Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸ್ಪಷನೆ ಕೋರಿ ಒಳ ಮೀಸಲಾತಿ ಮಸೂದೆ ವಾಪಸ್​ ಕಳುಹಿಸಿದ ರಾಜ್ಯಪಾಲ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ  ವಾಪಸ್​ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳು ದಟ್ಟವಾಗಿವೆ. ಬೆಳಗಾವಿಯಲ್ಲಿ ಡಿಸೆಂಬರ್​ನಲ್ಲಿ ನಡೆದ ಅಧಿವೇಶನದಲ್ಲಿ ಸರ್ಕಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತು.

ಮೀಸಲಾತಿ ಸೌಲಭ್ಯಗಳ ನ್ಯಾಯಯುತ ಮತ್ತು ಸಮಾನ ವಿತರಣೆ ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿಗಳ ವಿವಿಧ ಉಪ ಪಂಗಡಗಳ ನಡುವೆ 6:6:5 ಅನುಪಾತದಲ್ಲಿ ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿ ಮೀಸಲಾತಿ ಕೋಟಾ ವಿಭಜಿಸಲಾಗಿತ್ತು.
ಈ ಮಸೂದೆಗೆ ಅಂಕಿತ ಕೋರಿ ಕಳೆದ ವಾರ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈ ಮಸೂದೆಗೆ ಹೆಚ್ಚಿನ ಸ್ಪಷ್ಟೀಕರಣ ಕೋರಿ ಅವರಿಗೆ ವಾಪಸ್​ ಕಳುಹಿಸಿದ್ದಾರೆ.


ಈ ಬೆಳವಣಿಗೆಯು ಸರ್ಕಾರದ ಹಲವು ಇಲಾಖೆಗಳ ನೇಮಕಾತಿ ಮೇಲೆ ಪರಿಣಾಮ ಬೀರಲಿದೆ. ಈ ಮಸೂದೆ ಪ್ರಕ್ರಿಯೆ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಕಾದು ಕುಳಿತಿದ್ದು, ಇದೀಗ ಇದು ಮತ್ತಷ್ಟು ವಿಳಂಬವಾಗಲಿದೆ. ಮೂಲಗಳ ಪ್ರಕಾರ, ಸರ್ಕಾರ ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣಕ್ಕೆ ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 30 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಆಗಬೇಕಿದೆ.

2024ರ ಅಕ್ಟೋಬರ್​ನಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ನೆನಗುದಿಗೆ ಬಿದ್ದಿದ್ದು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ ಏಕವ್ಯಕ್ತಿ ಆಯೋಗವು ಪರಿಶಿಷ್ಟ ಜಾತಿಗಳ ವಿವಿಧ ಉಪ - ಗುಂಪುಗಳಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ನೀಡಿದ ಶಿಫಾರಸುಗಳನ್ನು ನೇಮಕಾತಿಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ.


ಆಂತರಿಕ ಕೋಟಾ ಸಮಸ್ಯೆ ಪರಿಹರಿಸದೇ ನೇಮಕಾತಿಗಳೊಂದಿಗೆ ಮುಂದುವರಿಯುವುದರಿಂದ ಈ ಸಮುದಾಯಗಳ ಯುವಕರಿಗೆ ನಷ್ಟವಾಗಲಿದೆ ಎಂದು ಎಸ್‌ಸಿ-ಎಡ ಸಮುದಾಯಗಳ ಬೇಡಿಕೆಯಿಂದಾಗಿ ಸರ್ಕಾರ  ನೇಮಕಾತಿ ಸ್ಥಗಿತಗೊಳಿಸಿದೆ.

ಎಸ್​ಸಿ ಒಳಮೀಸಲಾತಿ ಕುರಿತು ಆಯೋಗ 2024ರ ಆಗಸ್ಟ್​ 4ರಂದು ವರದಿ ಮಂಡಿಸಿದ್ದು, ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಅದನ್ನು ಸ್ವೀಕರಿಸಿತ್ತು. 2025ರ ಅಕ್ಟೋಬರ್​ನಲ್ಲಿ ಎಸ್​ಸಿ ಒಳಮೀಸಲಾತಿ ಕೋಟಾವನ್ನು ಕೂಡಾ ಸೂಚಿಸಿತ್ತು. ಆದರೆ, ಇದುವರೆಗೂ ಸರ್ಕಾರ ಎಸ್​ಸಿಗಳಲ್ಲಿ ವರ್ಗಗಳನ್ನು ಗುರುತಿಸಲು ಜಾತಿ ಪ್ರಮಾಣಪತ್ರಗಳನ್ನು ನೀಡುವ ಮಾರ್ಗಸೂಚಿಗಳನ್ನು ಅದು ಹೊರಡಿಸಿಲ್ಲ. ಈ ನಡುವೆ ಒಳಮೀಸಲಾತಿ ಸೂಚಿಸುವ ಆದೇಶಕ್ಕೆ ಕಾನೂನು ಬದ್ಧತೆ ನೀಡುವ ಮಸೂದೆಯನ್ನು ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು ಹೆಚ್ಚಿನ ಸ್ಪಷ್ಟೀಕರಣಗಳನ್ನು ಕೋರಿ ಮಸೂದೆಯನ್ನು ಹಿಂದಿರುಗಿಸಿರುವುದರಿಂದ, ನೇಮಕಾತಿಗಳು ಮತ್ತಷ್ಟು ವಿಳಂಬವಾಗುತ್ತವೆ.

2.7 ಲಕ್ಷ ಖಾಲಿ ಹುದ್ದೆ:
ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ನೀಡಿದ ಅಂಕಿ ಅಂಶದ ಪ್ರಕಾರ ರಾಜ್ಯದ
43 ಇಲಾಖೆಗಳಲ್ಲಿ ಒಟ್ಟು 2.73 ಲಕ್ಷ ಉದ್ಯೋಗಗಳು ಖಾಲಿ ಇದ್ದು, ಶಿಕ್ಷಣ ಇಲಾಖೆಯಲ್ಲಿ 70,000 ಹಾಗೂ ಆರೋಗ್ಯ ಇಲಾಖೆಯಲ್ಲಿ 35,000 ಹಾಗೂ ಗೃಹ ಇಲಾಖೆಯಲ್ಲಿ 23,500 ಹುದ್ದೆಗಳು ಖಾಲಿ ಇವೆ ಎನ್ನಲಾಗುತ್ತಿದೆ.

ಖಾಲಿ ಹುದ್ದೆಗಳ ಭರ್ತಿಯಾಗದೇ ಹಲವು ವರ್ಷಗಳಿಂದ ಹಾಗೇ ಇದ್ದು, ಸರ್ಕಾರ ಇವುಗಳಲ್ಲಿ ಕೆಲವನ್ನಾದರೂ ಭರ್ತಿ ಮಾಡುವ ಒತ್ತಡದಲ್ಲಿದೆ. ಈ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ತಿಂಗಳು ಧಾರವಾಡದಲ್ಲಿ ಸಾವಿರಾರು ಯುವಕರು ಬೃಹತ್​ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರುವವರೆಗೆ ಸರ್ಕಾರದ ಮೇಲೆ ಒತ್ತಡ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!