Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಲ್ಮೀಕಿ ಅವರ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಅಸೂಯೆಯಿಂದ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಬಳ್ಳಾರಿಯಲ್ಲಿ ಬ್ಯಾನರ್‌ಗಲಭೆ ಪ್ರಕರಣದ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ವಿಜಯೇಂದ್ರ ಮಾತನಾಡಿದರು.


ಸ್ಥಳೀಯ ನಾಯಕರು ಇಲ್ಲಿ ಪುತ್ಥಳಿ ಆಗಬೇಕು ಎಂದು ಕೈಗೊಂಡಿರುವ ತೀರ್ಮಾನ ಸರಿಯಾಗಿದೆ. ಡಿ.24 ರಿಂದ ಡಿ.29 ರವರೆಗೆ ಈ ಜಿಲ್ಲೆಯ ಜನ ಬಹಳ ಸಂಭ್ರಮದಿಂದ ಪುತ್ಥಳಿ ಸ್ವಾಗತ ಕಾರ್ಯಕ್ರಮವನ್ನು ಹಬ್ಬದಂತೆ ಸಂಭ್ರಮಿಸಿದ್ದರು.

 ಈಗ ಕೇವಲ ಬ್ಯಾನರ್ ವಿಚಾರವಾಗಿ ಗಲಾಟೆ ನಡೆದಿದೆ. ಜ.1 ರಂದು ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಕಟ್ಟಿದ್ದಾರೆ. ಬ್ಯಾನರ್ ಕಟ್ಟುವ ವಿಚಾರದಲ್ಲಿ ಜನಾರ್ದನ ರೆಡ್ಡಿ ಅಥವಾ ಶ್ರೀರಾಮುಲು ಅವರಿಗೆ ಅಸಮಾಧಾನವಿದ್ದಿದ್ದರೆ, ಪಾಲಿಕೆ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಶಾಸಕರು, ಇತರೆ ನಾಯಕರಿಗೆ ಕರೆ ಮಾಡಿ, ಬ್ಯಾನರ್ ತೆಗೆಯಿರಿ ಎಂದಿದ್ದರೆ ಅವರು ತೆರವು ಮಾಡುತ್ತಿದ್ದರು. ಆದರೆ ಅವರು ಯಾರಿಗೂ ಸೂಚನೆ ನೀಡಿಲ್ಲ.

ಬದಲಿಗೆ ವಾಲ್ಮೀಕಿ ಅವರಿಗೆ ಅಪಮಾನವಾಗುವ ರೀತಿ ಬ್ಯಾನರ್ ತೆರವುಗೊಳಿಸಿದ್ದಾರೆ. ನಮ್ಮ ಕಾರ್ಯಕರ್ತರು ಮತ್ತೆ ಬ್ಯಾನರ್ ಹಾಕಲು ಹೋಗಿದ್ದಾರೆ. ನಂತರದ ಘಟನೆಗಳನ್ನು ನಾನು ನೋಡಿದ್ದೇನೆ. ಅವರ ಮುಖಂಡತ್ವದಲ್ಲೇ ಬ್ಯಾನರ್ ಹರಿದುಹಾಕಿದ್ದಾರೆ. ಇದು ಸರಿಯೋ ತಪ್ಪೋ ಎಂದು ನಾನು ತೀರ್ಮಾನ ಮಾಡುವುದಿಲ್ಲ, ನೀವುಗಳೇ ತೀರ್ಮಾನ ಮಾಡಿ ಎಂದು ಅವರು ಹೇಳಿದರು. 

ನಾನು ಯಾರ ಬಗ್ಗೆಯೂ ಅವಹೇಳನಕಾರಿ ಹೇಳಿಕೆ ನೀಡಲು ಇಲ್ಲಿಗೆ ಬಂದಿಲ್ಲ. ಕಾನೂನು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಪೊಲೀಸ್ ಅಧಿಕಾರಿಗಳು ಬಹಳ ದಿಟ್ಟವಾಗಿ ಅಗತ್ಯ ತೀರ್ಮಾನ ತೆಗೆದುಕೊಂಡಿದ್ದಾರೆ. ಭದ್ರತಾ ಸಿಬ್ಬಂದಿ ನಡೆ ಸರಿ ಎಂದು ನಾನು ಹೇಳುವುದಿಲ್ಲ.

ಕಾನೂನು ಸೂಕ್ತ ಕ್ರಮ ಕೈಗೊಳ್ಳಲಿದೆ. ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟವರನ್ನು ಬಂಧಿಸಿದ್ದಾರೆ, ಖಾಸಗಿ ಭದ್ರತಾ ಸಿಬ್ಬಂದಿ ಹೊಂದಿರುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಒಂದು ಮಾತು ಹೇಳಲು ಬಯಸುತ್ತೇನೆ.

ಬಳ್ಳಾರಿ ಇತಿಹಾಸ ದೊಡ್ಡದಿದೆ. ದಯವಿಟ್ಟು ಇದರ ಗೌರವಕ್ಕೆ ಧಕ್ಕೆ ಬರುವ ರೀತಿ ನಡೆದುಕೊಳ್ಳಬೇಡಿ. ನಾನು ನಮ್ಮವರಿಗೆ ಬುದ್ಧಿವಾದ ಹೇಳಿದ್ದು, ಮುಂದೆಯೂ ಹೇಳುತ್ತೇನೆ. ಬಿಜೆಪಿಯವರಿಗೆ ಅವರ ನಾಯಕರು ಬಹಳ ದೊಡ್ಡವರಿದ್ದಾರೆ, ಅವರಿಗೆ ಬಿಡುತ್ತೇನೆ. 

ಮೃತ ಕಾರ್ಯಕರ್ತನ ಕುಟುಂಬದ ಜೊತೆ ಪಕ್ಷವಿದೆ. ಕಾನೂನು ಚೌಕಟ್ಟಿನಲ್ಲಿ ಮೃತ ಕಾರ್ಯಕರ್ತನ ಕುಟುಂಬಕ್ಕೆ ಪಕ್ಷದಿಂದ ನೆರವು ಹಾಗೂ ಸರ್ಕಾರಿ ಕೆಲಸ ನೀಡುವ ಬಗ್ಗೆ ಆಲೋಚನೆ ಮಾಡಲಾಗುವುದು. ಈ ಹಿಂದೆ ಯಾವ ತೀರ್ಮಾನ ಆಗಿದೆ ಎಂದು ನೋಡಬೇಕಿದೆ ಎಂದು ವಿಜಯೇಂದ್ರ ತಾಕೀತು ಮಾಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!