Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ- ಕೆ.ವಿ.ಪ್ರಭಾಕರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಂದ್ರ ಲೋಕಕ್ಕೆ ಕಾಲಿಟ್ಟರೂ
, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ನಡೆಯುತ್ತಿರುವುದು ಬೇಸರದ ಸಂಗತಿ. ಜಾತೀಯತೆ, ಮೂಢನಂಬಿಕೆ ವಿಜೃಂಭಿಸುತ್ತಲೇ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರದ ಕೆ.ವಿ.ಪ್ರಭಾಕರ್ ಬೇಸರ ವ್ಯಕ್ತಪಡಿಸಿದರು.

ಮನ್ವಂತರ ಪ್ರಕಾಶನ ಮತ್ತು ತರಬೇತಿ ಸಂಸ್ಥೆ ಆಯೋಜಿಸಿದ್ದ ನಾನಾ ಶ್ರಮಿಕ ಕ್ಷೇತ್ರಗಳ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಮನ್ವಂತರ ಮಾಧ್ಯಮ ಕೌಶಲ್ಯಾಭಿವೃದ್ಧಿ ತರಬೇತಿ ಸಂಸ್ಥೆ ಕಳೆದ ಏಳು ವರ್ಷಗಳಿಂದ "ಸಹೃದಯತೆ, ಸದ್ವಿಚಾರ, ಸಹಬಾಳ್ವೆ ಎನ್ನುವ ಮೂರು ಮಂತ್ರಗಳನ್ನು ಪಾಲಿಸುತ್ತಾ, ಸಮಾಜದಲ್ಲಿ ಹೃದಯವಂತಿಕೆಯ ಬೀಜಗಳನ್ನು ಬಿತ್ತುತ್ತಿದೆ. ತಂತ್ರಜ್ಞಾನದ ಬೆಳವಣಿಗೆಯಿಂದ ಮನುಷ್ಯ ಜಗತ್ತಿನಲ್ಲಿ ಒಂದು ಹೊಸ ಮನ್ವಂತರವೇ ಆರಂಭವಾಗಿದೆ. ಮನೆಗಳ ಒಳಗೂ ಮನುಷ್ಯ ಸಂಬಂಧ, ಮಾನವೀಯ ಬೆಸುಗೆ ಕಾಣೆಯಾಗುತ್ತಿರುವ ಹೊತ್ತಲ್ಲಿ ಕೋಲಾರದ ಮಣ್ಣಿನಲ್ಲಿ ಮನ್ವಂತರ ಸಂಸ್ಥೆ ಮಾನವೀಯ ಬೆಸುಗೆಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮನ್ವಂತರ ಸಂಸ್ಥೆ ದೊಡ್ಡ ದೊಡ್ಡ ಉದ್ಯಮಿಗಳನ್ನು, ಐಎಎಸ್, ಐಪಿಎಸ್ ಅಧಿಕಾರಿಗಳು, ಅಧಿಕಾರಸ್ಥರು, ಹಣವಂತರನ್ನು  ಸನ್ಮಾನಿಸಿ ದೊಡ್ಡ ಹೆಸರನ್ನು ಸಂಪಾದಿಸಬಹುದಿತ್ತು. ಆದರೆ, ಪಾನಿಪೂರಿ ಮಾಡಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ರಮೇಶ್ ಅವರನ್ನು ಗುರುತಿಸಿದೆ. ನಾವು ಬೆಳಗ್ಗೆ ಎದ್ದು ಮನೆಯಿಂದ ಹೊರಗೆ ಕಾಲಿಡುವ ಮೊದಲೇ ಬೀದಿಯನ್ನು ಗುಡಿಸಿ ಸ್ವಚ್ಚವಾಗಿಡುವ ಪೌರ ಕಾರ್ಮಿಕ ಸಮುದಾಯದ ಕೋಕಿಲಾ ಅವರನ್ನು ಗುರುತಿಸಿದೆ ಎಂದರು.

ಕೋಲಾರ ಅಂದರೆ ಸೌಹಾರ್ದತೆಯ ಮಂಟಪ ಇದ್ದ ಹಾಗೆ. ಎಲ್ಲಾ ಧರ್ಮದವರೂ ಒಟ್ಟಾಗಿ ಬೆಸೆದುಕೊಂಡಿರುವ ಶ್ರಮಿಕ ಸಮಾಜ. ಈ ಕೋಲಾರದ ಮಣ್ಣಿನ ಸೌಹಾರ್ದತೆ ಮತ್ತು ಸಹಬಾಳ್ವೆಗೆ ನೀರು ಗೊಬ್ಬರ ಹಾಕುತ್ತಿರುವ ಮುಬಾರಕ್ ಬಾಗಬಾನ್ ಅವರನ್ನು ಗುರುತಿಸಿದೆ. ಎಲ್ಲರೂ ಸಿನಿಮಾ ಮತ್ತು ಸೀರಿಯಲ್ ನಟ ನಟಿಯರನ್ನು ಹುಡುಕಿಕೊಂಡು ಓಡುತ್ತಿರುವ ಹೊತ್ತಿನಲ್ಲಿ ಮನ್ವಂತರ ಸಂಸ್ಥೆ, ಸಾಂಪ್ರದಾಯಿಕ ಕಲೆ, ಲಾವಣಿ ಹಾಡುವ ಅರಳು ಮಲ್ಲಿಗೆ ಪ್ರಭುದೇವರನ್ನು, ನಾದಸ್ವರ ಕಲಾವಿದ ವಿದ್ವಾನ್ ಬಿ.ಎನ್.ಗೋಪಾಲ್, ಜಾನಪದ ಕ್ಷೇತ್ರದ ಲಲಿತಮ್ಮ, ಕ್ರೀಡಾಪಟು ಮಹಾದೇವಿ, ನಿವೃತ್ತ ಶಿಕ್ಷಕಿ ಕುಮುದಾ, ವಕೀಲರೂ ಹಾಗೂ ಹಿರಿಯ ಕ್ರಿಕೆಟ್ ಪಟುಗಳಾದ ಗ್ರಾಮೀಣ ಪ್ರತಿಭೆ ಬಿ.ಸಿ.ಪರಮೇಶ್ ಅವರನ್ನು ಗುರುತಿಸಿ ಗೌರವಿಸುತ್ತಿದೆ. ಮಾತ್ರವಲ್ಲದೆ ಬಹುಭಾಷಿಕ ನೆಲದಲ್ಲಿ ಕನ್ನಡಕ್ಕಾಗಿ ಶ್ರಮಿಸಿದ ಬಿ.ಎನ್.ಮೋಹನ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪುರಸ್ಕಾರ ನೀಡುತ್ತಿರುವುದಕ್ಕೆ ವಿಶೇಶವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಇವರೆಲ್ಲರ ಕ್ಷೇತ್ರಗಳೂ ಬೇರೆ ಬೇರೆ ಇರಬಹುದು. ಆದರೆ, ಎಲ್ಲರನ್ನೂ ನಾನು "ಸಾಮಾಜಿಕ ಶುಶ್ರೂಶಕರು. ಸಮಾಜದ ಆರೋಗ್ಯಕ್ಕಾಗಿ ಶ್ರಮಿಸುತ್ತಿರುವ Social Doctors  ಎಂದು ಕರೆಯಲು ಇಚ್ಚಿಸುತ್ತೇನೆ. ಇಂತಹ ಸಹೃದಯರನ್ನು ಸನ್ಮಾನಿಸುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಬಹಳ ಖುಷಿ ಕೊಟ್ಟಿದೆ ಎಂದರು.

ನಮ್ಮ ಜಿಲ್ಲೆಯ ಮಣ್ಣಿನಲ್ಲಿ ಮನ್ವಂತರ ಬಿತ್ತುತ್ತಿರುವ ಈ ಹೃದಯವಂತಿಕೆ ಮತ್ತು ಸೌಹಾರ್ದದ ಬೀಜಗಳು ಬೆಳೆದು ಹೆಮ್ಮರವಾಗಿ "ಸಹಬಾಳ್ವೆ" ಎನ್ನುವ ನೆರಳನ್ನು ಸದಾ ಕಾಲ ನೀಡುತ್ತಿರಲಿ ಎಂದು ಹಾರೈಸುತ್ತೇನೆ. ಉಳಿದಂತೆ, ಮನ್ವಂತರ ಸಂಸ್ಥೆ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಮೂಲಕ ಗ್ರಾಮೀಣ ಭಾಗದ ಯುವಜನರ ಬಾಳಿಗೆ ಆಸರೆ ಆಗುತ್ತಿದೆ. ನನ್ನ ಸಹಕಾರ ಸದಾ ಈ ಸಂಸ್ಥೆಯ ಜೊತೆಗೆ ಇರುತ್ತದೆ ಎಂದು ಹೇಳಲು ಬಯಸುತ್ತೇನೆ.

ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ, ಪ್ರಾಯೋಗಿಕವಾಗಿ ಕೆಲಸ ಕಲಿಯಲು ಹೆಚ್ಚಿನ ಆದ್ಯತೆ ಕೊಡುವ ಅಗತ್ಯವಿದೆ. ಈ ಕೆಲಸವನ್ನು ಮನ್ವಂತರ ಮಾಡುತ್ತಿದೆ. ಯುವ ಸಮುದಾಯದಲ್ಲಿ ಕೌಶಲ್ಯದ ತರಬೇತಿ ಮೂಲಕ ಆತ್ಮವಿಶ್ವಾಸವನ್ನು ತುಂಬುವುದು ಬಹಳ ಅರ್ಥಪೂರ್ಣ ಕೆಲಸ. ಏಕ ಕಾಲಕ್ಕೆ ಹತ್ತಾರು ಮಂದಿಯ ವೈಯುಕ್ತಿಕ ಬದುಕಿಗೆ ಆಸರೆಯಾಗುತ್ತಾ, ಸಮಾಜದ ಆರೋಗ್ಯಕ್ಕೂ ಶ್ರಮಿಸುತ್ತಿರುವ ಮನ್ವಂತರ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಬರಬೇಕು ಎನ್ನುವುದು ನನ್ನ ವೈಯುಕ್ತಿಕ ಅಭಿಲಾಷೆ ಎಂದರು.

ಮನ್ವಂತರ ಸಂಸ್ಥೆಯ ಅನಂತರಾಮು ಹಾಗೂ ಬಂಗಾರಪೇಟೆ ಪತ್ರಕರ್ತರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!