LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ತುಪ್ಪ ದಂಧೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ

Advertisement
Advertisement

ಚಿಕ್ಕಮಗಳೂರು ನಕಲಿ ತುಪ್ಪ ದಂಧೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ
ಚಂದ್ರವಳ್ಳಿ ನ್ಯೂಸ್, ​ಚಿಕ್ಕಮಗಳೂರು:
ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ನಕಲಿ ತುಪ್ಪದ ದಂಧೆ ಕೇವಲ ವಂಚನೆಯಲ್ಲ, ಬದಲಾಗಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಗಂಭೀರ ಅಪರಾಧವಾಗಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣದ ಹಿಂದಿರುವ ಜಾಲವನ್ನು ಸಂಪೂರ್ಣವಾಗಿ ಬಯಲಿಗೆಳೆದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

​ತುಪ್ಪ, ಹಸುವಿನ ಹಾಲು ಹಾಗೂ ಬೆಣ್ಣೆಯಂತಹ ಉತ್ಪನ್ನಗಳು ಅತ್ಯಂತ ಪೌಷ್ಠಿಕ ಮತ್ತು ಆರೋಗ್ಯಕರ ಎಂಬ ನಂಬಿಕೆಯಿಂದ ಜನರು ಖರೀದಿಸುತ್ತಾರೆ. ಇಂತಹ ಆಹಾರ ಪದಾರ್ಥಗಳಲ್ಲೇ ಕಲಬೆರಕೆ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

​​ಸಂಪೂರ್ಣ ತನಿಖೆ: ಚಿಕ್ಕಮಗಳೂರಿನಲ್ಲಿ ಪತ್ತೆಯಾಗಿರುವ ಈ ಅಕ್ರಮ ತುಪ್ಪ ತಯಾರಿಕಾ ದಂಧೆಯ ಸಂಪೂರ್ಣ ಜಾಲವನ್ನು ಹೊರತರಲು ತಕ್ಷಣವೇ ಕೂಲಂಕಷ ತನಿಖೆ ನಡೆಸಬೇಕು.

​ನಿರ್ದಾಕ್ಷಿಣ್ಯ ಕ್ರಮ: ಈ ದಂಧೆಯ ಹಿಂದೆ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ ಯಾವುದೇ ಕಾರಣಕ್ಕೂ ರಕ್ಷಿಸದೆ, ನಿರ್ದಾಕ್ಷಿಣ್ಯವಾಗಿ ಬಂದಿಸಿ ಸೂಕ್ತ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು.

​ಆರೋಗ್ಯದ ವಿಷಯದಲ್ಲಿ ರಾಜಿ ಇಲ್ಲ: ಜನರ ಆರೋಗ್ಯ ಮತ್ತು ಜೀವದ ಜೊತೆ ಆಟವಾಡುವ ಆಹಾರ ಕಲಬೆರಕೆಕೋರರ ವಿರುದ್ಧ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಕಠಿಣ ಹೆಜ್ಜೆ ಇಡಬೇಕು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 25ರಂದು ನೇರ ನೇಮಕಾತಿ ಸಂದರ್ಶನಆ.23ರಂದು ‘ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ' ಕವನ ಸಂಕಲನ ಲೋಕಾರ್ಪಣೆಆದಿಜಾಂಬವ ಮಠದಲ್ಲಿ ಏಕಪಕ್ಷೀಯ ಸಮಾರಂಭ: ಸಮುದಾಯದ ಮುಖಂಡರಿಂದ ಕಾರ್ಯಕ್ರಮ ಬಹಿಷ್ಕಾರಕಾಯಕದಿಂದ ಮಾತ್ರ ಲಕ್ಷ್ಮಿ ಪ್ರಾಪ್ತಿ; ಶ್ರೀ ಮಾದರ ಚನ್ನಯ್ಯ ಸ್ವಾಮೀಜಿಕರ್ನಾಟಕದ ಬುಡಕಟ್ಟು ಸಮುದಾಯಗಳ ಹಕ್ಕು ಮತ್ತು ಅಭಿವೃದ್ಧಿಗೆ ಸಂಸದ ಗೋವಿಂದ ಕಾರಜೋಳ ಧ್ವನಿಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ 'ಸಾಹುಕಾರ್ ಜಾನಕಿ' ನಿಧನ:ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಕ್ವಿನ್ ಸಿಟಿಯಲ್ಲಿ ವಿದೇಶಿ ವಿವಿಗಳ ಕ್ಯಾಂಪಸ್, ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್: ಸಚಿವ ಎಂ.ಬಿ. ಪಾಟೀಲ್ ಘೋಷಣೆಐಸಿಎಐ 'ಸಂವಾದ' ಸಮ್ಮೇಳನ ಉದ್ಘಾಟನೆ: ಸಿಎ ವೃತ್ತಿಪರರ ಜ್ಞಾನ ಹಂಚಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆಪ್ಯಾರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕೆ.ಎಸ್. ಶಿಲ್ಪಾಗೆ ಸನ್ಮಾನ: ಗ್ರೂಪ್ 'ಬಿ' ಉದ್ಯೋಗ ಘೋಷಣೆ