Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಅಭಿವೃದ್ಧಿಗೆ ಕೊಂಗಾಡಿಯಪ್ಪನವರ ಪಾತ್ರ ಮಹತ್ವವಾದುದು-ರೇಣುಕಾ

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ನವರು ದೊಡ್ಡಬಳ್ಳಾಪುರ ತಾಲೂಕಿನ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸತತವಾಗಿ ಶ್ರಮಿಸಿದರು. ಶಿಕ್ಷಣ ಹಾಗೂ ನೆಯ್ಗೆ ಉದ್ಯಮಕ್ಕೆ ಅವರು ನೀಡಿದ ಕೊಡುಗೆ ಅಪಾರ.


ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಕಲ್ಪಿಸಿ ಅವರ ಅಬ್ಯುದಯಕ್ಕೆ ಕಾರಣರಾದವರು. ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸೇರಿದಂತೆ ಹಲವಾರು ದೇವಾಲಯಗಳ ಧರ್ಮದರ್ಶಿಗಳಾಗಿ ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಎಂದು ವಿಕಾಸ ಪ್ರಶಿಕ್ಷಣ ಕೇಂದ್ರದಸಂಚಾಲಕ ರೇಣುಕಾ ರವರು ಹೇಳಿದರು.

       ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಕಾಸ ಸಂಸ್ಥೆ ಸಹಯೋಗದಲ್ಲಿ ದರ್ಗಾ ಜೋಗಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದ ಕೊಂಗಾಡಿಯಪ್ಪ ನವರ ಜನ್ಮದಿನಾಚರಣೆ ಅಂಗವಾಗಿ ನಡೆದ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೊಂಗಾಡಿಯಪ್ಪ ನವರು ಯಾವುದೇ ಆಸ್ತಿ ಅಧಿಕಾರಕ್ಕಾಗಿ ಆಸೆ ಪಡದೆ ಊರಿನ ಜನತೆಯ ಹಿತಕ್ಕಾಗಿ ತಮ್ಮನ್ನು ತೊಡಗಿಸಿ ಕೊಂಡಿದ್ದರು ಎಂಬುದರಲ್ಲಿ ಎರಡು ಮಾತಿಲ್ಲ.

ತಾಲೂಕಿನ ದೂರದ ಗ್ರಾಮಗಳಿಂದ ಪರೀಕ್ಷೆ ಬರೆಯಲು ಬರುತ್ತಿದ್ದ ನೂರಾರು ವಿದ್ಯಾರ್ಥಿಗಳಿಗೆ ಊರಿನ ದಾನಿಗಳಿಂದ ದವಸ ದಾನ್ಯಗಳನ್ನು ಸಂಗ್ರಹಿಸಿ ದಾಸೋಹ ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದರು. ಯಾವುದೇ ಅಧಿಕ್ಕಾರಕ್ಕಾಗಿ ಆಸೆ ಪಡದೆ ಸರಳ ಜೀವನ ಹಾಗೂ ನಿಸ್ವಾರ್ಥ ಸೇವೆ ಮಾಡುತ್ತಿದ್ದ ಕೊಂಗಾ ಡಿಯಪ್ಪನವರನ್ನು ಊರಿನ ಜನತೆ ಪ್ರೀತಿಯಿಂದ ಕಾಕಣ್ಣ ಎಂದು ಕರೆಯುತ್ತಿದ್ದುದು ಗಮನಾರ್ಹ ಸಂಗತಿ.

ಜನ ಸಾಮಾನ್ಯರ ಜೊತೆ ಸದಾ ಒಡನಾಟದಲ್ಲಿದ್ದ ಕೊಂಗಾಡಿಯಪ್ಪನವರು ತಮ್ಮ ಬಳಿಗೆ ಬರುವ ಎಲ್ಲರಿಗೂ ಓದ್ರೋ... ಓದ್ರೋ.. ಕೆಟ್ಟೋಗಬ್ಯಾಡ್ರಿ.. ಚನ್ನಾಗಿ ಓದಿ ವಿದ್ಯಾವಂತರಾಗಿ ಊರಿಗೆ ಒಳ್ಳೆಯ ಹೆಸರನ್ನು ತನ್ನಿ ಎಂಬ ಅವರ ಮಾತು ಕೊಂಗಾಡಿಯಪ್ಪನವರಿಗೆ ಶಿಕ್ಷಣದ ಬಗ್ಗೆ ಇದ್ದ ಕಾಳಜಿಯನ್ನು ತೋರುತ್ತದೆ. ಇವರ ಸಾಮಾಜಿಕ ಜನಪರ ಸೇವೆಯನ್ನು ಗುರುತಿಸಿ ಆಗಿನ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು ಕೊಂಗಾಡಿಯಪ್ಪ ನವರಿಗೆ ಲೋಕಸೇವಾನಿರತ ಎಂಬ ಬಿರುದನ್ನು ನೀಡಿ ಗೌರವಿಸಿದ್ದರು ಎಂದು ಹೇಳಿದರು.

       ಕಾರ್ಯಕ್ರಮದಲ್ಲಿ ದರ್ಗಾಜೋಗಿಹಳ್ಳಿ ಸರ್ಕಾರಿ ಶಾಲೆಯ ಮುಕ್ಯೋಪಾಧ್ಯಾಯ ಕಣ್ಣಯ್ಯ, ಶಿಕ್ಷಕರಾದ ಹೆಚ್. ಎನ್. ಪ್ರಕಾಶ್,ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ. ಪಿ. ಆಂಜನೇಯ, ಕಜಪ ಸದಸ್ಯ ವೆಂಕಟರಾಜು, ಶ್ರೀನಿವಾಸ್, ಕಾರ್ಯಕ್ರಮದ ಸಂಚಾಲಕರಾದ ಶ್ರಾವಣಿ, ಪಲ್ಲವಿ, ಕವಿತಾ, ಚಂದ್ರಕಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!