LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ 

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ಕೊನೆಗೂ ವಿಸ್ತರಣೆಯಾಗಿದ್ದು
, 20 ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಿದೆ.

ಹೈಕಮಾಂಡ್ ಹೊಸ ಸಮೀಕರಣಗಳೊಂದಿಗೆ ಸಚಿವ ಸ್ಥಾನ ಭರ್ತಿ ಮಾಡಿದ್ದು, ನೂತನ ಸಚಿವರ ಪಟ್ಟಿ ಹೊರಬಿದ್ದ ತಕ್ಷಣವೇ ಕಾಂಗ್ರೆಸ್‌ನಲ್ಲಿ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದೆ. 

ಸಚಿವ ಸ್ಥಾನದ ತೀವ್ರ ನಿರೀಕ್ಷೆಯಲ್ಲಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಕೊನೆ ಗಳಿಗೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಇದರಿಂದ ತೀವ್ರ ಅಸಮಾಧಾನಗೊಂಡಿರುವ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 ಅಷ್ಟೇ ಅಲ್ಲದೆ, ತಮ್ಮ ಬಳಿಯಿರುವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದಾಗಿ ಕೆಲ ಶಾಸಕರು ಕೂಡ ರಾಜೀನಾಮೆ ಹಾದಿ ತುಳಿಯುವ ಸುಳಿವು ನೀಡಿದ್ದಾರೆ. 

ಎಂ.ಬಿ. ಪಾಟೀಲ್ ವಿರುದ್ಧ ಬೆಂಬಲಿಗರ ಆರೋಪ:  ಕೆಲವು ದಿನಗಳ ಹಿಂದಷ್ಟೇ ಯಶವಂತರಾಯಗೌಡ ಪಾಟೀಲ್ ಅವರ ಬೆಂಬಲಿಗರು ಬೆಂಗಳೂರಿನ ಸಿಎಂ ನಿವಾಸದ ಹೊರಗೆ ಬೃಹತ್ ಪ್ರತಿಭಟನೆ ನಡೆಸಿದ್ದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ವಿಜಯಪುರ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಯಶವಂತರಾಯಗೌಡರು ಸಚಿವರಾದರೆ ತಮ್ಮ ರಾಜಕೀಯ ಪ್ರಾಮುಖ್ಯತೆ ಕಡಿಮೆಯಾಗಬಹುದು ಎಂಬ ಭಯದಿಂದ ಎಂ.ಬಿ. ಪಾಟೀಲ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೆಂಬಲಿಗರು ಗಂಭೀರ ಆರೋಪ ಮಾಡಿದ್ದರು.  ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂಬ ಬೆಂಬಲಿಗರ ಹಾಗೂ ಶಾಸಕರ ಆಗ್ರಹಕ್ಕೆ ಹೈಕಮಾಂಡ್ ಸೊಪ್ಪು ಹಾಕದಿರುವುದು ಈಗ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಮಟ್ಟದ ಬಂಡಾಯದ ಸದ್ದು ಉಂಟುಮಾಡಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಳಿ ಉತ್ಪನ್ನ ರಫ್ತುಗೆ ಸರ್ಕಾರ ಉತ್ತೇಜನ:ಆಯುಕ್ತ ಎ.ಬಿ. ಬಸವರಾಜು ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತಕಾಮನ್‌ವೆಲ್ತ್‌ಕ್ರೀಡಾಕೂಟದಲ್ಲಿ ಭಾರತಕ್ಕೆ 39 ಪದಕ: ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಕಾವೇರಿ ವಿಚಾರದಲ್ಲಿ ಸರ್ಕಾರದ ವಿಫಲತೆ: ಮಳೆಯಿಂದಷ್ಟೇ ರೈತರಿಗೆ ಆಸರೆ—ವಿಪಕ್ಷ ನಾಯಕ ಆರ್‌‌. ಅಶೋಕ್ ವಾಗ್ದಾಳಿನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ವೈಫಲ್ಯ: ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಸಂಪುಟ ವಿಸ್ತರಣೆ ಹೈ ಡ್ರಾಮಾ: ಕೊನೆ ಕ್ಷಣದಲ್ಲಿ ಮಂಕಾಳಗೆ ಕೊಕ್, ಎಸ್.ಎಸ್.ಎಂಗೆ ಒಲಿದ ಸಚಿವ ಸ್ಥಾನ!ಕೈ ಸಂಪುಟ ಪುನಾರಚನೆ ಬಿರುಗಾಳಿ: ಸಿದ್ದರಾಮಯ್ಯ ಆಪ್ತರಾಗಿದ್ದ 12 ಹಿರಿಯ ನಾಯಕರಿಗೆ ಕೊಕ್!ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ಬಿಸಿ: ಜಯಚಂದ್ರ ಬೆಂಬಲಿಗರು, ಕುಂಚಿಟಿಗ ಸಮಾಜ ಆಕ್ರೋಶ – ರಾಜೀನಾಮೆಗೆ ಜಯಚಂದ್ರ ಸಿದ್ಧ?ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ