Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬರ ಪರಿಸ್ಥಿತಿ ತೀವ್ರ: ತಕ್ಷಣವೇ ಬರ ಪರಿಹಾರ ಘೋಷಿಸಲು ಸಿ.ಟಿ. ರವಿ ಆಗ್ರಹ

Advertisement
Advertisement

​ ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: 
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯನ್ನು ಸರ್ಕಾರ ತೀವ್ರವಾಗಿ ಪರಿಗಣಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗಾಗಿ ತಕ್ಷಣವೇ ಬರ ಪರಿಹಾರ ಘೋಷಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಆಗ್ರಹಿಸಿದ್ದಾರೆ.

​ಬಾಗಲಕೋಟೆಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಜನವಿರೋಧಿ ನೀತಿಗಳು ಹಾಗೂ ಬರಗಾಲದಿಂದಾಗಿ ರೈತರು ಎದುರಿಸುತ್ತಿರುವ ಸಾಲು ಸಾಲು ಸಮಸ್ಯೆಗಳ ಕುರಿತು ಅವರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

​ಮೂರು ವರ್ಷಗಳಲ್ಲಿ 2,850ಕ್ಕೂ ಹೆಚ್ಚು ರೈತರ ಆತ್ಮಹತ್ಯೆ:
​ರಾಜ್ಯದಲ್ಲಿನ ಕೃಷಿ ವಲಯದ ದುಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿ.ಟಿ. ರವಿ
, "ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 2,850 ಕ್ಕೂ ಹೆಚ್ಚು ರೈತರು ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜ್ಯಾದ್ಯಂತ ಭೀಕರ ಬರಗಾಲ ಆವರಿಸಿದ್ದು, ಸರ್ಕಾರ ತಕ್ಷಣವೇ ರೈತರ ನೆರವಿಗೆ ಧಾವಿಸಬೇಕಿದೆ. ಜಾನುವಾರುಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮೇವು ಮತ್ತು ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು" ಎಂದು ಒತ್ತಾಯಿಸಿದರು.

​ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಒತ್ತಾಯ:

​"ಫಸಲ್ ಬಿಮಾ ಯೋಜನೆ ಸೇರಿದಂತೆ ರೈತರಿಗೆ ನೇರ ಸಹಕಾರಿಯಾಗುವ ಎಲ್ಲಾ ಕೃಷಿ ಯೋಜನೆಗಳಿಗೆ ಸರ್ಕಾರ ಶಕ್ತಿ ತುಂಬುವ ಕೆಲಸ ಮಾಡಬೇಕು. ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ತಕ್ಷಣವೇ ಪೂರ್ಣಗೊಳಿಸಿ, ಈ ಭಾಗದ ರೈತರ ಒಣಭೂಮಿಗೆ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು."
ಸಿ.ಟಿ. ರವಿ
, ಬಿಜೆಪಿ ನಾಯಕ.​

​ಈ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಬಾಗಲಕೋಟೆ ಸಂಸದರಾದ ಗೋವಿಂದ ಕಾರಜೋಳ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ್ ಹಾಗೂ ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಂಡಾಗೆ ಉಪಸ್ಥಿತರಿದ್ದರು.

​ಅಲ್ಲದೆ ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಸಿದ್ದು ಸವದಿ, ಮಾಜಿ ಶಾಸಕ ರಾಜಶೇಖರ್ ಸೇರಿದಂತೆ ಜಿಲ್ಲೆಯ ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.