Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಜಾತಿಗಣತಿ ವರದಿ ಜಾರಿಗೊಳಿಸುವುದು ಅತ್ಯವಶ್ಯಕ: ಯೋಗೀಶ್ ಸಹ್ಯಾದ್ರಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿಗೊಳಿಸುವುದು ಪ್ರಸ್ತುತ ಹಾಗೂ ಸಮಾಜದ ಸರ್ವ ಜಾತಿಗಳ ಅಭ್ಯುದಯಕ್ಕೆ ಪೂರಕ. ಈ ವರದಿ ಜಾರಿಯಿಂದ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ವರವಾಗಲಿದೆ ಎಂದು ಲೇಖಕ ಹಾಗೂ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಅಭಿಪ್ರಾಯಪಟ್ಟಿದ್ದಾರೆ.


ಪತ್ರಿಕಾ ಹೇಳಿಕೆ ನೀಡಿರುವ ಯೋಗೀಶ್ ಸಹ್ಯಾದ್ರಿ ಅವರು, ಕಾಂತರಾಜ್ ಆಯೋಗವು 2015 ರಿಂದ ಸಮೀಕ್ಷೆ ನಡೆಸಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯು ಮೇಲ್ನೋಟಕ್ಕೆ ಅತ್ಯಂತ ಸ್ಪಷ್ಟ ಹಾಗೂ ವೈಜ್ಞಾನಿಕವಾದುದಾಗಿದ್ದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದ ಹಲವಾರು ಜಾತಿ-ವರ್ಗಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಸುಮಾರು 170 ಕೋಟಿಗಳಷ್ಟು ಖರ್ಚು ಮಾಡಿ ವೈಜ್ಞಾನಿಕ ದತ್ತಾಂಶಗಳೊಂದಿಗೆ ಸಿದ್ಧಪಡಿಸಿರುವ ವರದಿಯಿಂದ ಹಿಂದುಳಿದ ವರ್ಗಗಳ ಮತ್ತು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದಲ್ಲಿ ಪಿ.ಹೆಚ್.ಡಿ ಪದವಿ, ಮೆಡಿಕಲ್, ಇಂಜಿನಿಯರಿಂಗ್, ಸಿಇಟಿ, ಎನ್ಇಟಿ ಹಾಗು ಅನೇಕ ತರಹದ ಉದ್ಯೋಗವಕಾಶಗಳಲ್ಲಿ ಅತ್ಯಂತ ಪ್ರಯೋಜನಕಾರಿಯಾಗಲಿದೆ. 

ಆದ್ದರಿಂದ, ಹಿಂದುಳಿದ ವರ್ಗಗಳ ಅಹಿಂದ ನಾಯಕರೆಂದೇ ಗುರುತಿಸಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ಜಾತಿಗಳ ಜನರ ಹಿತದೃಷ್ಠಿಯಿಂದ ಈಗಾಗಲೇ ಸ್ವೀಕರಿಸಿರುವ ಕಾಂತರಾಜ್ ಆಯೋಗದ ವರದಿ ಹಾಗೂ ನ್ಯಾಯಮೂರ್ತಿ ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ಈ ವರ್ಷದಿಂದಲೇ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ನೆಲೆಸಿರುವ ಎಲ್ಲ ಜಾತಿಗಳ ಜನರು ಕನ್ನಡಿಗರೇ ಆಗಿದ್ದು ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಹಾಗು ಇನ್ನಿತರ ಶೋಷಿತ ಸಮುದಾಯಗಳ ಅಭಿವೃದ್ಧಿ ಯಾವುದೇ ಸರ್ಕಾರಗಳ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ.

1921 ರಲ್ಲಿ ಮಿಲ್ಲರ್ ಆಯೋಗದ ವರದಿಯಿಂದ ಅನೇಕ ಜಾತಿಗಳ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯನ್ನು ಗಮನಿಸಬಹುದು. ಆದ್ದರಿಂದ ಆಗಸ್ಟ್ 01, 2024 ರಂದು ಸುಪ್ರೀಂಕೋರ್ಟ್ ಪೂರ್ಣಪೀಠ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸದಾಶಿವ ಆಯೋಗದ ಒಳಮೀಸಲಾತಿ ಜಾರಿ ಹಾಗು 2018 ರಲ್ಲಿ ಪೂರ್ಣಗೊಂಡಿರುವ ಕಾಂತರಾಜ್ ಆಯೋಗದ ವರದಿಯನ್ನು ಸರ್ಕಾರ ಅಕ್ಟೋಬರ್ 25 ರಿಂದ ಜರುಗುವ ಸದನದಲ್ಲಿ ಚರ್ಚಿಸಿ ಶೀಘ್ರವಾಗಿ ಅನುಷ್ಠಾನಗೊಳಿಸುವುದು ಸೂಕ್ತವಾದುದು.

ಇಂಥಹ ವಿಷಯಗಳಲ್ಲಿ ಸಾಹಿತಿಗಳು, ಬುದ್ಧಿಜೀವಿಗಳು, ವಿದ್ಯಾವಂತರು ಸರ್ಕಾರಕ್ಕೆ ಸಲಹೆ ನೀಡದೆ ಹೋದರೆ ರಾಜ್ಯದ ಬೆಳವಣಿಗೆಗೆ ಮಾರಕವಾಗಬಹುದು ಎಂದು ತಮ್ಮ ಪತ್ರಿಕಾ ಹೇಳಿಕೆಯ ಮೂಲಕ ಆಗ್ರಹಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!