Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸಾಮಾಜಿಕ ಜಾಲತಾಣಗಳೆಂಬ ಅನುಭವ ಮಂಟಪಗಳು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾಜಿಕ ಜಾಲತಾಣಗಳೆಂಬ ಅನುಭವ ಮಂಟಪಗಳು........
ತರಲೆಗಳಿಗೆ ಟೈಂಪಾಸ್ ಮಾಡುವ ಜಾಗ
, ಪಡ್ಡೆಗಳಿಗೆ ಚಾಟಿಂಗ್ ಸೆಂಟರ್‌, ಯುವಕರಿಗೆ ಸ್ನೇಹ ಬೆಳೆಸುವ ಸ್ಥಳ, ಉತ್ಸಾಹಿಗಳಿಗೆ ಗುಂಪುಗಳನ್ನು ಸೇರುವ ಜಾಗ, ಭಾವನಾತ್ಮಕ ಜೀವಿಗಳಿಗೆ ಅನಿಸಿಕೆ - ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆ, ಕವಿ ಹೃದಯಿಗಳಿಗೆ ಕಾವ್ಯ ರಚಿಸುವ - ಪ್ರಕಟಿಸುವ ಸ್ಥಳ, ಪ್ರೇಮಿಗಳಿಗೆ ತಮ್ಮ ಪ್ರೀತಿಯ ಸಂಭ್ರಮ ಹೇಳಿಕೊಳ್ಳುವ ಜಾಗ, ಬರಹಗಾರರಿಗೆ ತಮ್ಮತನ ವ್ಯಕ್ತಪಡಿಸುವ ವೇದಿಕೆ, ವಿಚಾರವಾದಿಗಳಿಗೆ ತಮ್ಮ ಅನಿಸಿಕೆ ವ್ಯಕ್ತಪಡಿಸುವ ಕೇಂದ್ರ, ಸಂಪ್ರದಾಯವಾದಿಗಳಿಗೆ ತಮ್ಮ ಸಂಸ್ಕೃತಿ ಪ್ರಚಾರ ಮಾಡುವ ಜಾಗ, ಗೃಹಿಣಿಯರಿಗೆ ತಮ್ಮ ಆಂತರ್ಯ ಹೇಳಿಕೊಳ್ಳುವ ಪ್ರಶಸ್ತ ಸ್ಥಳ, ನಿವೃತ್ತರಿಗೆ ತಮ್ಮ ನೆನಪು - ಅನುಭವ ಹಂಚಿಕೊಳ್ಳುವ ವೇದಿಕೆ, ನಿರುದ್ಯೋಗಿಗಳಿಗೆ ಹೊಸ ಸ್ನೇಹ - ಹೊಸ ಅವಕಾಶ ಸೃಷ್ಟಿಸುವ ಜಾಗ, ಜಗಳಗಂಟರಿಗೆ ಜಗಳವಾಡುವ ವಿಶಾಲ ಸುರಕ್ಷಿತ ಸ್ಥಳ, ಅಸೂಯಪರರಿಗೆ ತಮ್ಮ ಹೊಟ್ಟೆ ಕಿಚ್ಚು ತೋಡಿಕೊಳ್ಳುವ ವೇದಿಕೆ, ಸಹೃದಯದವರಿಗೆ ಅದ್ಭುತ ಅನುಭವ ಮಂಟಪ, ಅವಕಾಶ ವಂಚಿತರಿಗೆ ಸುವರ್ಣಾವಕಾಶದ ಹೆಬ್ಬಾಗಿಲು, ಆಸಕ್ತರಿಗೆ ಮಾಹಿತಿಗಳ ಕಣಜ, ಹಳೆಯ ಸ್ನೇಹಿತರಿಗೆ ಮತ್ತೊಮ್ಮೆ ಬೆಸುಗೆಯ ಸಂಪರ್ಕದ ಕೊಂಡಿ, ಕೆಲವರಿಗೆ ವಿಕೃತ ಮನಸ್ಥಿತಿಯ ಅನಾವರಣ ಕೇಂದ್ರ, ಹಲವರಿಗೆ ತಮ್ಮ ಅಸ್ತಿತ್ವ ಇಲ್ಲಿದೆ ಎಂಬ ಕನಿಷ್ಠ ಸಮಾಧಾನದ ವೇದಿಕೆ, ಒಂದೇ - ಎರಡೇ, ಸಾವಿರಾರು, ಲಕ್ಷಾಂತರಭಾವಗಳ ಅವಿಭಕ್ತ ಕುಟುಂಬ,

ಕೋಟ್ಯಾಂತರ ಅಭಿಪ್ರಾಯ, ಭಿನ್ನಾಭಿಪ್ರಾಯಗಳ ವೇದಿಕೆ, ಪರಿಚಿತ, ಅಪರಿಚಿತ, ಹತ್ತಿರದ, ದೂರದ ಸಂಬಂಧಗಳ ಬೆಸುಗೆ, ಒಂಟಿ ಜೀವಿಗಳಿಗೆ ಅದ್ಬುತ ಜೊತೆಗಾರ, ಗೆಳೆಯ - ಗೆಳತಿಯರೇ, ಇದನ್ನು ಇನ್ನೊಂದಿಷ್ಟು ಸಹ್ಯವಾಗಿಸೋಣ, ಆತ್ಮೀಯವಾಗಿಸೋಣ, ಚಿಂತಕರ ಚಾವಡಿಯಾಗಿಸೋಣ, ಅನುಭವ ಮಂಟಪವಾಗಿಸೋಣ, ದ್ವೇಷ, ಅಸೂಯೆ, ತಿಕ್ಕಲುತನ, ಸಿನಿಕತನ, ಉಢಾಪೆ, ಕಡಿಮೆಮಾಡಿ, ಪ್ರೀತಿ, ವಿಶ್ವಾಸ, ಗೆಳೆತನ, ಒಳ್ಳೆಯತನಗಳ ಸುಖೀ ಕುಟುಂಬವಾಗಿಸೋಣ.

ಏಕೆಂದರೆ, ಅಭಿವ್ಯಕ್ತಿ ಸ್ವಾತಂತ್ರ್ಯ ಅನುಭವಿಸಲು ಸಾಮಾಜಿಕ ಜಾಲತಾಣ ಅತ್ಯುತ್ತಮ ವೇದಿಕೆಯಾಗಿದೆ. ಫೇಸ್‌ಬುಕ್, ವಾಟ್ಸ್ ಆಪ್, ಟ್ವಿಟರ್, ಎಕ್ಸ್, ಶೇರ್ ಚಾಟ್, ಇನ್ಸ್ಟಾಗ್ರಾಮ್, ಮೆಸೆಂಜರ್, ಟೆಲಿಗ್ರಾಂ, ವಿಡಿಯೋ ಕಾನ್ಫರೆನ್ಸ್, ಗೂಗಲ್ ಮೀಟ್, ಜೂಮ್ ಮೀಟಿಂಗ್, ಯೂಟ್ಯೂಬ್ ಇತ್ಯಾದಿ ಇತ್ಯಾದಿಗಳು.....

ಸಾಮಾನ್ಯ ಜನರ ಧ್ವನಿಗೆ ವೇದಿಕೆಯೇ ಇಲ್ಲದಿದ್ದ, ಕೇವಲ ಕೆಲವೇ ವರ್ಗದ ಸ್ವತ್ತಾಗಿದ್ದ, ಅಭಿವ್ಯಕ್ತಿ ಸ್ವಾತಂತ್ರ್ಯ ವ್ಯಕ್ತಪಡಿಸುವ ವೇದಿಕೆಗಳಿಗೆ ಪರ್ಯಾಯವಾಗಿ ಸಾಮಾಜಿಕ ಜಾಲತಾಣಗಳು ಸಮೂಹ ಸಂಪರ್ಕ ಕ್ರಾಂತಿಯನ್ನೇ ಮಾಡುತ್ತಿವೆ. ಎಲ್ಲಾ ರೀತಿಯಲ್ಲೂ ಅಂದರೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಗ್ರಾಮೀಣ, ಲಿಂಗಾಧಾರಿತ ಮುಂತಾದ ಅತ್ಯಂತ ಕೆಳಮಟ್ಟದ ಜನರಿಗೂ ಇಂದು ವಿಶ್ವಮಟ್ಟದ ವೇದಿಕೆಗಳನ್ನು ಸಾಮಾಜಿಕ ಜಾಲತಾಣಗಳು ಕಲ್ಪಿಸುತ್ತಿವೆ.  ಇದನ್ನು ಅತ್ಯಂತ ಪರಿಣಾಮಕಾರಿಯಾಗಿ, ಮಾನವ ಜನಾಂಗದ ಸುಸ್ಥಿರ ಅಭಿವೃದ್ಧಿಗೆ ಉಪಯೋಗಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.

ಪ್ರತಿ ಮನುಷ್ಯನಿಗೂ ಇರುವ ಮೆದುಳಿನ ಗ್ರಹಿಸುವ ಸಾಮರ್ಥ್ಯ ಒಂದು ವಿಷಯವಾಗಿ ಮನಸ್ಸಿನಲ್ಲಿ ಮೂಡಿ ಭಾವತರಂಗಗಳಾಗಿ ಧ್ವನಿಪಟ್ಟಿಗೆಯಲ್ಲಿ ಮೂಡಿ ಬಾಯಿಯ ಮೂಲಕ ಭಾಷೆಯ ರೂಪದಲ್ಲಿ ಹೊರಹೊಮ್ಮುತ್ತದೆ. ಅದು ಪ್ರತಿ ವ್ಯಕ್ತಿಯ ಸ್ವಂತಿಕೆಯಾಗಿರುತ್ತದೆ.

ಇದೆಲ್ಲದರ ನಂತರ ಅತಿಮುಖ್ಯವಾಗಿ ಇಲ್ಲಿ ಅಧ್ಯಯನ, ಚಿಂತನೆ, ಮಾನವೀಯ ಮೌಲ್ಯಗಳು, ಅದರಿಂದ ಸಿಗುವ ಮಾಹಿತಿ ಜ್ಞಾನ, ಅದನ್ನು ವ್ಯಕ್ತಪಡಿಸುವ ರೀತಿ ನೀತಿಗಳು, ನೈತಿಕತೆ, ಕಾನೂನು, ಜೀವಪರ ನಿಲುವು ಎಲ್ಲದರ ಅರಿವು ಇರಬೇಕಾಗುತ್ತದೆ. ಆಗ ಮಾತ್ರ ಈ ವೇದಿಕೆಗಳು ಮಾನವನ ಮತ್ತಷ್ಟು ವಿಕಾಸಕ್ಕೆ ಕಾರಣವಾಗುತ್ತದೆ. ಇಲ್ಲದಿದ್ದರೆ ಇದನ್ನು ಬೇಜವಾಬ್ದಾರಿಯಿಂದ, ಸ್ವಾರ್ಥದಿಂದ, ಅಜ್ಞಾನದಿಂದ ಉಪಯೋಗಿಸಿದರೆ ಸಮಾಜದ ಮತ್ತಷ್ಟು ಅಧೋಗತಿ ಖಚಿತ.

ಆದ್ದರಿಂದ ಚರ್ಚೆಗಳ ಬಗ್ಗೆಯೇ ಚರ್ಚಿಸುವ ಸಮಯ ಬಂದಿದೆ, ಚರ್ಚೆಗಳು ವಾಗ್ಯುದ್ಧಗಳೇ, ಪ್ರತಿಭಾ ಪ್ರದರ್ಶನಗಳೇ, ಸಮರ್ಥನೆಗಳೇ, ಜಗಳಗಳೇ, ಭಾವನೆಗಳೇ, ವಿಷಯ ವಿನಿಮಯಗಳೇ, ಚರ್ಚೆಗಳ ಕೊನೆ ಮನಸ್ತಾಪವೇ, ಹೊಡೆದಾಟಗಳೇ, ಗುಂಪುಗಾರಿಕೆಗಳೇ ರಾಜಕೀಯವೇ....

ದಿನನಿತ್ಯದ ಸಾಮಾಜಿಕ ಜಾಲತಾಣಗಳ ಚರ್ಚೆಗಳನ್ನು ಗಮನಿಸಿದಾಗ ಹೀಗೆ ಅನಿಸುತ್ತದೆ. ನಮ್ಮ ಜ್ಞಾನದ ಮಿತಿಯಲ್ಲಿ, ಆತ್ಮಸಾಕ್ಷಿಗೆ ಅನುಗುಣವಾಗಿ ವಿಷಯದ ಗೊಂದಲಗಳಿಗೆ, ಅಥವಾ ವಿಚಾರ ವಿನಿಮಯಗಳಿಗೆ ಚರ್ಚೆ ವೇದಿಕೆಯಾಗಿರಬೇಕು, ಕಲಿಕೆ, ತಿಳಿವಳಿಕೆ, ಸತ್ಯದ ದರ್ಶನಕ್ಕೆ ಪ್ರಯತ್ನಿಸುವುದು ಚರ್ಚೆಯ ಬಹುದೊಡ್ಡ ಆಶಯವಾಗಿರಬೇಕು. ಭಿನ್ನಾಭಿಪ್ರಾಯಗಳ ನಿವಾರಣೆ, ಗುರಿ -  ಮಾರ್ಗಗಳ ಸಮಾಲೋಚನೆ, ಸಹಬಾಳ್ವೆ, ಸಹಕಾರದ ಹಿತವೂ ಕೂಡ ಚರ್ಚೆಯ ಮುಖ್ಯ ಅಂಶವಾಗಿರಬೇಕು.

ಚರ್ಚೆಯ ಕೊನೆಯು ಕನಿಷ್ಟಪಕ್ಷ ನಗುವಿನಿಂದ ಮುಗಿದು ಆತ್ಮ, ಮನಸ್ಸುಗಳ ಮಿಲನವಾಗುವಂತಿರಬೇಕು, ಒಂದಷ್ಟು ಭಿನ್ನಾಭಿಪ್ರಾಯ ಇದ್ದರೂ ಕೂಡ ಪ್ರೀತಿ, ವಿಶ್ವಾಸಗಳೇ ಮೇಲುಗ್ಯೆ ಪಡೆಯುವಂತಿರಬೇಕು, ಆದರೆ ಆಗುತ್ತಿರುವುದೇನು ?

ಬಾಯಿಬುಡುಕತನ, ಭಾಗವಹಿಸುವವರ ಅಜ್ಞಾನ ಪ್ರದರ್ಶನ, ಜೋರು ಧ್ವನಿ, ಕೋಪತಾಪಗಳ ಕೂಗಾಟ, ಹಿಡನ್ ಅಜೆಂಡಾ, ನಮ್ಮದೇ ಸರಿ ಎಂಬ ಭಂಡತನ, ಕೊನೆಗೆ ಏನೂ ಅರ್ಥವಾಗದ ಗೊಂದಲ. ಚರ್ಚೆಗಳು ಎಲ್ಲಾ ಮಿತಿಗಳನ್ನು ದಾಟುತ್ತಿವೆ. ಉಪಯೋಗಿಸುವ ಭಾಷೆ, ಅಹಂಕಾರಅಲ್ಪ ಜ್ಞಾನ, ಸಣ್ಣತನಗಳು ರಾರಾಜಿಸುತ್ತಿವೆ, ಒಳ್ಳೆಯದು ಇಲ್ಲವೆಂದಲ್ಲ, ಅದೂ ಬಹಳಷ್ಟಿದೆ. ಆದರೆ ತಿದ್ದಿಕೊಳ್ಳುವುದು ಸಾಕಷ್ಟಿದೆ.

ನಿಜವಾದ ಚರ್ಚೆಗಳು, ನಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವಂತಿರಬೇಕು, ನಮ್ಮ ಜ್ಞಾನ ದಾಹವನ್ನು ತೀರಿಸುವಂತಿರಬೇಕು, ನಮ್ಮ ಮನೋಭಾವ ವಿಶಾಲಗೊಳಿಸುವಂತಿರಬೇಕು , ನಮ್ಮ ಮನಸ್ಸಿಗೆ ಮುದ ನೀಡುವಂತಿರಬೇಕು, ನಮ್ಮ ಸಂಬಂಧಗಳನ್ನು ಗಟ್ಟಿಗೊಳಿಸುವಂತಿರಬೇಕು, ನಮ್ಮ ಗೊಂದಲಗಳಿಗೆ ಪರಿಹಾರ ಸಿಗುವಂತಿರಬೇಕು, ನಮಗೆ ಕನಿಷ್ಠ ನೆಮ್ಮದಿಯನ್ನಾದರೂ ನೀಡುವಂತಿರಬೇಕು, ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಎಚ್ಚರಗೊಳ್ಳೋಣ. ಅತ್ಯುತ್ಸಾಹದಿಂದ ಭಾಗವಹಿಸುವುದು, ಬಹುಬೇಗ ತುಂಬಾ ನಿರೀಕ್ಷಿಸುವುದು, ನಿರಾಶರಾಗುವುದು, ಇದರಿಂದ ವಿಮುಖರಾಗುವುದು, ಸಿನಿಕತನ ಪ್ರದರ್ಶಿಸುವುದರ ಬಗ್ಗೆ ಎಚ್ಚರಿಕೆ ವಹಿಸೋಣ.

ತಾಳ್ಮೆಯೇ ಪ್ರಬುದ್ದತೆಯ ಮೂಲ ಬೇರು. ಅಧ್ಯಯನ ಮತ್ತು ಚಿಂತನೆ ಅದರ ಕಾಂಡಗಳು, ಭಾಷೆ ಅದರ ಎಲೆಗಳು, ಜ್ಞಾನವೇ ಅದರ ನಿಜವಾದ ಫಲ. ಇದರಿಂದ ನಮ್ಮ ಮಾನಸಿಕ ಆಂತರಿಕ ವ್ಯಕ್ತಿತ್ವಗಳನ್ನು ಮೇಲ್ದರ್ಜೆಗೆ ಏರಿಸಿಕೊಳ್ಳೋಣ. ಸಾಮಾಜಿಕ ಜಾಲತಾಣಗಳು ನಮ್ಮ ನೆಮ್ಮದಿಯ ಜೀವತಾಣಗಳಾಗಲಿ........
ಲೇಖನ:ವಿವೇಕಾನಂದ. ಎಚ್. ಕೆ. 9844013068......

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!