Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಪೋಡಿ ಮುಕ್ತ ಗ್ರಾಮಗಳಾಗಬೇಕು. ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ: ಸಿ.ಎಂ ಸ್ಪಷ್ಟ ಸೂಚನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ
36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ.



ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ.

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತೀ ವರ್ಷ ಆಚರಿಸಬೇಕು ಎಂದು ಸೂಚಿಸಿದರು.
ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!