Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಉಪಚುನಾವಣೆಯಲ್ಲಿ ಕುಟುಂಬದ ಕುಡಿಗಳು!!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಚುನಾವಣೆ.....
ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ಅವರ ಪುತ್ರ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ದೊಡ್ಡ ಉದ್ಯಮಿ ಭರತ್ ಬೊಮ್ಮಾಯಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ,

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪುತ್ರ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜನತಾದಳದ ಅಭ್ಯರ್ಥಿ, ಸಂಡೂರು ಕ್ಷೇತ್ರದಲ್ಲಿ ಮಾಜಿ ಶಾಸಕ, ಮಾಜಿ ಮಂತ್ರಿ, ಹಾಲಿ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಕಾಂಗ್ರೆಸ್ ಅಭ್ಯರ್ಥಿ.....

 ಈಗ ನಾವು ಈ ಕುಟುಂಬಗಳ ನಿರ್ವಹಣೆಗಾಗಿ, ಅವರ ಪ್ರತಿಷ್ಠೆಗಾಗಿ ಪ್ರಜಾಪ್ರಭುತ್ವದ ಹೆಸರಿನಲ್ಲಿ  ಮತದಾನ ಮಾಡಬೇಕು. ಅವರನ್ನು

ನಮ್ಮ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು. ಇವರುಗಳನ್ನು ಹೊರತುಪಡಿಸಿ ನಮ್ಮಲ್ಲಿ ಮತ್ಯಾರಿಗೂ ಸ್ಪರ್ಧಿಸುವ ಸಾಮರ್ಥ್ಯವೂ ಇಲ್ಲ, ಅವಕಾಶ ಇಲ್ಲ. ಏಕೆಂದರೆ ಇದು ಪ್ರಜಾಪ್ರಭುತ್ವ !!!!!!

 ಇಡೀ ಆಡಳಿತ ವ್ಯವಸ್ಥೆ, ಬಹುತೇಕ ಎಲ್ಲಾ ಮಂತ್ರಿಗಳು, ಶಾಸಕರು, ವಿರೋಧ ಪಕ್ಷದವರು, ಎಲ್ಲಾ ಜಾತಿಯ ನಾಯಕರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು, ಸಾಮಾನ್ಯ ಜನರು ಈ ಉಪಚುನಾವಣೆಯ ಜ್ವರದಿಂದ ಬಳಲುತ್ತಿದ್ದಾರೆ. ಇವರಲ್ಲಿ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬ ಚರ್ಚೆ ಇನ್ನೂ ಸುಮಾರು 3 ವಾರಗಳು ನಡೆಯುತ್ತಿರುತ್ತದೆ. ಮೂರು ವಾರದ ನಂತರ ಯಾರೋ ಮೂವರು  ಆಯ್ಕೆಯಾಗುತ್ತಾರೆ ಅಷ್ಟೇ. ಅದಕ್ಕಾಗಿ ಇಷ್ಟೊಂದು ಸರ್ಕಸ್.....

 ಒಂದು ಸಣ್ಣ ಸಂವಿಧಾನಾತ್ಮಕ ಹುದ್ದೆಗಾಗಿ ಈ ನವರಂಗಿ ಆಟ. ಅದರಲ್ಲಿ ವಂಶಪಾರಂಪರ್ಯ ರಾಜಕೀಯ.....ಈ ವಿಷಯದಲ್ಲಿ ರಾಜಕಾರಣಿಗಳ ಏಕಾಗ್ರತೆ......

 ಈಗ ನೋಡಿ ನಮ್ಮ ರಾಜಕೀಯ ಪಕ್ಷಗಳ ಶ್ರದ್ಧೆ, ಶ್ರಮ, ಶಿಸ್ತು, ಯೋಜನೆ, ತಂತ್ರಗಾರಿಕೆ, ಮನೆ ಮನೆ ಭೇಟಿ, ಜಾತಿ ಧರ್ಮದ ಪ್ರೀತಿ, ಕ್ರಿಯಾಶೀಲತೆ ಎಲ್ಲವೂ ಎಷ್ಟೊಂದು ನೈಜವಾಗಿ ಜಾರಿಯಾಗುತ್ತದೆ. ಗುರಿ ತಲುಪುವುದಷ್ಟೇ ಅವರ ಏಕೈಕ ಉದ್ದೇಶ.....

 ಅವರ ಏಕಾಗ್ರತೆ ಎಷ್ಟಿರುತ್ತದೆಯೆಂದರೆ.....
ಮಹಾಭಾರತದಲ್ಲಿ ಗುರು ದ್ರೋಣಾಚಾರ್ಯರು, ಪಾಂಡವರು ಮತ್ತು ಕೌರವರಿಗೆ ಬಾಲ್ಯದಲ್ಲಿ ಬಿಲ್ವಿದ್ಯೆ ಕಲಿಸುವಾಗ ಒಮ್ಮೆ ಆ ಹುಡುಗರ ಏಕಾಗ್ರತೆ ಪರೀಕ್ಷಿಸಲು ಒಂದು ಪ್ರಶ್ನೆ ಕೇಳುತ್ತಾರೆ. ದೂರದಲ್ಲಿ ಒಂದು ಮರ ಮತ್ತು ಆ ಮರದ ಮೇಲೆ ಒಂದು ಪಕ್ಷಿ ಕುಳಿತಿರುತ್ತದೆ.  ಆ ಪಕ್ಷಿಯನ್ನು ಬಿಲ್ಲಿನಿಂದ ಗುರಿ ಇಟ್ಟು ಹೊಡೆಯಬೇಕು.

ಅದನ್ನು ವಿವರಿಸಿ ಒಬ್ಬೊಬ್ಬರಾಗಿ ಅಲ್ಲಿ ಏನು ಕಾಣುತ್ತಿದೆ ಎಂದು ಪ್ರಶ್ನಿಸುತ್ತಾರೆ. ಭೀಮಾ, ದುರ್ಯೋಧನ, ನಕುಲ, ದುಶ್ಯಾಸನ ಮುಂತಾದವರು ಮರ ಕಾಣುತ್ತಿದೆ, ಕೊಂಬೆ ಕಾಣುತ್ತಿದೆ, ಎಲೆ ಕಾಣುತ್ತಿದೆ, ಪಕ್ಷಿ ಕಾಣುತ್ತಿದೆ ಎನ್ನುತ್ತಾರೆ. ಆದರೆ ಅರ್ಜುನ ಮಾತ್ರ ಪಕ್ಷಿಯ ಅಕ್ಷಿಯಲ್ಲದೆ ಬೇರೇನೂ ಕಾಣುತ್ತಿಲ್ಲ ಎನ್ನುತ್ತಾನೆ. ಆತನ ಏಕಾಗ್ರತೆ ಗುರಿಯೆಡೆಗೆ ಅಷ್ಟು ತೀಕ್ಷ್ಣವಾಗಿರುತ್ತದೆ....

 ಹಾಗೆಯೇ ಈ ಉಪಚುನಾವಣೆ ಗೆಲ್ಲಲು ಮೂರು ಪಕ್ಷಗಳು ಒಂದೇ ಏಕಾಗ್ರತೆಯಿಂದ ಕೆಲಸ ಮಾಡುತ್ತದೆ. ಏನು ದೇಶ ಭಕ್ತಿ, ಧರ್ಮ, ಭಾಷೆ, ಜಾತಿ ಎಲ್ಲ ರಸಗಳು ಉಕ್ಕಿ ಹರಿಯುತ್ತದೆ. ಸಂಬಂಧಗಳು ನೆನಪಾಗುತ್ತದೆ. ದುಡ್ಡು ಕಾಸು ಹೆಂಡ  ಒಳಗೊಳಗೆ ಹರಿದಾಡುತ್ತದೆ.....

 ಅಯ್ಯೋ ಪಾಪಿಗಳ....
ಇದೇ ಆಸಕ್ತಿ, ಏಕಾಗ್ರತೆ ಅತಿವೃಷ್ಠಿ, ಅನಾವೃಷ್ಟಿ ಮತ್ತು ಅದರಿಂದ ಉಂಟಾಗುವ ಆರ್ಥಿಕ ನಷ್ಟ ತಡೆಯಲು ನಿಮ್ಮಿಂದ ಆಗುತ್ತಿಲ್ಲ. ಈಗಲೂ ಜನ ಪರದಾಡುತ್ತಿದ್ದಾರೆ. ಕೆಲವು  ಜನ ಸಾಯುತ್ತಿರುವುದು ನೆಡದೇ ಇದೆ. ಸಮಸ್ಯೆಯನ್ನು ಹೇಳುತ್ತಾ ಹೋದರೆ ದೊಡ್ಡ ಪಟ್ಟಿಯೇ ಆಗುತ್ತದೆ......

 ಅಲ್ರೀ ಅಭ್ಯರ್ಥಿಗಳು ಕೇವಲ ನಾಮಪತ್ರ ಸಲ್ಲಿಸುವಾಗಲೂ ಪಟಾಕಿ ಸುಟ್ಟು ಸಂಭ್ರಮಿಸುತ್ತಾರಲ್ರೀ ಇವರೇನು ಮನುಷ್ಯರಾ ಕೋತಿಗಳಾ..... ಸ್ವಲ್ಪವೂ ಸ್ವಾಭಿಮಾನ, ಹೋಗಲಿ ಸಾಮಾನ್ಯ ಜ್ಞಾನವೂ ಬೇಡವೇ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಒಂದು ಸಾಮಾನ್ಯ ಉಪ ಚುನಾವಣೆಗೆ ಹಿಂಬಾಲಕರು ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದೇ. ಮಾಡಲು ಎಷ್ಟೊಂದು ಕೆಲಸಗಳಿರುವಾಗ ಅಷ್ಟೊಂದು ಜನ ಅಲ್ಲಿ ಗುಂಪು ಸೇರಿ ಮಾಡುವುದಾದರೂ ಏನು ?.....

 ಈ ಉಪಚುನಾವಣೆಯಿಂದ ರಾಜ್ಯ ಉದ್ದಾರವಾಗುತ್ತದೆಯೇ, ದೇಶ ಉದ್ಧಾರವಾಗುತ್ತದೆಯೇ ಅಥವಾ ಆ ಕ್ಷೇತ್ರ ಉದ್ಧಾರವಾಗುತ್ತದೆಯೇ..ಹೊಟ್ಟೆ ಪಾಡಿಗಾಗಿ ಸಾಮಾನ್ಯ ಜನ ಈ ಹಂತಕ್ಕೆ ತಲುಪಿರುವಾಗ ಪ್ರಜಾಪ್ರಭುತ್ವ ನೈಜ ಅರ್ಥ ಪಡೆಯುವುದು ಹೇಗೆ, ಅದು ಯಶಸ್ವಿಯಾಗುವುದು ಹೇಗೆ...

 ಅಲ್ಲಿ ನೋಡಿದರೆ ಪ್ರವಾಹ ಜನರ ಬದುಕನ್ನೇ ಅಲುಗಾಡಿಸಿದೆ, ನಿರುದ್ಯೋಗ ತಾಂಡವವಾಡುತ್ತಿದೆ, ಜನಜೀವನ ಸಾಮಾನ್ಯ ಸ್ಥಿತಿಯನ್ನು ತಲುಪಲು ಇನ್ನೂ ಸಾಕಷ್ಟು ಕೆಲಸ ಮಾಡಬೇಕಾಗಿದೆ. ಇಂತಹ ಸಂದರ್ಭಗಳಲ್ಲಿ ಆಡಳಿತ ಮತ್ತು ರಾಜಕೀಯ ವ್ಯವಸ್ಥೆ ಚುನಾವಣಾ ಕಾರ್ಯಗಳಲ್ಲಿ ತೊಡಗಿಕೊಂಡರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ.....

 ಮಾಧ್ಯಮಗಳು ಈ ಉಪ ಚುನಾವಣೆಯನ್ನು ವೈಭವೀಕರಿಸಿ ಮಹಾನ್ ಹೋರಾಟ ಎಂದು ಜನರಲ್ಲಿ ಕುತೂಹಲ ಕೆರಳಿಸಿದಷ್ಟು ಇತರ ಅತ್ಯವಶ್ಯಕ ವಿಷಯಗಳು ಮಹತ್ವ ಕಳೆದುಕೊಳ್ಳುತ್ತದೆ. ಆಡಳಿತಗಾರರಿಗು ಅದೇ ಬೇಕಾಗಿರುತ್ತದೆ. ಸಾಲ ಮಾಡಿರುವ ದೊಡ್ಡ ಮೊತ್ತದ ಹಣವನ್ನು ವಿವಿಧ ಯೋಜನೆಗಳ ನೆಪದಲ್ಲಿ ನುಂಗಲಾಗುತ್ತದೆ. ರೈತ - ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗುತ್ತದೆ. ಜನರ ಬದುಕು ಬವಣೆ ಎಂದಿನಂತೆ ಅರಣ್ಯ ರೋಧನ.....

 ಎಲ್ಲಾ ಹಂತಗಳಲ್ಲಿ, ಎಲ್ಲಾ ರೀತಿಯಲ್ಲಿ ಬದಲಾವಣೆ ಆದರೆ ಮಾತ್ರ ಏನಾದರೂ ಸುಧಾರಣೆ ಸಾಧ್ಯವಾಗಬಹುದು. ಜನ ಈ ರೀತಿ ಹುಚ್ಚು ಹುಚ್ಚಾಗಿ ರಾಜಕೀಯ ಪಕ್ಷಗಳ ಹಿಂಬಾಲಕರಾಗಿ ಕುಣಿದು ಕುಪ್ಪಳಿಸಿ ಅದರಿಂದ ಬರುವ ಸಣ್ಣ ಕಾಸಿನಲ್ಲಿ ಬದುಕು ಕಟ್ಟಿಕೊಳ್ಳುವ ಮನಸ್ಥಿತಿಯಿಂದ ಹೊರಗೆ ಬರದಿದ್ದರೆ, ಸ್ವಾಭಿಮಾನ ಬೆಳೆಸಿಕೊಳ್ಳದಿದ್ದರೆ, ಆತ್ಮಸಾಕ್ಷಿಯನ್ನು ಜಾಗೃತಗೊಳಿಸಿಕೊಳ್ಳದಿದ್ದರೆ, ವಿವೇಚನೆಯಿಂದ ವರ್ತಿಸದಿದ್ದರೆ ಜೀವನ ಇನ್ನಷ್ಟು ಅಧೋಗತಿಗೆ ಇಳಿಯುತ್ತದೆ.....

 ಇನ್ನೂ ದುರಂತವೆಂದರೆ, ಪುರುಷರಂತೆ ಮಹಿಳೆಯರು ಸಹ ಈ ಹಿಂಬಾಲಕರೆಂಬ ಕೆಟ್ಟ ರಾಜಕೀಯ ವ್ಯವಸ್ಥೆಯ ಸುಳಿಗೆ ಸಿಲುಕುತ್ತಿದ್ದಾರೆ. ಗುತ್ತಿಗೆ ಅಥವಾ ದಿನಗೂಲಿ  ಒಪ್ಪಂದದ ರೀತಿಯಲ್ಲಿ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜೈಕಾರ ಹಾಕುವ ಅರೆ ಉದ್ಯೋಗದಲ್ಲಿ ತೊಡಗಿಸಿಕೊಳ್ಳುತ್ತದ್ದಾರೆ.....

 ಹೌದು, ಹೊಟ್ಟೆ ಪಾಡಿನ ಅನಿವಾರ್ಯತೆಯ ಬಗ್ಗೆಯೂ ಮರುಕವಿದೆ. ಆದರೆ ವ್ಯವಸ್ಥೆಯ ಸುಧಾರಣೆ ಹೇಗೆ ಎಂಬುದೇ ಬಹುದೊಡ್ಡ ಚಿಂತೆ. ಭ್ರಷ್ಟಾಚಾರ, ಬಡತನ, ಅಜ್ಞಾನ, ಅನಿವಾರ್ಯತೆ, ಗುಲಾಮಿತನ, ಶೋಷಣೆ ಎಲ್ಲವೂ ಒಂದಕ್ಕೊಂದು ಪೂರಕವಾಗಿರುತ್ತದೆ.

ಅದನ್ನು ಪ್ರತ್ಯೇಕವಾಗಿ ನೋಡಲು ಸಾಧ್ಯವಿಲ್ಲ. ಇದಕ್ಕೆ ಪರಿಹಾರ ಏನು ಮತ್ತು ಹೇಗೆ ?........
ಲೇಖನ:ವಿವೇಕಾನಂದ. ಎಚ್. ಕೆ.9844013068.......

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!