ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪಾಲನ ಜೋಗಿಹಳ್ಳಿಯ ಡೈರಿ ಆವರಣದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಕುಮಾರ್ ಎಂ ಬಿ. ನೇತೃತ್ವದಲ್ಲಿ ಗ್ರಾಮಸಭೆಯನ್ನು ನಡೆಸಿ ಮನೆ ಮನೆಗೆ ಪೊಲೀಸ್ ಆಸರೆ ಮತ್ತು ಸನ್ಮಿತ್ರಾ ಯೋಜನೆಗಳ ಬಗ್ಗೆ ತಿಳಿಸಲಾಯಿತು.
ಪಾಲನ ಜೋಗಿಹಳ್ಳಿಯ ಡೈರಿ ಆವರಣದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಕುಮಾರ್ ಎಂ ಬಿ. ನೇತೃತ್ವದಲ್ಲಿ ಗ್ರಾಮಸಭೆಯನ್ನು ನಡೆಸಿ ಮನೆ ಮನೆಗೆ ಪೊಲೀಸ್ ಆಸರೆ ಮತ್ತು ಸನ್ಮಿತ್ರಾ ಯೋಜನೆಗಳ ಬಗ್ಗೆ ತಿಳಿಸಲಾಯಿತು.
ಸಂಚಾರಿ ನಿಯಮಗಳ ಪಾಲನೆ ಮಾದಕ ವಸ್ತುಗಳಿಂದ ದೂರವಿರುವುದು ಮೊಬೈಲ್ ನ ಅತಿಯಾದ ವ್ಯಸನದಿಂದ ದೂರವಿರುವುದು ಮತ್ತು ಇತರೆ ಪೊಲೀಸ್ ಸಂಬಂಧಿ ವಿಚಾರಗಳ ಬಗ್ಗೆ ಚರ್ಚಿಸಿ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದು ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಾಂತರ ಪೋಲಿಸ್ ಠಾಣೆಯ ಸಿಬ್ಬಂದಿ ವರ್ಗ ಮತ್ತು ಗ್ರಾಮದ ಸಾರ್ವಜನಿಕರು ಹಾಜರಿದ್ದರು.


