Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ

Advertisement
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮದ್ದೂರಿನ ರಾಮ್​ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದಲೇ ಕಲ್ಲು ತೂರಾಟ ಮಾಡಿರುವ ಆರೋಪ ಕೇಳಿ ಬಂದಿದೆ. ಸದ್ಯ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿಭಟ ಮಾಡಲಾಗುತ್ತಿದೆ.

ಮಸೀದಿ ಮುಂದೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ಉಂಟಾಗಿದ್ದು, ಈ ವೇಳೆ ಕೆಲ ಕಿಡಿಗೇಡಿಗಳಿಂದಲೂ ಕಲ್ಲು ತೂರಾಟ ಮಾಡಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.ಸದ್ಯ ಕಲ್ಲು ತೂರಾಟ ಮಾಡಿದ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಭುಗಿಲೆದಿದೆ.

 ಪೊಲೀಸರ ಜೊತೆಗೆ ವಾಗ್ವಾದ ನಡೆದಿದ್ದರೆ, ಮತ್ತೊಂದು ಕಡೆ ಯುವಕರ ಗುಂಪು ರಸ್ತೆಯಲ್ಲೇ ಕುಳಿತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮಸೀದಿ ಮುಂದೆ ಡಿಜೆ ಹಾಕಿ ಗಣಪತಿ ಮೆರವಣಿಗೆ ಮಾಡಿದ್ದಾರೆ.ಈ‌ವೇಳೆ ಮಸೀದಿ ಜಾಗ ಬಿಟ್ಟು ಹೋಗುವಂತೆ ಪೊಲೀಸರು ಹೇಳಿದ್ದಾರೆ. ಹೀಗಿದ್ದರೂ ಘೋಷಣೆ ಕೂಗುತ್ತ ಯುವಕರು ಡ್ಯಾನ್ಸ್ ಮಾಡಿದ್ದಾರೆ. ಈ‌ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಎಲ್ಲರೂ ಓಡಿ ಹೋಗಿದ್ದಾರೆ.

ಹಲವರಿಗೆ ಗಾಯ, ಬೈಕ್​ಗಳು ಜಖಂ-
ಪೊಲೀಸರ ಲಾಠಿಚಾರ್ಜ್ ವೇಳೆ ಓಡುವಾಗ ಕೆಳಗೆ ಬಿದ್ದ ಪ್ರತಿಭಟನಾನಿರತ ಹಲವರಿಗೆ ಗಾಯಗಳಾಗಿವೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವು ಮಹಿಳೆಯರಿಗೂ ಗಾಯಗಳಾಗಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಹಲವು ಬೈಕ್​ಗಳು ಕೂಡ ಜಖಂಗೊಂಡಿವೆ.


ಚಲುವರಾಯಸ್ವಾಮಿ ಹೇಳಿಕೆ-
ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದು, ಘಟನೆ ಸಂಬಂಧ ಕೇಸ್ ದಾಖಲಿಸಿದ 21 ಜನರ ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ್ರೂ ಬಿಜೆಪಿ ಮನಸ್ಥಿತಿ ಏಕೆ ಈ ರೀತಿ ಇದೆ. ಬಿಜೆಪಿ, ಸಂಘಟನೆ ಕೋಮು ಮನಸ್ಥಿತಿ ಬಿಡಲಿ. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆಗೂ ಚರ್ಚೆ ಮಾಡಿದ್ದೇನೆ. ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿಎಂ ಚರ್ಚೆ ಮಾಡ್ತಿದ್ದಾರೆ ಎಂದಿದ್ದಾರೆ.

ಘಟನೆ ಹಿನ್ನಲೆ-
ಸೆ.8ರಂದು ಭಾನುವಾರ ಸಂಜೆ 7.30ರ ಹೊತ್ತಿಗೆ ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿದ್ದರು.
ಬೀದಿ ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ ಇನ್ನೇನು ಮಸೀದಿ ಮುಂದೆ ಹಾದುಹೋಗಬೇಕಿತ್ತು. ಈ ವೇಳೆ ದಿಢೀರ್ ಲೈಟ್​ ಆಫ್​ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಲಾಗಿದೆಯಂತೆ. ಅಲ್ದೇ ದೊಣ್ಣೆಗಳನ್ನ ಕೂಡ ಎಸೆದಿದ್ದಾರೆ ಅಂತಾ ಆರೋಪಿಸಲಾಗಿದೆ. ನಾಲ್ವರು ಹೋಂಗಾರ್ಡ್​ಗಳು ಸೇರಿ 8 ಜನರು ಗಾಯಗೊಂಡಿದ್ದಾರೆ.


 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST