ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾದ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಹಿರಿಯೂರಿನ ಸಕ್ರಿಯ ಬಿಜೆಪಿ ಕಾರ್ಯಕರ್ತ ಕೇಶವಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷರಾದ ಎಚ್.ಬಿ. ಬಾಲರಾಜ್ ಯಾದವ್ ಅವರು ಕೇಶವಮೂರ್ತಿ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಪಕ್ಷದ ಸಂಘಟನೆ ಮತ್ತು ಓಬಿಸಿ ಮೋರ್ಚಾದ ಬಲವರ್ಧನೆಗೆ ಶ್ರಮಿಸುವಂತೆ ನೂತನ ಪದಾಧಿಕಾರಿಗೆ ಜವಾಬ್ದಾರಿ ವಹಿಸಲಾಗಿದ್ದು, ಕೇಶವಮೂರ್ತಿ ಅವರ ನೇಮಕಕ್ಕೆ ಹಿರಿಯೂರಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.



