Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಿಗೆ ಪೋಷಕರೇ ನಿಜವಾದ ರೋಲ್ ಮಾಡೆಲ್ ಆಗಬೇಕು – ರಾಘವೇಂದ್ರ ಪ್ರಭು ಕರ್ವಾಲು ಕರೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಉಡುಪಿ:
"ಇಂದಿನ ದಿನಗಳಲ್ಲಿ ಪೋಷಕರು ಕೇವಲ ಮಾರ್ಗದರ್ಶಕರಾಗಿ ಉಳಿಯದೆ
, ತಮ್ಮ ಮಕ್ಕಳಿಗೆ ತಾವೇ ನಿಜವಾದ ರೋಲ್ ಮಾಡೆಲ್ (ಮಾದರಿ) ಆಗಿ ರೂಪುಗೊಳ್ಳಬೇಕಾದ ಅಗತ್ಯವಿದೆ," ಎಂದು ಖ್ಯಾತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಅವರು ತಿಳಿಸಿದ್ದಾರೆ.

ನಗರದ ಪ್ರತಿಷ್ಠಿತ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಕರು ಮತ್ತು ವಿದ್ಯಾರ್ಥಿಗಳ ಬೃಹತ್ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳ ಅಗತ್ಯ: ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಧಾರೆ ಎರೆಯಬೇಕು. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿರುವುದಕ್ಕೆ ಹೆಚ್ಚಾಗುತ್ತಿರುವ ವೃದ್ಧಾಶ್ರಮಗಳೇ ಸಾಕ್ಷಿ ಎಂದು ರಾಘವೇಂದ್ರ ಪ್ರಭು ಕಳಕಳಿ ವ್ಯಕ್ತಪಡಿಸಿದರು. ಶತಮಾನದ ಇತಿಹಾಸ ಹೊಂದಿರುವ ಕ್ರಿಶ್ಚಿಯನ್ ಹೈಸ್ಕೂಲು, ಜಿಲ್ಲೆಯಲ್ಲೇ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದಾನ ಮಾಡಿದ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಅವರು ಶ್ಲಾಘಿಸಿದರು.

ಶಾಲೆಯೊಂದಿಗೆ ಪೋಷಕರ ಒಡನಾಟ ಇರಲಿ: ಶಾಲಾ ಸಂಚಾಲಕರಾದ ಐವನ್ ಡಿ ಸೋನ್ಸ್ ಮಾತನಾಡಿ, "ಸಂಸ್ಥೆಯು ನಿರಂತರವಾಗಿ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಪೋಷಕರು ಕೇವಲ ಮಕ್ಕಳನ್ನು ಶಾಲೆಗೆ ಕಳುಹಿಸುವುದಷ್ಟೇ ಅಲ್ಲದೆ, ಅವರ ವಿದ್ಯಾಭ್ಯಾಸದ ಪ್ರಗತಿಯನ್ನು ತಿಳಿಯಲು ನಿಯಮಿತವಾಗಿ ಶಾಲೆಗೆ ಬರುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು" ಎಂದು ಕರೆ ನೀಡಿದರು.

ಪ್ರಗತಿ ಪರಿಶೀಲನೆ: ಶಾಲಾ ಮುಖ್ಯ ಶಿಕ್ಷಕಿ ಹೆಲೆನ್ ಸಾಲಿನ್ಸ್ ಅವರು ಸಂಸ್ಥೆಯ ವಿವಿಧ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಈ ಬೃಹತ್ ಸಮಾವೇಶದ ವೇದಿಕೆಯಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸುನಿಲ್, ಉಪಾಧ್ಯಕ್ಷೆ ಶಾಂಭವಿ ಭಂಡಾರ್ಕರ್, ಕೋಶಾಧಿಕಾರಿ ಶಾನವಾಜ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ದೊಡ್ಡ ಸಂಖ್ಯೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.