕೆ ಅವರಿಗೆ ಸಾಮರ್ಥ್ಯವಿದೆ. ಅದಕ್ಕೆ ಅವರು ಹೇಳಿದ್ದಾರೆ. ಜನಸಮುದಾಯದಲ್ಲಿ ಕೆಲವರು ಅವರವರ ನಾಯಕರು ಎಂದು ಆರಿಸಿಕೊಳ್ಳುತ್ತಾರೆ. ಜನ ಅವರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ.

ಅದನ್ನು ತಪ್ಪು ಅಂತಾ ನಾವು ಹೇಳುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಅದು. ನಮ್ಮಲ್ಲಿ ಒಂದು ವ್ಯವಸ್ಥೆ ಇದೆ, ಹೈಕಮಾಂಡ್ ಇದೆ. ಹೈಕಮಾಂಡ್ ಆ ಬಗ್ಗೆ ತೀರ್ಮಾನ ಮಾಡ್ತಾರೆ‌. ಯಾರೋ ಹತ್ತು ಜನ ನನ್ನ ಪರವಾಗಿ ಜೈಕಾರ ಹಾಕಿದ್ರೆ ಆಗಲ್ಲ. ಆದ್ರೆ ಹೈಕಮಾಂಡ್‌ನವರು ಅದನ್ನೆಲ್ಲಾ ನೋಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈಗ ಆ ಸಂದರ್ಭ ಇದೆ ಅಂತಾ ನನಗೆ ಅನಿಸಲ್ಲ. ಈಗ ದಲಿತ ಸಿ.ಎಂ ಎಂಬ ಚರ್ಚೆಯೇ ಇಲ್ಲ. ನಾವು ಆಡಳಿತದ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!