Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಹಾಲಯ ಅಮಾವಾಸ್ಯೆ-ಪಿತೃ ಪಕ್ಷ-ಎಡೆ ಹಬ್ಬ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾಲಯ ಅಮಾವಾಸ್ಯೆ-ಪಿತೃ ಪಕ್ಷ-ಎಡೆ ಹಬ್ಬ....ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಬಹುತೇಕರ ಮನೆಯಲ್ಲಿ ಆಚರಿಸುವ ಒಂದು ಹಬ್ಬ......


ತೀರಿಹೋದ ಹಿರಿಯರ ನೆನಪಿನಲ್ಲಿ, ಅವರ ಇಷ್ಟದ ಊಟ, ಬಟ್ಟೆ, ವಸ್ತುಗಳು ಇತ್ಯಾದಿಗಳನ್ನು ಇಟ್ಟು ಅವರಿಗೆ ಅರ್ಪಿಸಿದಂತೆ ಮಾಡಿ ನಾವೇ ಉಪಯೋಗಿಸುವುದು......

ಜ್ಯೋತಿಷಿಗಳಂತು ಟಿವಿಗಳಲ್ಲಿ ಇದರ ಬಗ್ಗೆ ಇಲ್ಲಸಲ್ಲದ ಅನೇಕ ಮೌಢ್ಯಗಳನ್ನು ಹೇಳಿ ಜನರನ್ನು ಮತ್ತಷ್ಟು ದಿಕ್ಕು ತಪ್ಪಿಸುತ್ತಿದ್ದಾರೆ.
ಪುನರ್ ಜನ್ಮ
, ಆತ್ಮಗಳ ಅಲೆದಾಟ, ಶವಗಳ ಕನಸುಗಳು,.. ಇನ್ನೂ ಮುಂತಾದ ಭಯಂಕರ ವಿಷಯಗಳನ್ನು ಪ್ರಸ್ತಾಪಿಸಿ ಜನರನ್ನು ಭಯಗೊಳಿಸಿ ಹಬ್ಬದ ತೀವ್ರತೆ ಹೆಚ್ಚಿಸುತ್ತಿದ್ದಾರೆ. ‌ಒಂದೇ ಒಂದು ಟಿವಿ ವಾಹಿನಿ ವಿವೇಚನೆಯಿಂದ ಈ ಹಬ್ಬದ ವಿಮರ್ಶೆ ಮಾಡುತ್ತಿಲ್ಲ. ಊಹಾತ್ಮಕ ಮೂಡನಂಬಿಕೆಯನ್ನೇ ಮತ್ತಷ್ಟು ಆಳಕ್ಕೆ ಇಳಿಸುತ್ತಿದ್ದಾರೆ.

ಬದಲಾದ ಕಾಲಮಾನದಲ್ಲಿ ಈ ಹಬ್ಬದ ಆಚರಣೆಯನ್ನು ಮತ್ತಷ್ಟು ವಿಶಾಲ, ಸರಳ, ಅರ್ಥಪೂರ್ಣ, ಪ್ರಾಯೋಗಿಕ ಮತ್ತು ಮಾನವೀಯಗೊಳಿಸಬಹುದಾದ ಒಂದು ಸಲಹೆ ಮತ್ತು ಮನವಿ.........

ವ್ಯಕ್ತಿಯ ಸಾವೇ ಆತನ ಕೊನೆ. ಬದುಕಿದ್ದಾಗ ಎಷ್ಟೇ ಪ್ರಮುಖನಾಗಿದ್ದರೂ ಉಸಿರು ನಿಂತ ನಂತರ ಆತನ ದೇಹ ಪ್ರಕೃತಿಯಲ್ಲಿ ಲೀನವಾಗುತ್ತದೆ. ಅನಂತರ ನಾವು ಮಾಡುವ ಯಾವ ಕ್ರಿಯೆಗಳು, ಚಟುವಟಿಕೆಗಳು ಅವನಿಗೆ ಅರಿವಾಗುವುದಿಲ್ಲ. ಅವೆಲ್ಲಾ ಬದುಕಿರುವವರ ಮಾನಸಿಕ ನೆಮ್ಮದಿಗಾಗಿ ಆಚರಿಸಿಕೊಂಡು ಬಂದಿರುವ ಸಂಪ್ರದಾಯಗಳು. ಜನ್ಮ ಜನ್ಮಾಂತರ ಎಂಬುದು ಒಂದು ಸಾಂಕೇತಿಕ ಕಲ್ಪನೆ ಮಾತ್ರ.                  

ಹೌದು ನಿಜಸತ್ತ ವ್ಯಕ್ತಿ ಅದರಲ್ಲೂ ನಮ್ಮ ತಾತ, ಅಜ್ಜಿ, ಅಪ್ಪ, ಅಮ್ಮ ಮುಂತಾದ ರಕ್ತ ಸಂಬಂಧಿಗಳು ಆಗಿದ್ದರೆ ಅವರನ್ನು, ಅವರ ಒಳ್ಳೆಯ ಆದರ್ಶ ಗುಣಗಳನ್ನು ನೆನಪಿಸಿಕೊಳ್ಳುವುದು ಮತ್ತು ಅದನ್ನು ಪಾಲಿಸುವುದು, ಬದುಕಿರುವ ಮುಂದಿನ ಪೀಳಿಗೆಯವರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಅದರಲ್ಲಿ ಎರಡು ಮಾತಿಲ್ಲ.

ಆದರೆ ಎಂದೋ ಸತ್ತಿರುವ ನಮ್ಮ ಹಿರಿಯರ ಹೆಸರಿನಲ್ಲಿ ಅನಾವಶ್ಯಕವಾಗಿ ಅವರಿಗೆ ತಲುಪದಿರುವ ಕಾರ್ಯಗಳನ್ನು ಸಂಪ್ರದಾಯವೆಂಬತೆ ಮಾಡಿ, ಹಣ ಮತ್ತು ಸಮಯ ವ್ಯರ್ಥಮಾಡುವ ಬದಲು, ಜೀವಂತವಿರುವ ನಮ್ಮ ಅಜ್ಜ, ಅಜ್ಜಿ, ಅಪ್ಪ, ಅಮ್ಮ, ಚಿಕ್ಕಪ್ಪ, ದೊಡ್ಡಮ್ಮ ಮುಂತಾದ ನಮ್ಮ ಅವಲಂಬಿತರ ಬದುಕಿನ ಕೊನೆಯ ಹಂತದಲ್ಲಿರುವ  ಹಿರಿಯ ಚೇತನಗಳಿಗೆ ಮಹತ್ವ ನೀಡಿ, ವೃದ್ಧಾಪ್ಯದಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವುದು ಹೆಚ್ಚು ಉಪಯುಕ್ತವಲ್ಲವೇ.

ಅದರಲ್ಲೂ ಇಂದಿನ ಆಧುನಿಕ ಜೀವನದಲ್ಲಿ ನೆಮ್ಮದಿಯ ಆಶ್ರಯಕ್ಕಾಗಿ ಪರಿತಪ್ಪಿಸುತ್ತಿರುವ ನಮ್ಮ ಪೋಷಕರಿಗೆ ನೆರವಾಗುವುದು ಸತ್ತ ವ್ಯಕ್ತಿಗೆ ನಾವು ತೋರಿಸುವ ಗೌರವಕ್ಕಿಂತ ಹೆಚ್ಚು ಮಾನವೀಯವಲ್ಲವೆ.
ಇದ್ದಾಗ ಅವರನ್ನು ಸರಿಯಾಗಿ ನೋಡಿಕೊಳ್ಳದೆ ತುಚ್ಚವಾಗಿ ಕಂಡು ಸತ್ತ ನಂತರ ಅವರಿಗಾಗಿ ಏನು ಮಾಡಿದರೇನು ಫಲ. ವಾಸ್ತವ ನೆಲೆಯಲ್ಲಿ ಆಗಿಹೋದವರನ್ನು ಮಾನಸಿಕವಾಗಿ ಗೌರವಿಸಿ ಕೃತಜ್ಞತೆ ಅರ್ಪಿಸೋಣ.
 

ಆದರೆ ಅದರ ಜೊತೆಗೆ ನಮ್ಮೆಲ್ಲಾ ತನು, ಮನ, ಧನಗಳನ್ನು ಭೌತಿಕವಾಗಿ ನಮ್ಮೊಂದಿಗಿರುವ ನಮ್ಮ ಆತ್ಮೀಯ ಹಿರಿಯ ಜೀವಗಳಿಗೆ ಮೀಸಲಿಡೋಣ. ಈ ಹಬ್ಬವನ್ನು ಹೆಚ್ಚು ಮಾನವೀಯ, ಜೀವಪರಗೊಳಿಸೋಣ. ಇದಕ್ಕಾಗಿ ಹೆಚ್ಚು ಶ್ರಮವೇನು ಪಡಬೇಕಾಗಿಲ್ಲ. ಕೇವಲ ಒಂದು ಸಣ್ಣ ಜೀವಪರ ನಿಲುವಿನಿಂದ ಇದು ಸಾಧ್ಯ.

ಸತ್ತವರ ನೆನಪುಗಳ ಸಾರ್ಥಕತೆ ಬದುಕಿರುವ ನಮ್ಮ ಅವಲಂಬಿತರ ಸೇವೆಯಲ್ಲಿ ಅಡಗಿದೆ. ಅದೇ ಮಹಾಲಯ ಅಮಾವಾಸ್ಯೆ ಹಬ್ಬ, ಅದೇ ಪಿತೃ ಪಕ್ಷದ ಪ್ರಾಮುಖ್ಯತೆ, ಅದೇ ಎಡೆ ಹಬ್ಬದ ಶ್ರೇಷ್ಠತೆ..........

ಬದಲಾವಣೆ ಇಲ್ಲಿಂದಲೇ, ನಮ್ಮಿಂದಲೇ ಪ್ರಾರಂಭವಾಗಲಿ. ಮತ್ತೆ ಇದು ಹಿಂದೂ ಸಂಪ್ರದಾಯ ವಿರೋಧಿ ನಿಲುವು ಎಂದು ಭಾವಿಸದಿರಿ. ಅನುಭವದಿಂದ ಮೂಡಿದ ಸಾಂಪ್ರದಾಯಿಕ, ವೈಚಾರಿಕ ಆಚರಣೆಗಳು ಕಾಲದ ಪರೀಕ್ಷೆಯಲ್ಲಿ ಮತ್ತಷ್ಟು ಹೊಳಪು ಮೂಡಿ ಹೆಚ್ಚು ಪ್ರಯೋಜನಕಾರಿಯಾಗಲಿ ಎಂಬ ಆಶಯವಷ್ಟೆ......
ಲೇಖನ: ವಿವೇಕಾನಂದ. ಎಚ್. ಕೆ. 9663750451.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!