Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ದತ್ತು ತಗೆದುಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಕರೆ!

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಬೆಂಗಳೂರು ಮಟ್ಟದ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ದೊಡ್ಡ ಖಾಸಗಿ ಶಾಲೆಗಳನ್ನು ನಡೆಸುತ್ತಿರುವ ಉದ್ಯಮಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಸ್‌ಆರ್ ನಿಧಿಯಡಿ ಹಣ ಖರ್ಚು ಮಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು. "ಸರ್ಕಾರದಲ್ಲಿ 50 ಸಾವಿರ ಶಿಕ್ಷಕರಿದ್ದರೂ ನಿರೀಕ್ಷಿತ ಗುಣಮಟ್ಟ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಹಿಂದೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು" ಎಂದು ಸ್ಪಷ್ಟಪಡಿಸಿದರು.

ಮುಂದಿನ ವಾರ ಕ್ಯಾಬಿನೆಟ್ ವಿಸ್ತರಣೆ; ಸಿಎಂ?
ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ: ರಾಜ್ಯ ಸಂಪುಟ ವಿಸ್ತರಣೆಯು ಮುಂಬರುವ ವಾರದಲ್ಲಿ ನಡೆಯಲಿದೆ ಎಂದು ಸಿಎಂ ಸುಳಿವು ನೀಡಿದ್ದಾರೆ. 

ನೀಟ್ ಅಕ್ರಮದ ವಿರುದ್ಧ ವಾಗ್ದಾಳಿ: "ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಕೊನೆಗೂ ಕೇಂದ್ರ ಸರ್ಕಾರ ಕಣ್ಣು ತೆರೆದಿದೆ. ದೆಹಲಿಯಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ನಾವು ಸಂಸತ್ತಿನಲ್ಲಿಯೂ ಈ ಬಗ್ಗೆ ಚರ್ಚಿಸುತ್ತೇವೆ. ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು" ಎಂದು ಆಗ್ರಹಿಸಿದರು.

ಕೆಪಿಎಸ್‌ಸಿ ಅಧ್ಯಕ್ಷರ ವಿವಾದ: "ಕೆಪಿಎಸ್‌ಸಿ ಅಧ್ಯಕ್ಷರನ್ನು ಬಿಜೆಪಿ ಸರ್ಕಾರದ ಅವಧಿಯಲ್ಲೇ ನೇಮಕ ಮಾಡಲಾಗಿತ್ತು. ಈಗ ಅವರೇ ಪತ್ರ ಬರೆದು ಅಧ್ಯಕ್ಷರನ್ನು ತೆಗೆಯಿರಿ ಎನ್ನುತ್ತಿದ್ದಾರೆ. ಈ ಸಂಬಂಧ ರಾಜ್ಯಪಾಲರು ನಮಗೆ ಪತ್ರ ಬರೆದಿದ್ದು, ಸೂಕ್ತ ಕ್ರಮಕ್ಕೆ ಅನುಮತಿ ನೀಡಿದ್ದೇನೆ" ಎಂದರು.

ಬಿಡದಿ ರೈತರ ಬೆನ್ನಿಗೆ ಸರ್ಕಾರ: ಬಿಡದಿ ಭಾಗದ ರೈತರು ನಮ್ಮವರೇ, ಅವರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ರೈತರ ಜಮೀನಿಗೆ ಸಿಎಂ, ಡಿಸಿಎಂ ಭೇಟಿ: ಬರ ಪರಿಶೀಲನೆ

ಮಾಧ್ಯಮದವರೊಂದಿಗೆ ಮಾತನಾಡಿದ ನಂತರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಹಿರಿಯೂರು ತಾಲೂಕಿನ ಯರಬಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತರ ಜಮೀನುಗಳನ್ನು ಖುದ್ದು ಪರಿಶೀಲಿಸಿದರು.

ಅಲ್ಲದೆ, "ಕೇವಲ ಬೆಂಗಳೂರು, ರಾಮನಗರದಲ್ಲಷ್ಟೇ ಸಭೆ ನಡೆಸದೆ, ಈ ಬಾರಿ ಚಿತ್ರದುರ್ಗದಲ್ಲೇ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲು ತೀರ್ಮಾನಿಸಿದ್ದೇವೆ" ಎಂದು ಸಿಎಂ ತಿಳಿಸಿದರು.

ಬರ ಪರಿಸ್ಥಿತಿ, ಕೃಷಿ ಚಟುವಟಿಕೆಗಳ ಪ್ರಗತಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ, ಶಾಸಕರಾದ ಟಿ. ರಘುಮೂರ್ತಿ, ಬಿ.ಜಿ ಗೋವಿಂದಪ್ಪ, ಕೆಪಿಸಿಸಿ ಉಪಾಧ್ಟಕ್ಷ ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್, ಮಾಜಿ ಶಾಸಕಿ ಪೂರ್ಣಿಮಾ, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!