Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಬ ಸಮಾಜಕ್ಕೆ ಕನಿಷ್ಠ 5 ಮಂದಿಗೆ ಸಚಿವ ನೀಡಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿರುವುದು ಕೇವಲ ಕುರುಬರಿಗಷ್ಟೆ ಅಲ್ಲ. ಇಡಿ ಅಹಿಂದ ವರ್ಗಕ್ಕೆ ನೋವುಂಟಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುರಿ ಕಾಯುತ್ತಿದ್ದ ಹುಡುಗ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬೆಳೆದಿದ್ದಾರೆಂದರೆ

ಕಮ್ಮಿ ಸಾಧನೆಯಲ್ಲ. ಅಹಿಂದ ಸಂಘಟಕ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬಂದಾಗ ವರಿಷ್ಟರು ಸ್ವಾಗತಿಸಿ ಎರಡು ಬಾರಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಎರಡನೆ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಬಡವರು, ದೀನ ದಲಿತರು, ಶೋಷಿತರು, ಧ್ವನಿಯಿಲ್ಲದವರಿಗೆ ಶಕ್ತಿ ತುಂಬಿದರು. ವರಿಷ್ಟರ ಸೂಚನೆಯಂತೆ ರಾಜಿನಾಮೆ ನೀಡಿರುವುದು ನಮಗೆಲ್ಲಾ ನೋವಾಗಿದ್ದರು. ಮತ್ತೊಂದು ಕಡೆ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ನಾವುಗಳು ಸ್ವಾಗತಿಸುತ್ತೇವೆಂದು ತಿಳಿಸಿದರು.

ಮೂರನೆ ಅತಿ ದೊಡ್ಡ ಸಮುದಾಯ ನಮ್ಮದು. ಜೆಡಿಎಸ್.ನಲ್ಲಿ ನಮಗೆ ಅವಕಾಶ ಕಡಿಮೆಯಿದೆ. ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಜೊತೆಗೆ ರಾಜ್ಯದಲ್ಲಿ ಎರಡನೆ ಅವಧಿಯ ನಿಗಮ ಮಂಡಳಿಗಳ ನೇಮಕದಲ್ಲಿ ನಮ್ಮ ಜನಾಂಗಕ್ಕೆ ಒತ್ತು ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಬಿ.ಜಿ.ಗೋವಿಂದಪ್ಪನವರನ್ನು ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿಯನ್ನಾಗಿ ಮಾಡಬೇಕು. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಇವರುಗಳಿಗೂ ಸಚಿವ ಸ್ಥಾನ ಕೊಡಬೇಕೆಂದು ವರಿಷ್ಟರನ್ನು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್‌ರವರ ಮಂತ್ರಿ ಮಂಡಲದಲ್ಲಿ ಕುರಿಬರಿಗೆ ಐದು ಸಚಿವ ಸ್ಥಾನ ಸಿಗಬೇಕು. ಏಳು ವಿಧಾನಪರಿಷತ್ ಸ್ಥಾನ ಖಾಲಿಯಾಗುತ್ತಿದೆ. ರಾಜ್ಯಸಭೆಗೂ ನಡೆಯುವ ಚುನಾವಣೆಯಲ್ಲಿ ಕುರುಬರಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕೆಂದು ಬಿಜೆಪಿ. ಜೆಡಿಎಸ್.ನವರಿಗೂ ಆಗ್ರಹಿಸಿದ ಬಿ.ಟಿ.ಜಗದೀಶ್, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯದ ಸಮೀಕ್ಷೆಯನ್ನು ಸಿದ್ದರಾಮಯ್ಯನವರು ಸ್ವೀಕಾರ ಮಾಡಿರುವುದನ್ನು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅಂಗೀಕರಿಸಿ ಯಥಾವತ್ತಾಗಿ ಜಾರಿಗೊಳಿಸಬೇಕು. ಇದರಿಂದ ಹಿಂದುಳಿದ ೧೦೪ ಜಾತಿಗಳಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ ಮಾತನಾಡಿ ನೂತನವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಓಬಿಸಿ. ಪರಿಶಿಷ್ಟ ಜಾತಿ

ಪರಿಶಿಷ್ಟ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಜಿಲ್ಲೆಯ ನಾಲ್ವರು ಶಾಸಕರುಗಳಿಗೆ ಸಚಿವ ಸ್ಥಾನ ಸಿಗಬೇಕು. ತಳಮಟ್ಟದ ಕುರುಬ ಜನಾಂಗವನ್ನು ನಿಮ್ಮ ಜೊತೆ ವಿಶ್ವಾಸದಲ್ಲಿಟ್ಟುಕೊಂಡು ಹೆಚ್ಚಿನ ಸ್ಥಾನಮಾನ ಕಲ್ಪಿಸುವಂತೆ ಮನವಿ ಮಾಡಿದರು.

ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಹೆಚ್.ಮಂಜಪ್ಪ ಮಾತನಾಡುತ್ತ ಚೆಕ್‌ಡ್ಯಾಂಗಳ ರಾಜ ಎಂದೆ ಪ್ರಸಿದ್ದಿಯಾಗಿರುವ ಹೊಸದುರ್ಗದ ಹಿರಿಯ ಶಾಸಕ

ಬಿ.ಜಿ.ಗೋವಿಂದಪ್ಪನವರಿಗೆ ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಇವರಿಗೆ ರಾಜಕಾರಣದಲ್ಲಿ ಅಪಾರ ಅನುಭವವಿದೆ. ಹಾಗಾಗಿ ಪರಿಗಣನೆಗೆ ತೆಗೆದುಕೊಂಡು ಕುರುಬ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.

ಮುತ್ತು, ಮಾಳೇಶ್, ಉಮೇಶ್, ಕುರುಬರ ಸಂಘದ ನಿರ್ದೇಶಕ ಹೊಸದುರ್ಗದ ಲಿಂಗಮೂರ್ತಿ, ಸುರೇಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಗೆಲುವು ಸಮಾಜಸೇವಕ ಕೆ.ಆರ್. ಶಿವಪ್ರಕಾಶ್ ಸ್ಮರಣೋತ್ಸವ: ಅಧಿಕಾರ ವ್ಯಾಮೋಹವಿಲ್ಲದ ಸರಳ ಸಜ್ಜನಿಕೆಯ ಧೀಮಂತ ವ್ಯಕ್ತಿತ್ವಪತ್ರಕರ್ತರಿಗೂ ಸಾಮಾಜಿಕ ಜವಾಬ್ದಾರಿ ಇದೆ: ಬೊಮ್ಮಾಯಿಜಾಗತಿಕ ತಾಪಮಾನಕ್ಕೆ ಬ್ರೇಕ್ ಹಾಕಲು ಮಕ್ಕಳಿಂದ ಶ್ಲಾಘನೀಯ ಕಾರ್ಯ: 1000 ಬೀಜದ ಉಂಡೆಗಳ ವಿತರಣೆ!ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿಹಿರಿಯೂರು ಉಪ ಚುನಾವಣೆಗೆ ಜೆಡಿಯು ನಿಂದ ಅಭ್ಯರ್ಥಿ ಕಣಕ್ಕೆಕುರುಬ ಸಮಾಜಕ್ಕೆ ಕನಿಷ್ಠ 5 ಮಂದಿಗೆ ಸಚಿವ ನೀಡಿಭೀಕರ ಸರಣಿ ಅಪಘಾತ: ಆಟೋಗೆ ಗುದ್ದಿದ ಥಾರ್‌ಕಾರ್‌; ಐವರ ದಾರುಣ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯಸಂಪುಟ ರಚನೆ: ಹೈಕಮಾಂಡ್‌ಗೆ ತಲುಪದ ಸಿಎಂ ಪ್ರಸ್ತಾವನೆ; ಜೂನ್ 3ರ ನಂತರ ನಿರ್ಧಾರ ಎಂದ ಖರ್ಗೆಕೈ ಸಂಪುಟ ಸರ್ಕಸ್: '11:11:11' ಸೂತ್ರದೊಂದಿಗೆ ಡಿಕೆಶಿ ಕ್ಯಾಬಿನೆಟ್ ರಚನೆಗೆ ಹೈಕಮಾಂಡ್ ಮುಂದು; ಡಿಸಿಎಂ ಹುದ್ದೆ ಇಲ್ಲ!