Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕೇವಲ ಎಸ್ಸಿ ಎಂದು ಬರೆಸಿದರೆ ಯಾವುದೇ ಸೌಲಭ್ಯವಿಲ್ಲ ಮಾದಿಗ ಎಂದೇ ಬರೆಸಿ-ಆಂಜನೇಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುವತ್ತು ವರ್ಷದ ಹೋರಾಟ ಫಲ ಒಳಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು
, ಈಗ ನಮ್ಮ ಮುಂದಿರುವ ಸವಾಲು ಜಾತಿ ಸಮೀಕ್ಷೆ ಶೇ.100ರಷ್ಟು ಯಶಸ್ವಿಗೊಳಿಸುವುದಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದರು.

ಬೆಂಗಳೂರಿನ ಲಿಡ್ಕರ್ ಭವನದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ  ಶನಿವಾರ ಹಮ್ಮಿಕೊಂಡಿದ್ದ ಮಾದಿಗ ಮುಖಂಡರ ಜಾಗೃತಿ ಕಾರ್ಯಕ್ರಮದಲ್ಲಿ ಜಾತಿಸಮೀಕ್ಷೆ ವೇಳೆ ಬರೆಯಿಸಿ ನಮ್ಮ ಜಾತಿ ಮಾದಿಗ ಎಂಬ ಭಿತ್ತಿಪತ್ರ, ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದಲ್ಲಿನ ಕೆಲವರು ನಮ್ಮ ಜನಸಂಖ್ಯೆ ಹೆಚ್ಚು ಇದೆ ಎನ್ನುತ್ತಿದ್ದಾರೆ. ಆದರೆ, ವಾಸ್ತವವಾಗಿ ಮಾದಿಗರ ಸಂಖ್ಯೆ ಹೆಚ್ಚಿದೆ. ಆದರೆ, ನಮ್ಮಲ್ಲಿ ಜಾಗೃತಿ ಕೊರತೆ ಕಾರಣಕ್ಕೆ ಹಿಂದುಳಿದಿದ್ದೇವೆ. ಈಗ ಜಾತಿಸಮೀಕ್ಷೆ ಬಳಿಕ ಎಲ್ಲ ಸತ್ಯ ಹೊರಬೀಳಲಿದೆ. ಅವರವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಆಗಲಿದೆ ಎಂದು ಹೇಳಿದರು.

ಆದ್ದರಿಂದ ಮಾದಿಗ ಸಮುದಾಯವರು ಪ್ರತಿ ಊರು, ಪಟ್ಟಣ, ಕಾಲೋನಿ, ಕೇರಿ, ಓಣಿ, ಬಡಾವಣೆಗಳಲ್ಲಿನ ಮಾದಿಗ ಸಮುದಾಯದ ಪ್ರತಿ ಮನೆಗೆ ಭೇಟಿ ನೀಡಿ ಮೇ 5ರಿಂದ 17ರ ವರೆಗೆ ಮನೆಗಳಲ್ಲಿಯೇ ಇದ್ದು, ಜಾತಿ ಸಮೀಕ್ಷೆದಾರರು ಮನೆಗೆ ಬಂದಾಗ ನಾವು ಕೋಡ್ 61 ಮಾದಿಗ ಎಂದು ಹೇಳಬೇಕು. ಈ ಮೂಲಕ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚು ಮೀಸಲಾತಿ ಪಡೆಯುವ ಪ್ರಯತ್ನ ಮಾಡಬೇಕಿದೆ ಎಂದರು.

ಮುವತ್ತು ವರ್ಷ ಹೋರಾಟ ಮಾಡಿದ ಸಂಘಟನೆಗಳ ನಾಯಕರು, ಮುಖಂಡರು, ಚಿಂತಕರು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಪರೋಕ್ಷವಾಗಿ ಬೆಂಬಲಕ್ಕೆ ನಿಂತ ನೌಕರ ವರ್ಗ ಮೇ 5ರಿಂದ ಮೇ 23ರ ವರೆಗೆ ವಿಶ್ರಾಂತಿ ರಹಿತವಾಗಿ ಚಟುವಟಿಕೆಯಲ್ಲಿರಬೇಕು. ಮಾದಿಗ ಸಮುದಾಯದ ಯಾವುದೇ ಒಂದು ಕುಟುಂಬ, ಒಬ್ಬ ಸದಸ್ಯನೂ ಜಾತಿಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕಾಗಿದೆ. ಈ ಮೂಲಕ ಮೀಸಲಾತಿ ಪಡೆಯುವಲ್ಲಿ ವಂಚಿತರಾಗಿರುವ ಮಾದಿಗ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾದಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ ಎಂದು ಭಾಷಣ, ಮಾತುಗಳಲ್ಲಿ ಹೇಳುತ್ತಿದ್ದೀರಿ. ಅದನ್ನು ದಾಖಲೆ ರೂಪದಲ್ಲಿ ತೋರಿಸಲು ಮಾದಿಗ ಸಮುದಾಯದ ಸಂಘಟನೆ, ಮುಖಂಡರುಗಳು ಪ್ರತಿ ಬಡಾವಣೆ, ಮನೆಗಳಿಗೆ ಭೇಟಿ ನೀಡಿ ನಮ್ಮ ಜಾತಿ ಮಾದಿಗ ಎಂದು ಹೆಮ್ಮೆಯಿಂದ ಹೇಳುವಂತೆ ಜಾಗೃತಿ ಮೂಡಿಸಬೇಕು ಎಂದರು.

ಸವಲತ್ತು ಬೇಕಾದರೆ ಕಡ್ಡಾಯವಾಗಿ ಮಾದಿಗ ಜಾತಿ ಎಂದು ಹೆಮ್ಮೆಯಿಂದ ಹೇಳಿ, ಇಲ್ಲದಿದ್ದರೆ ಮೀಸಲಾತಿಯಿಂದ ವಂಚಿತರಾಗುತ್ತೀರಿ ಎಂಬ ಎಚ್ಚರ ಇರಬೇಕು ಎಂದು ಎಚ್ಚರಿಸಿದರು.

ಬೆಂಗಳೂರು ಸೇರಿ ರಾಜ್ಯದ ಪ್ರತಿ ಊರು, ಪಟ್ಟಣ, ನಗರದಲ್ಲಿನ ಎಲ್ಲ ಜಾತಿ, ಧರ್ಮದವರ ಮನೆಗಳಿಗೆ ಸಮೀಕ್ಷೆದಾರರು ಭೇಟಿ ನೀಡುತ್ತಾರೆ. ಈ ವೇಳೆ ಎಲ್ಲೇಲ್ಲಿ ಮಾದಿಗರ ಮನೆಗಳು ಇವೆಯೆಂಬುದನ್ನು ಗುರುತಿಸಿ, ಅವರ ಮನೆಗೆ ಸಮೀಕ್ಷೆದಾರರು ಬಂದಾಗ ನೀವುಗಳು ಖುದ್ದಾಗಿ ಇದ್ದು ಮಾದಿಗ ಎಂದು ಹೇಳಿಸಬೇಕು. ಈ ಮೂಲಕ ಮೀಸಲಾತಿಯಲ್ಲಿ ಹೆಚ್ಚು ಪ್ರಮಾಣ ನಮ್ಮದಾಗಿಸಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ. ನೊಂದ, ಅಸ್ಪೃಶ್ಯ ಜನರನ್ನು ಮುಖ್ಯವಾಹಿನಿಗೆ ತರಲು ಪಣ ತೊಟ್ಟಿದ್ದಾರೆ. ಅವರು ಒಳಮೀಸಲಾತಿ ಜಾರಿಗೊಳಿಸಲು ಹೆಚ್ಚು ಆಸಕ್ತರಾಗಿದ್ದು, ಅವರ ಕಾರ್ಯಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ತಿಳಿಸಿದರು.

ಐಎಎಸ್ ನಿವೃತ್ತ ಅಧಿಕಾರಿ ಬಿ.ಎಚ್.ಅನಿಲ್‌ಕುಮಾರ್, ನಿವೃತ್ತ ಐಆರ್‌ಎಸ್ ಅಧಿಕಾರಿ ಭೀಮಾಶಂಕರ್, ಆದಿಜಾಂಬವ ಸಂಘದ ಅಧ್ಯಕ್ಷ ಭೀಮರಾಜ್, ಮಾದಿಗ ದಂಡೋರದ ಮುಖಂಡ ಶ್ರೀನಿವಾಸ್, ಅಹಿಂದ ನಾಯಕ ಮುತ್ತುರಾಜ್, ಮುಖಂಡರಾದ ಸುಬ್ಬರಾಯುಡು, ನಾರಾಯಣ ಇತರರು ಮಾತನಾಡಿದರು.

“18 ದಿನಗಳೇ ಮಹತ್ವ ಮೇ 5ರಿಂದ ಮೇ 23ರ ವರೆಗೆ ಒಟ್ಟು 18 ದಿನಗಳ ಕಾಲ ನಡೆಯಲಿರುವ ಜಾತಿಸಮೀಕ್ಷೆ ಕಾರ್ಯ, 30 ವರ್ಷದ ಕಾಲ ನಡೆಸಿದ ಹೋರಾಟಕ್ಕಿಂತಲೂ ಹೆಚ್ಚು ಮಹತ್ವದ್ದಾಗಿದೆ. ಆದ್ದರಿಂದ ಈ ಸಮಯದಲ್ಲಿ ನಾವು ಹೆಚ್ಚು ಎಚ್ಚರ ವಹಿಸಬೇಕು. ಮಾದಿಗ ಸಮುದಾಯದ ಪ್ರತಿ ಮನೆಗೆ ಭೇಟಿ ನೀಡಿ ಸಮೀಕ್ಷೆದಾರರು ಬಂದಾಗ ನಮ್ಮ ಜಾತಿ ಮಾದಿಗ ಎಂದು ಬರೆಯಿಸುವಂತೆ ಜಾಗೃತಿಗೊಳಿಸಬೇಕು”. ಆಂಜನೇಯ .

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!