Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಹೊಸದಾಗಿ
ರೌಡಿ ನಿಗ್ರಹ ದಳ’ (ಆ್ಯಂಟಿ ರೌಡಿ ಸ್ಕ್ವಾಡ್) ರಚಿಸಲು ಮುಂದಾಗಿರುವ ನಿರ್ಧಾರದ ಕುರಿತು ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಭಾರಿ ವಾಕ್ಸಮರ ತಾರಕಕ್ಕೇರಿದೆ.

ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, "ಇದು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಮರೆಮಾಚಲು ಸರ್ಕಾರ ಮಾಡುತ್ತಿರುವ ಗಿಮಿಕ್," ಎಂದು ವಾಗ್ದಾಳಿ ನಡೆಸಿದ್ದಾರೆ.

ಈಗಿರುವ ಇಲಾಖೆ ಸಾಲದೇ? ಆರ್. ಅಶೋಕ್ ಪ್ರಶ್ನೆ
ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್
, ರಾಜ್ಯದಲ್ಲಿ ಈಗಾಗಲೇ ಅತ್ಯಂತ ಸಮರ್ಥವಾದ ಪೊಲೀಸ್ ಇಲಾಖೆ ಹಾಗೂ ಗುಪ್ತಚರ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ.

ಹೀಗಿರುವಾಗ ಹೊಸದಾಗಿ ವಿಶೇಷ ದಳ ರಚಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು. ಹೊಸ ವ್ಯವಸ್ಥೆಗಳನ್ನು ರೂಪಿಸುವ ಬದಲು, ಈಗಿರುವ ಕಾನೂನು ಜಾರಿ ಸಂಸ್ಥೆಗಳಿಗೇ ಮುಕ್ತ ಸ್ವಾತಂತ್ರ್ಯ ನೀಡಿ, ಅಪರಾಧ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಲಪಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ:
ಬೊಗಳೆ ಮತ್ತು ವಸೂಲಿ ರಾಜಕಾರಣ: "ರೌಡಿ ನಿಗ್ರಹ ದಳ ಮಾಡ್ತಾರಂತೆ
, ಇದನ್ನು ಕೇಳಿ ರಾಜ್ಯಾದ್ಯಂತ ಜನ ನಗುತ್ತಿದ್ದಾರೆ. ಅದೂ ಯಾರಿಂದ? ಡಿ.ಕೆ. ಶಿವಕುಮಾರ್ ಮತ್ತು ಬಿ.ಕೆ. ಹರಿಪ್ರಸಾದ್ ಅವರಿಂದ ಅಂತೆ! ಇದೆಲ್ಲವೂ ಬೊಗಳೆ, ಯಾವುದೂ ಸಾಕಾರವಾಗಲ್ಲ. ರಾಹುಲ್ ಗಾಂಧಿ ವಸೂಲಿಗೆ ಬಂದಿದ್ದಾರೆ ಅಷ್ಟೇ, ಅವರು ವಸೂಲಿ ಮಾಡಿ ಹೋಗ್ತಾರೆ," ಎಂದು ಅಶೋಕ್ ಅತ್ಯಂತ ಖಾರವಾಗಿ ಟೀಕಿಸಿದರು.

ಕುಗ್ಗಿದ ಪೊಲೀಸ್ ವಿಶ್ವಾಸ: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಮತ್ತು ರೌಡಿಶೀಟರ್‌ಗಳ ಪ್ರಭಾವ ಹೆಚ್ಚಾಗಿದೆ. ಸಾರ್ವಜನಿಕರಲ್ಲಿ ಪೊಲೀಸರ ಮೇಲಿನ ವಿಶ್ವಾಸ ಕುಗ್ಗುತ್ತಿದ್ದು, ಆ್ಯಂಟಿ ರೌಡಿ ಸ್ಕ್ವಾಡ್ ಘೋಷಣೆ ಕೇವಲ ರಾಜಕೀಯ ಪ್ರೇರಿತ ಕಣ್ಣೊರೆಸುವ ತಂತ್ರ ಎಂದರು.

ಸರ್ಕಾರದ ಸಮರ್ಥನೆ ಏನು?
ಇನ್ನೊಂದೆಡೆ
, ರಾಜ್ಯದಲ್ಲಿ ಸಂಘಟಿತ ಅಪರಾಧಗಳು, ಹಫ್ತಾ ವಸೂಲಿ, ದಬ್ಬಾಳಿಕೆ ಮತ್ತು ಸಮಾಜಘಾತುಕ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದಲೇ ವಿಶೇಷ ಆ್ಯಂಟಿ ರೌಡಿ ಸ್ಕ್ವಾಡ್ರಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ತಿಳಿಸಿದೆ.

ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವುದು ಮತ್ತು ಹಳೇ ಅಪರಾಧಿಗಳ ವಿರುದ್ಧ ಸಮನ್ವಯದೊಂದಿಗೆ ನಿರ್ದಾಕ್ಷಿಣ್ಯ ಕಾರ್ಯಾಚರಣೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವುದೇ ಈ ದಳದ ಮುಖ್ಯ ಉದ್ದೇಶ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

"ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಮರೆಮಾಚಲು ಹೊಸ ದಳದ ನಾಟಕವಾಡಲಾಗುತ್ತಿದೆ. ಹೊಸ ಸ್ಕ್ವಾಡ್‌ಗಳ ಅಗತ್ಯವಿಲ್ಲ, ಪೊಲೀಸರಿಗೆ ಮುಕ್ತ ಅಧಿಕಾರ ಕೊಟ್ಟರೆ ಸಾಕು."
ಆರ್. ಅಶೋಕ್
, ವಿರೋಧ ಪಕ್ಷದ ನಾಯಕ.

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಈ ವಿಶೇಷ ದಳದ ನಿರ್ಧಾರವು, ಇದೀಗ ಕರ್ನಾಟಕ ರಾಜಕೀಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವಿಚಾರವಾಗಿ ದೊಡ್ಡ ಮಟ್ಟದ ಚರ್ಚೆ ಹಾಗೂ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ. ಮೌಲ್ಯದ ಚಿನ್ನಾಬರಣ ವಶಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದಿಸಿದ ವೀರಶೈವ ಶಿವಾಚಾರ್ಯರುಕಾರ್ಮಿಕರ ರಕ್ಷಣಾ ಕಿಟ್ ವಿತರಣೆಯಲ್ಲಿ ನೂರಾರು ಕೋಟಿ ಹಗರಣ: ಜೆಡಿಎಸ್ ವಾಗ್ದಾಳಿ ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವೆ-ರಾಮಲಿಂಗಾರೆಡ್ಡಿಸಿಎಂ ಸಂಧಾನ ಯಶಸ್ವಿ, ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯಕ್ಕೆ ಸುಖಾಂತ್ಯಖಾತೆಗಾಗಿ ಕಿತ್ತಾಟ, ವಿಪಕ್ಷಗಳ ನಾಟಕ: ಜನಪರ ಕಾರ್ಯದ ಆಧಾರದ ಮೇಲೆ ಖಾತೆ ಹಂಚಿಕೆಯಾಗಲಿಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನಅಂಡಮಾನ್ ಕಡಲಾಚೆ ಪ್ರದೇಶದಲ್ಲಿ ಭಾರಿ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆವಿಧಾನ ಪರಿಷತ್ ಗೆ 5ನೇ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್