Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಉಳಿಸಿ ಬೆಳೆಸಬೇಕಿದ-ಡಿಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್‌.ಸಿ ಮಹದೇವಪ್ಪ, ಕೆ.ಹೆಚ್‌ಮುನಿಯಪ್ಪ ಹಾಗೂ ಶಾಸಕ ಹ್ಯಾರಿಸ್‌ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭಾಗವಹಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ದಿನಾಚರಣೆಯೊಂದು ವಿಶೇಷವಾದ ಕಾರ್ಯಕ್ರಮವಾಗಿದೆ. ನಾವೆಲ್ಲರೂ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ನಮ್ಮದು ಇಡೀ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಬಸವಣ್ಣನವರ ನಾಡಿನಲ್ಲಿ ನಾವಿದ್ದೇವೆ. ಬಸವಣ್ಣನವರು ಅನುಭವ ಮಂಟಪ ಮಾಡಿ  ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು ಎಂಬ ವ್ಯವಸ್ಥೆಯನ್ನು ಮಾಡಿದರು.

 ಬ್ಯಾಲೆಟ್‌ಎನ್ನುವುದು ಬುಲೆಟ್‌ಗಿಂತ ಶಕ್ತಿಶಾಲಿ.  ನಾವೆಲ್ಲರೂ ಬ್ಯಾಲೆಟ್‌ಕಾಲಘಟ್ಟದಲ್ಲೇ ಹುಟ್ಟಿದವರು. ಬ್ಯಾಲೆಟ್‌ನಮಗೆ ಶಕ್ತಿ ಕೊಟ್ಟಿದೆ. ಜನರು ವೋಟ್‌ಹಾಕಿದ್ದಕ್ಕೆ ನಾವು ಶಾಸಕರು, ಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಾಗಿ ನಿಮ್ಮ ಮುಂದೆ ಇದ್ದೇವೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

ಪಂಚಾಯತ್‌ಯಿಂದ ಪಾರ್ಲಿಮೆಂಟ್‌ವರೆಗೆ ನಾಯಕರನ್ನು ಬೆಳೆಸುವುದು ನಮ್ಮ ಮೊದಲ ಕರ್ತವ್ಯವಾಗಿದೆ. ನಾಯಕರನ್ನು ಬೆಳೆಸದಿದ್ದರೆ ನಾವು ಯಶಸ್ಸನ್ನು ಕಾಣಲಿಕ್ಕೆ ಸಾಧ್ಯವಿಲ್ಲ. ನಾನು 7ನೇ ಕ್ಲಾಸ್‌ಅಲ್ಲೇ ಚುನಾವಣೆಗೆ ನಿಂತಿದ್ದೆ. ಆಗ ನನ್ನ ಚಿಹ್ನೆ ನಕ್ಷತ್ರವಾಗಿತ್ತು.  ಅಲ್ಲಿಂದ ಇಲ್ಲಿವರೆಗೆ ನಾನು ಬೆಳೆದಿದ್ದೇನೆ.

ಯುವ ನಾಯಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಮತದಾನದ ಶಕ್ತಿ ತಿಳಿಸಲು ಪ್ರಜಾಪ್ರಭುತ್ವ ದಿನಾಚರಣೆಯನ್ನು ನಾವು ಹಮ್ಮಿಕೊಂಡಿದ್ದೇವೆ.  ಬ್ಯಾಲೆಟ್‌ನಾಯಕರನ್ನು ತಯಾರು ಮಾಡುತ್ತದೆ. 18 ವರ್ಷಕ್ಕೆ ಮತದಾನದ ಹಕ್ಕನ್ನು ನೀಡಿದ್ದು ರಾಜೀವ್‌ಗಾಂಧಿಯವರು.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಪ್ರಜಾಪ್ರಭುತ್ವದಲ್ಲಿ ಅತ್ಯಮೂಲ್ಯವಾಗಿವೆ. ನಿಮ್ಮ ಆಶೀರ್ವಾದದಿಂದ ನಾವು 135 ಸೀಟ್ ಗೆದ್ದಿದ್ದು, ಈ ಮೂಲಕ ನೀವು ದೇಶಕ್ಕೆ ದೊಡ್ಡ ಸಂದೇಶ ನೀಡಿದ್ದೀರಿ.  ಈ ಪ್ರಜಾಪ್ರಭುತ್ವವನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕಿದೆ ಎಂದು ಡಿಸಿಎಂ ಶಿವಕುಮಾರ್ ಕರೆ ನೀಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!