Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭಗವಂತನಿಗೆ ಸಮರ್ಪಿತವಾದ- ಅಧಿಕ ಫಲ ಪಡೆಯುವ ಅಧಿಕ ಮಾಸ: ವೈ ರಾಜಾರಾಮ್

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಜ್ಯೇಷ್ಠ ಅಧಿಕ ಮಾಸವು ಭಗವಂತನಿಗೆ ‌ಸಮರ್ಪಿತವಾದ-ಆಧ್ಯಾತ್ಮಿಕ ಸಾಧನೆಗಳಿಗೆ ಅಧಿಕವಾದ ಫಲ ಪಡೆಯುವ ಕಾಲ ಎಂದು ಚಳ್ಳಕೆರೆಯ ನರಹರಿನಗರದ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ಡಾ.ವೈ ರಾಜಾರಾಮ್ ಗುರುಗಳು ತಿಳಿಸಿದರು.

ನಗರದ ತ್ಯಾಗರಾಜನಗರದ ಸದ್ಭಕ್ತರಾದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ "ಅಧಿಕ ಮಾಸ"ದ ಪ್ರಯುಕ್ತ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಭಜನೆ ನಡೆಸಿಕೊಟ್ಟ ಅವರು "ಅಧಿಕ ಮಾಸದ ವೈಶಿಷ್ಟ್ಯ"ಎಂಬ ವಿಷಯವಾಗಿ ವಿಶೇಷ ಪ್ರವಚನ ನೀಡುತ್ತಾ ಮಾತನಾಡುತ್ತಿದ್ದರು.

ಅಧಿಕ ಮಾಸವು 33 ದಿನಗಳ ಕಾಲ ಇರುತ್ತದೆ. ಈ ಮಾಸದಲ್ಲಿ ಹೆಚ್ಚು ಹೆಚ್ಚು ಯಾಜ್ಞ, ದಾನ, ತಪಸ್ಸು, ಸತ್ಕರ್ಮಗಳನ್ನು ಮಾಡುವುದರಿಂದ ಅಧಿಕವಾದ ಫಲ ಪಡೆಯಬಹುದು ಎಂದು ತಿಳಿಸಿದ ಅವರು "ವಟ ಸಾವಿತ್ರಿ ಸತ್ಯವಾನ್" ಕಥೆಯನ್ನು ಹೇಳಿ ಆಕೆಯ ಪಾತಿವ್ರತ್ಯದ ಮಹಿಮೆಯನ್ನು ವಿವರಿಸಿದರು.   

                  ಅಧಿಕ ಮಾಸದ ಪ್ರಯುಕ್ತ ಸತ್ಸಂಗ ಕೇಂದ್ರದ ಸದ್ಭಕ್ತರಿಂದ ಸಾಮೂಹಿಕ ಶ್ರೀವಿಷ್ಣು ಸಹಸ್ರನಾಮ ಪಾರಾಯಣ, ಸುನೀತಾ ಗೋಪಾಲಕೃಷ್ಣ, ಮಾಕಂಸ್ ಲಕ್ಷ್ಮೀ ಬಾಲಾಜೀ, ಗೀತಾ ಪ್ರಕಾಶ್, ವನಜಾಕ್ಷಿ ಮೋಹನ್, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ನಾಗರತ್ನಮ್ಮ ಅವರ ವಿಶೇಷ ಭಜನೆಗೆ ಶ್ರೀನಿವಾಸ ಅವರು ಡೊಲಕ್ ಸಾಥ್ ನೀಡಿದರು.

ಕುಮಾರಿ ಆರ್ ಕೀರ್ತನ ಅವರಿಂದ ಶ್ರೀಮದ್ ಭಗವದ್ಗೀತೆಯ ಜ್ಞಾನಯೋಗದ ಮೊದಲ ಹತ್ತು ಶ್ಲೋಕಗಳ ಪಠಣ ನಡೆದರೆ ಸತ್ಸಂಗದ  ಸ್ವಾಗತ-ಪರಿಚಯ ಶೋಭಾ ರಮೇಶ್ ನಡೆಸಿಕೊಟ್ಟರೆ, ಯತೀಶ್ ಎಂ ಸಿದ್ದಾಪುರ ನಿರೂಪಿಸಿದರು. ವಂದನಾರ್ಪಣೆಯನ್ನು ಗೀತಾ ಪ್ರಕಾಶ್ ಮಾಡಿದರು.

ಸತ್ಸಂಗ ಸಭೆಯಲ್ಲಿ ಎಚ್ ಲಕ್ಷ್ಮೀದೇವಮ್ಮ, ನಂಜಮ್ಮ, ಜಯಲಕ್ಷ್ಮೀ ತಿಪ್ಪಾರೆಡ್ಡಿ , ಗೀತಾ ಸತ್ಯನಾರಾಯಣರೆಡ್ಡಿ, ಸರಸ್ವತಮ್ಮ , ಗೋವಿಂದರಾಜು, ಹೃತಿಕ್, ತಿಪ್ಪಮ್ಮ , ಜಯಮ್ಮ ,ಶುಭಾ, ಪ್ರೇಮಾ, ಅನುಸೂಯ , ರಾಘವೇಂದ್ರ, ಜಿ ಯಶೋಧಾ, ಶಾಂತಮ್ಮ,ಎಂ ಲಕ್ಷ್ಮೀದೇವಮ್ಮ, ಕವಿತಾ, ಅಂಬುಜಾ, ಸುನೀತಾ, ಸರಸ್ವತಿ ರಾಜು, ವಿಶಾಲಾಕ್ಷಿ, ಸೌಮ್ಯ, ಸಂಗೀತ, ವಿಜಯಾಗುರು, ಪ್ರೇಮಲೀಲಾ, ದ್ರಾಕ್ಷಾಯಣಿ, ಮಮತಾ, ಗೀತಾ ವೆಂಕಟೇಶ್, ಅಂಬಿಕಾ ಪರಮೇಶ್ವರ್, ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಸದ್ಭಕ್ತರು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!