Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಜನಹಿತಕ್ಕಾಗಿ ಮಿತ್ರ ಟ್ರಸ್ಟ್ ಸೇವಾ ಕಾರ್ಯ: ನಗರಸಭೆ ಕಚೇರಿ ಬಳಿ ಶುದ್ಧ ನೀರಿನ ಅರವಟ್ಟಿಗೆ

ಜನಹಿತಕ್ಕಾಗಿ ಮಿತ್ರ ಟ್ರಸ್ಟ್ ಸೇವಾ ಕಾರ್ಯ: ನಗರಸಭೆ ಕಚೇರಿ ಬಳಿ ಶುದ್ಧ ನೀರಿನ ಅರವಟ್ಟಿಗೆ

ಚಂದ್ರವಳ್ಳಿ ನ್ಯೂಸ್, ವಿಜಯನಗರ:
ಬೇಸಿಗೆಯ ತೀವ್ರ ಬಿಸಿಲಿನ ನಡುವೆಯೂ ಸಾರ್ವಜನಿಕರ ಹಿತದೃಷ್ಟಿಯಿಂದ ಮಿತ್ರ ಸೋಶಿಯಲ್ ಸರ್ವಿಸಸ್ ಟ್ರಸ್ಟ್ (ರಿ), ಹೊಸಪೇಟೆ ವತಿಯಿಂದ ನಗರದ ಜನತೆಗೆ ಶುದ್ಧ ಹಾಗೂ ತಂಪಾದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಹೊಸಪೇಟೆಯ ನಗರಸಭೆ ಕಾರ್ಯಾಲಯದ ಸಮೀಪ ಕುಡಿಯುವ ನೀರಿನ ಅರವಟ್ಟಿಗೆಯನ್ನು ಆರಂಭಿಸಲಾಯಿತು. ಈ ಸೇವಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷರಾದ ಶ್ರೀ ರೂಪೇಶ್ ಕುಮಾರ್ ಹಾಗೂ ಟ್ರಸ್ಟ್ ಅಧ್ಯಕ್ಷರಾದ ಶ್ರೀ ರಾಜಶೇಖರ್ ಸೂಳೆಬಾವಿ ಅವರು ಉದ್ಘಾಟನೆ ನೆರವೇರಿಸಿದರು.

ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪಾದಚಾರಿಗಳು, ಕಚೇರಿ ಕೆಲಸಗಳಿಗೆ ಆಗಮಿಸುವ ನಾಗರಿಕರು ಹಾಗೂ ವ್ಯಾಪಾರಿಗಳಿಗೆ ತಂಪಾದ ಶುದ್ಧ ಕುಡಿಯುವ ನೀರು ದೊರೆಯುವಂತೆ ಈ ಅರವಟ್ಟಿಗೆಯನ್ನು ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಕಾಳಜಿಯೊಂದಿಗೆ ಜನಪರ ಸೇವಾ ಕಾರ್ಯವಾಗಿ ಟ್ರಸ್ಟ್ ಈ ಯೋಜನೆಯನ್ನು ಕೈಗೊಂಡಿದ್ದು, ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಬೇಸಿಗೆ ಕಾಲದಲ್ಲಿ ಇಂತಹ ಸಾರ್ವಜನಿಕ ಸೇವಾ ಕಾರ್ಯಕ್ರಮಗಳು ಜನತೆಗೆ ಬಹಳ ಉಪಯುಕ್ತವಾಗಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ಮಾನವೀಯ ಮೌಲ್ಯಗಳನ್ನು ಉಳಿಸುವಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು. ಜನರಿಗೆ ಅನುಕೂಲವಾಗುವಂತೆ ಇಂತಹ ಕಾರ್ಯಗಳು ಮುಂದುವರಿಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಿತ್ರ ಸೋಶಿಯಲ್ ಸರ್ವಿಸಸ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾಯಸಂ, ಉಪಾಧ್ಯಕ್ಷ ಶ್ರೀನಿವಾಸ ಹೆಚ್, ಖಜಾಂಚಿ ಶ್ರೀ ಎ.ಕೆ. ವಿಜಯೇಂದ್ರ, ಸದಸ್ಯರಾದ ಶ್ರೀ ಗುಜ್ಜಲ್ ಹನುಮೇಶ್,  ಶಿವಶಂಕರ್ ಸಿ.,  ರಾಘವೇಂದ್ರ ಕಾಕುಬಾಳ್, ಕಿರಣ್ ಕುಮಾರ್ ಕರ್ಣಂ ಹಾಗೂ ಟ್ರಸ್ಟ್‌ನ ಹಿತೈಷಿಗಳಾದ ಶ್ರೀ ಮಧುರಚನ್ನ ಶಾಸ್ತ್ರಿ ಹಿರೇಮಠ್,  ಶಂಕರ್ ಮೇಟಿ,  ಶಿವಕುಮಾರ್ ಉಪಸ್ಥಿತರಿದ್ದರು.

ಸಾರ್ವಜನಿಕರ ಆರೋಗ್ಯ ಹಾಗೂ ಹಿತದೃಷ್ಟಿಯಿಂದ ಕೈಗೊಳ್ಳಲಾದ ಈ ಸೇವಾ ಕಾರ್ಯ ಹೊಸಪೇಟೆ ನಗರದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದು, ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಳವಾಗಬೇಕು ಎಂಬ ಅಭಿಪ್ರಾಯಗಳು ಕೇಳಿಬಂದವು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!