Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ, ಜೀವ ಬೆದರಿಕೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ಬಸ್ ನಿಲ್ಲಿಸುವ ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ
, ಖಾಸಗಿ ಬಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 24, 2026 ರಂದು ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಅರುಣ್ ಕುಮಾರ್ ಎಂಬುವವರು ಪೊಲೀಸರಿಗೆ ಲಿಖಿತ ದೂರು ನೀಡಿರುವುದಾಗಿ ಚಾಲಕರ ಸಂಘದ ರಾಜ್ಯಾಧ್ಯಕ್ಷ ಎಸ್.ಪ್ರದೀಪ್  ತಿಳಿಸಿದ್ದಾರೆ.

​ಘಟನೆಯ ಹಿನ್ನೆಲೆ:
​ದೂರುದಾರರಾದ ಅರುಣ್ ಕುಮಾರ್ ಅವರು
'ನೂಗೊ' ಸಂಸ್ಥೆಯ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೂನ್ 24 ರಂದು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ TN12BJ5177 ಸಂಖ್ಯೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿನೋದ್ ಅರೇಕುಂಟಿ, ಸೀಟ್ ನಂ. 3L) ಎಂಬ ಪ್ರಯಾಣಿಕನು, ಬಸ್ ನಿಲ್ಲಿಸುವ ವಿಚಾರವಾಗಿ ಸಹ ಚಾಲಕ ಮಂಜುನಾಥ್ ಎಂಬುವವರೊಂದಿಗೆ ಜಗಳ ತೆಗೆದಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಬೆಳಗ್ಗೆ ನಾಗಸಂದ್ರ ಭಾಗದಲ್ಲಿ ಇಳಿಯುವಾಗ ತನ್ನ ಪರಿಚಯದವರನ್ನು ಕರೆಸಿ ಹಲ್ಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.

​ಎಮರ್ಜೆನ್ಸಿ ಹ್ಯಾಮರ್‌ನಿಂದ ಮಾರಣಾಂತಿಕ ಹಲ್ಲೆ:
​ಇದಾದ ಬಳಿಕ
, KA02 AM 3640 ಸಂಖ್ಯೆಯ ಬಿಳಿ ಬಣ್ಣದ ವಾಹನದಲ್ಲಿ ಬಂದ ಸುಮಾರು ಮೂರು ಜನ ಅಪರಿಚಿತರು ಬಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಸ್‌ನಲ್ಲಿದ್ದ ತುರ್ತು ನಿರ್ಗಮನದ ಗಾಜು ಒಡೆಯಲು ಬಳಸುವ ಸುತ್ತಿಗೆಯಿಂದ ಅರುಣ್ ಕುಮಾರ್ ಅವರ ತಲೆಗೆ ಬಲವಾಗಿ ಹೊಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಪರಿಣಾಮವಾಗಿ ಅವರ ತಲೆಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವವಾಗಿದೆ.

​ಡಿಪೋ ಒಳಗೂ ನುಗ್ಗಿ ರೌಡಿಸಂ, ಜೀವ ಬೆದರಿಕೆ:
​ಹಲ್ಲೆಯ ನಂತರ ಬಸ್ ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ವಾಹನವನ್ನು ಡಿಪೋ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಆರೋಪಿಗಳು ಅಲ್ಲಿಗೂ ಬೆನ್ನಟ್ಟಿ ಬಂದಿದ್ದಾರೆ. ಬಿಳಿ ಮತ್ತು ಕಪ್ಪು ಬಣ್ಣದ ಕಾರುಗಳಲ್ಲಿ ಬಂದ ಸುಮಾರು 6 ರಿಂದ 7 ಜನ ಅಪರಿಚಿತ ವ್ಯಕ್ತಿಗಳು ಡಿಪೋ ಒಳಗೆ ಅಕ್ರಮವಾಗಿ ನುಗ್ಗಿ
, "ಏನಾಗುತ್ತೋ ನೋಡೋಣ", "ನಿಮ್ಮನ್ನು ಬಿಡುವುದಿಲ್ಲ", "ನಿಮ್ಮನ್ನು ಕೊಲ್ಲುತ್ತೇವೆ" ಎಂದು ಮುಖಂಡರಿಗೆ ಹಾಗೂ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿದ್ದಾರೆ.

​ಈ ವೇಳೆ ಡಿಪೋದಲ್ಲಿದ್ದ ಸುಮಾರು 20 ರಿಂದ 30 ಜನ ಚಾಲಕರು ಮಧ್ಯಪ್ರವೇಶಿಸಿ ಹಲ್ಲೆ ತಡೆಯಲು ಯತ್ನಿಸಿದ್ದು, ಈ ಗೊಂದಲದಲ್ಲಿ ಮತ್ತೊಬ್ಬ ವ್ಯಕ್ತಿಗೂ ಗಾಯಗಳಾಗಿದೆ ಎನ್ನಲಾಗಿದೆ.

​ಕಾನೂನು ಕ್ರಮಕ್ಕೆ ಆಗ್ರಹ:
​ತಮ್ಮ ಆತ್ಮರಕ್ಷಣೆಗಾಗಿ ಮಾತ್ರ ತಾವು ಪ್ರಯತ್ನಿಸಿದ್ದಾಗಿ ತಿಳಿಸಿರುವ ದೂರುದಾರರು
, ಮುಖ್ಯ ಆರೋಪಿ ವಿನೋದ್ ಅರೇಕುಂಟಿ ಹಾಗೂ ಆತನ ಸಹಚರರ ವಿರುದ್ಧ ಹಲ್ಲೆ, ಕೊಲೆ ಬೆದರಿಕೆ, ಗಂಭೀರ ಗಾಯ ಹಾಗೂ ಡಿಪೋಗೆ ಅಕ್ರಮ ಪ್ರವೇಶ ಮಾಡಿದ ಆರೋಪದಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತಮಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಮಾದನಾಯಕನಹಳ್ಳಿ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ದೂರಿನೊಂದಿಗೆ ವೈದ್ಯಕೀಯ ವರದಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಲಗತ್ತಿಸಿ ಆಗ್ರಹ ಮಾಡಲಾಗಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳಿಗೆ ಕುದಾಪುರ ಐಐಎಸ್‍ನಲ್ಲಿ ಉದ್ಯಮಶೀಲತಾ ತರಬೇತಿವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಿ - ಕೆ.ಎಂ ಕೃಷ್ಣಮೂರ್ತಿಚಾಲಕನ ಮೇಲೆ ಮಾರಣಾಂತಿಕ ಹಲ್ಲೆ, ಜೀವ ಬೆದರಿಕೆ!21 ತಿಂಗಳ ತುರ್ತು ಪರಿಸ್ಥಿತಿಯಲ್ಲಿ ಭಾರತ - ಪ್ರಜಾಪ್ರಭುತ್ವದ ಕರಾಳ ಅಧ್ಯಾಯಶಂಕಿತ ಉಗ್ರ ಸುಹೇಲ್ 10 ದಿನ ಪೊಲೀಸ್ ಕಸ್ಟಡಿಗೆಬಿಜೆಪಿಯ ಆಂತರಿಕ ಕಚ್ಚಾಟಕ್ಕೆ ಶೋಭಾ ಕರಂದ್ಲಾಜೆ ಕಾರಣ: ಸೋಮಶೇಖರ್ ವಾಗ್ದಾಳಿ"ನಾವು ಇತಿಹಾಸ ಓದುವವರಲ್ಲ, ಸೃಷ್ಟಿಸುವವರು!": ಸಿಎಂ ಡಿ.ಕೆ ಶಿವಕುಮಾರ್ ಭಾವುಕ ನುಡಿ"ಹೆಚ್‌ಡಿಕೆ ಬಳಿ 20 ಕೋಟಿ ಮೌಲ್ಯದ 85 ವಾಚ್‌ಗಳಿವೆ!": ಪ್ರದೀಪ್ ಈಶ್ವರ್ಟಿಬಿ ಡ್ಯಾಂ ಗೇಟ್ ಲೋಕಾರ್ಪಣೆ: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಗೈರು! ಕಾಡಾ ಅಧ್ಯಕ್ಷರನ್ನು ತಡೆದ ಪೊಲೀಸರುಭೀಕರ ಅವಳಿ ಭೂಕಂಪ: ಭಾರೀ ಜೀವಹಾನಿಗೆ ಪ್ರಧಾನಿ ಮೋದಿ ತೀವ್ರ ಸಂತಾಪ, ಭಾರತದಿಂದ ನೆರವಿನ ಹಸ್ತ!