ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು ನಗರದಲ್ಲಿ ಜುಲೈ 25ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನ ಹಾಗೂ 2025-2028ರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ KUWJ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
ಶುಕ್ರವಾರ ಬೆಳಗ್ಗೆ 10:30ಕ್ಕೆ ಅಝದ್ ಪಾರ್ಕ್ ನಿಂದ ಕುವೆಂಪು ಕಲಾ ಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಉದ್ಘಾಟನೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ ಜಾರ್ಜ್, ದತ್ತಿ ಪ್ರಶಸ್ತಿ ಪಧಾನವನ್ನು ಜಲಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ, ಪ್ರಧಾನ ಭಾಷಣ ರವಿ ಹೆಗಡೆ, ಹಿರಿಯ ಪತ್ರಕರ್ತರಿಗೆ ಸನ್ಮಾನವನ್ನು ಶಾಸಕ ಹೆಚ್. ಡಿ ತಮ್ಮಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕೆ. ವಿ ಪ್ರಭಾಕರ್, ಎಸ್. ಎಲ್ ಭೋಜೇಗೌಡ, ಗಾಯತ್ರಿ, ಶಾಂತೇಗೌಡ, ಜಿಲ್ಲಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಎಂ. ಎನ್ ಅನುಚೇತ್, ಬಿ.ವಿ ಮಲ್ಲಿಕಾರ್ಜುನಯ್ಯ, ರಾಜ್ಯ ಉಪಾಧ್ಯಕ್ಷರಾದ ಹೆಚ್. ಬಿ ಮದನಗೌಡ, ಅನಿಲ್ ಆನಂದ್ ಅಧ್ಯಕ್ಷತೆ ವಹಿಸಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶೃಂಗೇರಿ ಶಾಸಕ ಟಿ. ಡಿ ರಾಜೇಗೌಡ, ಕೆ. ಎಸ್ ಆನಂದ್, ಜಿ ಹೆಚ್ ಶ್ರೀನಿವಾಸ್, ನಯನಾ ಮೋಟಮ್ಮ, ಡಾ. ಕೆ. ಪಿ ಅಂಶಮಂತ್, ಬಿ. ಹೆಚ್ ಹರೀಶ್ ಹಾಗೂ ವಿಶೇಷ ಆಹ್ವಾನಿತರು, ಸಮಾರೋಪ ಸಮಾರಂಭ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಹಾಗೂ ಹಿರಿಯ ಪತ್ರಕರ್ತರಿಗೆ ಗೌರವ ಸಮರ್ಪಣೆ ಹಾಗೂ ಇನ್ನು ಗಣ್ಯ ವ್ಯಕ್ತಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ, ದತ್ತಿ ಪ್ರಶಸ್ತಿ ಪ್ರಧಾನ, ಪ್ರತಿಭಾ ಪುರಸ್ಕಾರ, ಕ್ರೀಡಾ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕಿನಿಂದ ತಪ್ಪದೇ ಎಲ್ಲಾರು ಭಾಗವಹಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿಕ್ಕಮಗಳೂರು ವತಿಯಿಂದ ಕರೆ ಕೊಟ್ಟಿದ್ದಾರೆ.



