Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
35
ಬಿಲಿಯನ್ ಡಾಲರ್ ಹೂಡಿಕೆ| 15 ಮಿಲಿಯನ್ ಸಣ್ಣ ಉದ್ಯಮಗಳಿಗೆ ನೆರವು | ಲಕ್ಷಾಂತರ ಉದ್ಯೋಗಗಳ ಸೃಷ್ಟಿ!ಗೆ ಅವಕಾಶ ಕಲ್ಪಿಸಲಿರುವ ಅಮೆಜಾನ್ ಕಂಪನಿಯ ಕಾರ್ಪೋರೇಟ್ ಕಚೇರಿಯನ್ನು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಉದ್ಘಾಟಿಸಿದರು.

ಅಮೆಜಾನ್ ಕಂಪನಿಯು ಯಲಹಂಕ ಸಮೀಪದಲ್ಲಿ ನಿರ್ಮಿಸಿರುವ, 11 ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದಲ್ಲಿ ಇದು ಅಮೆಜಾನ್ ಕಂಪನಿಯ 10ನೆಯ ಕಾರ್ಪೊರೇಟ್ ಕಚೇರಿಯಾಗಿದೆ.

ರಾಜ್ಯದೊಂದಿಗೆ ಎರಡು ದಶಕಗಳ ಬಾಂಧವ್ಯ ಹೊಂದಿರುವ ಕಂಪನಿಯು ಮುಂದಿನ 4 ವರ್ಷಗಳಲ್ಲಿ ಭಾರತದಲ್ಲಿ 35 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ 15 ಮಿಲಿಯನ್ ಸಣ್ಣ ಉದ್ಯಮಗಳಿಗೆ ನೆರವು ಸಿಗಲಿದ್ದು, ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಲ್ಲಿ ರಾಜ್ಯಕ್ಕೆ ಗಮನಾರ್ಹ ಪಾಲು ಹರಿದು ಬರಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯವು 3.80 ಲಕ್ಷ ರೂ.ಗಳಿಗಿಂತ ಹೆಚ್ಚು ತಲಾ ಆದಾಯ ಹೊಂದಿದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಜೊತೆಗೆ, ದೇಶದ ಬೊಕ್ಕಸಕ್ಕೆ ವಾರ್ಷಿಕ 1.6 ಲಕ್ಷ ಕೋಟಿ ರೂ. ಜಿ.ಎಸ್.ಟಿ ಪಾವತಿ ಮೂಲಕ ದ್ವಿತೀಯ ಸ್ಥಾನದಲ್ಲಿದ್ದೇವೆ. ನಾವೀನ್ಯತಾ ಸೂಚ್ಯಂಕದಲ್ಲಿ ಬೆಂಗಳೂರು ಜಾಗತಿಕ ಸ್ತರದಲ್ಲಿ 21ನೇ ಸ್ಥಾನಕ್ಕೆ ಜಿಗಿದಿದೆ. ಟೆಕ್-ಸಿಟಿ ಸೂಚ್ಯಂಕದಲ್ಲಿ ಮೊದಲ 30 ಸ್ಥಾನಗಳ ಒಳಗೆ ಕಾಣಿಸಿಕೊಂಡಿರುವ ದೇಶದ ಏಕೈಕ ನಗರ ಬೆಂಗಳೂರಾಗಿದೆ.

ಕಳೆದ ವರ್ಷ ಬೆಂಗಳೂರಿನಲ್ಲಿ 14.6 ಮಿಲಿಯನ್ ಚದರ ಅಡಿ ಜಾಗವನ್ನು ಕೈಗಾರಿಕಾ ವಹಿವಾಟು ಉದ್ದೇಶಕ್ಕೆ ಭೋಗ್ಯಕ್ಕೆ ನೀಡಿದ್ದು, ನಾವು ಪ್ರಥಮ ಸ್ಥಾನದಲ್ಲಿದ್ದೇವೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಒಟ್ಟು 900 ಜಿಸಿಸಿ ಕೇಂದ್ರಗಳಿದ್ದು, ಇವುಗಳ ಪೈಕಿ ಶೇ.35ರಷ್ಟು ಕರ್ನಾಟಕದಲ್ಲೇ ಇವೆ. ಇ-ಕಾಮರ್ಸ್ ವಹಿವಾಟಿಗೆ ಬೇಕಾದ ಮೂಲಸೌಕರ್ಯದಲ್ಲೂ ರಾಜ್ಯವು ಮೊದಲ ಸ್ಥಾನದಲ್ಲಿದೆ.

ನಮ್ಮಲ್ಲಿ 42.48 ಲಕ್ಷ ಟನ್ ದಾಸ್ತಾನು ಸಂಗ್ರಹಿಸುವಷ್ಟು ಉಗ್ರಾಣಗಳು ಮತ್ತು 233 ಶೀತಲಗೃಹಗಳಿವೆ. ಇದಕ್ಕೆ ತಕ್ಕಂತೆ ಇ-ಕಾಮರ್ಸ್ ವಹಿವಾಟು ಶೇ.11ರಷ್ಟು ಬೆಳವಣಿಗೆ ಸಾಧಿಸುತ್ತಿದೆ.

ಅಮೆಜಾನ್ ಮತ್ತು ಜಾಗತಿಕ ಮಟ್ಟದ ಇತರ ಕಂಪನಿಗಳು ರಾಜ್ಯದಲ್ಲಿರುವ ಈ ಕೈಗಾರಿಕಾಸ್ನೇಹಿ ಕಾರ್ಯಪರಿಸರದ ಲಾಭವನ್ನು ಪಡೆದುಕೊಂಡು ಹೆಚ್ಚುಹೆಚ್ಚು ಹೂಡಿಕೆ ಮಾಡಬೇಕು. ಜತೆಗೆ ಇಲ್ಲೇ ಉತ್ಪಾದನೆ ಮಾಡಿ, ಜಗತ್ತಿನ ವಿವಿಧ ದೇಶಗಳಿಗೆ ರಫ್ತು ಮಾಡುವ ಮೂಲಕ ಕರ್ನಾಟಕವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಮೆಜಾನ್ ಕಂಪನಿಯ ಜಾಗತಿಕ ವ್ಯವಹಾರಗಳ ವಿಭಾಗದ ಮುಖ್ಯಸ್ಥ ಡೇವಿಡ್ ಝಪೊಲೋಸ್ಕಿ, ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ, ಉಪಾಧ್ಯಕ್ಷ ಸಮೀರ್ ಕುಮಾರ್, ಜಾಗತಿಕ ಆಸ್ತಿಪಾಸ್ತಿಗಳ ವಿಭಾಗದ ಉಪಾಧ್ಯಕ್ಷ ಸೀನ್ ಲೀ ಮುಂತಾದವರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!