Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಡಿಕೆ ಬ್ರದರ್ಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮತ ಕೇಳುವ ನೈತಿಕತೆ ಇಲ್ಲ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ತಾಲ್ಲೂಕಿಗೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಏನು ಮಾಡಿದ್ದಾರೆ
? ಎಂದು ಪ್ರಶ್ನಿಸುತ್ತಿರುವ ಡಿ.ಕೆ ಬ್ರದರ್ಸ್‌ ಗೆ ಜೆಡಿಎಸ್ ಅಭಿವೃದ್ಧಿ ಕಾರ್ಯಗಳ ಪಟ್ಟಿ ಮಾಡಿ ಟ್ವೀಟ್ ಮಾಡಿ ಉತ್ತರ ನೀಡಿದೆ.

 ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸುಸಜ್ಜಿತ ರಸ್ತೆಗಳು ಹೆಚ್.ಡಿ.ಕುಮಾರಸ್ವಾಮಿ ಅವರ ಕೊಡಗೆಗಳು. ಕಾಂಗ್ರೆಸ್ ನಾಯಕರು ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಡಾಂಬರ್ ರಸ್ತೆಯಲ್ಲಿ ಪ್ರಚಾರಕ್ಕೆ ಹೋಗುತ್ತಿದ್ದಾರೆಂದರೆ, ಅದು ಕುಮಾರಸ್ವಾಮಿ ಅವಧಿಯಲ್ಲಿ ಆದ ಕೆಲಸಗಳು. 

ತಾಲ್ಲೂಕಿನ ಗ್ರಾಮೀಣ ಸಂಪರ್ಕ ರಸ್ತೆಗಳ ಸಮಗ್ರ ಅಭಿವೃದ್ಧಿ ಹಾಗೂ  ಹಳ್ಳಿಗಳಲ್ಲಿ ಕಾಂಕ್ರೀಟ್ ರಸ್ತೆಗಳು ಮತ್ತು ಚರಂಡಿ ವ್ಯವಸ್ಥೆ. ಮೈಲಾನಾಯಕನ ಹೊಸಹಳ್ಳಿ, ಮಾಕಳಿ, ಚಕ್ಕರೆ, ಇಗ್ಗಲೂರು ಗ್ರಾಮಗಳ ಶಾಲಾ-ಕಾಲೇಜುಗಳಿಗೆ ಸುಸಜ್ಜಿತ ಕಟ್ಟಡಗಳಿಗೆ 29 ಕೋಟಿ ಅನುದಾನ.

ಚನ್ನಪಟ್ಟಣಕ್ಕೆ ಯುಜಿಡಿ ಮಂಜೂರಾತಿ ಸೇರಿದಂತೆ ಅದೆಷ್ಟೋ ಕೆಲಸಗಳು ಕುಮಾರಸ್ವಾಮಿ ಅವರ ಕೊಡುಗೆಗಳು. ಇಗ್ಗಲೂರು ಜಲಾಶಯ, ಶಾಶ್ವತ ನೀರಾವರಿಯ ಸತ್ತೇಗಾಲ ಯೋಜನೆ, ತಾಲ್ಲೂಕಿನಲ್ಲಿ 107 ಕೆರೆಗಳನ್ನು ತುಂಬಿಸಿದ್ದು. 38 ಕೋಟಿ ರೂ. ವೆಚ್ಚದಲ್ಲಿ ಕಣ್ವ ಎಡ ಮತ್ತು ಬಲದಂಡೆ ನಾಲೆಗಳ ಆಧುನೀಕರಣ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಚನ್ನಪಟ್ಟಣ ಟೌನ್‌ಹೌಸಿಂಗ್‌ಬೋರ್ಡ್‌ನಲ್ಲಿ ಹಾಸ್ಟೇಲ್‌ನಿರ್ಮಾಣಕ್ಕೆ 12 ಕೋಟಿ ರೂ.  ತಾಲ್ಲೂಕಿನ ವಸತಿ ಯೋಜನೆಗಾಗಿ ಸರ್ಕಾರದಿಂದ 1,458 ಹೆಚ್ಚುವರಿ ಮನೆಗಳಿಗೆ ಮಂಜೂರಾತಿ.

ಕೊಳಚೆ ಪ್ರದೇಶಗಳಲ್ಲಿ ಬಡವರಿಗೆ ವಸತಿ ಆಸರೆಗಾಗಿ 76 ಕೋಟಿ ರೂ. ವೆಚ್ಚದಲ್ಲಿ 1,450 ಮನೆಗಳ ನಿರ್ಮಾಣ. ಡಾ. ಅಂಬೇಡ್ಕರ್‌ಭವನ ಮತ್ತು ಜಗಜೀವನ್‌ರಾಮ್‌ಭವನಗಳ ನಿರ್ಮಾಣಕ್ಕೆ 5 ಕೋಟಿ ಅನುದಾನ.

ಚನ್ನಪಟ್ಟಣಕ್ಕೆ ಹೆಚ್‌.ಡಿ. ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತೀರಲ್ಲ..ಇವು ಚನ್ನಪಟ್ಟಣ ತಾಲೂಕಿಗೆ ಹೆಚ್‌.ಡಿ. ಕುಮಾರಸ್ವಾಮಿ ಅವರ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಗಳು.

ಡಿ.ಕೆ. ಸಹೋದರೇ ಈಗ ಹೇಳಿ  ಚನ್ನಪಟ್ಟಣಕ್ಕೆ ನಿಮ್ಮ ಕೊಡುಗೆ ಏನು ? ಎಂಬುದನ್ನು ಚನ್ನಪಟ್ಟಣದ ಮಹಾಜನತೆಗೆ ಮೊದಲು ತಿಳಿಸಿ.

ಚನ್ನಪಟ್ಟಣದ ಅಭಿವೃದ್ಧಿ ಯೋಜನೆಗಳಿಗೆ ಅಡ್ಡಗಾಲು ಹಾಕಿದ್ದ  ಕಾಂಗ್ರೆಸ್ ಸರ್ಕಾರಕ್ಕೆ, ಚನ್ನಪಟ್ಟಣದ ಜನರ ಬಳಿ ಬಂದು ಮತ ಕೇಳುವ ಯಾವ ನೈತಿಕ ಹಕ್ಕು ನಿಮಗಿಲ್ಲ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!