Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಗತ್ಯ ವಸ್ತುಗಳ ಬೆಲೆ ಏರಿಕೆ: ಮೋದಿ ವಿರುದ್ಧ ಕಾಂಗ್ರೆಸ್ ಅಸಮಾಧಾನ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೈನಂದಿನ ಅಗತ್ಯ ವಸ್ತುಗಳ ಅತಿಯಾದ ಬೆಲೆ ಏರಿಕೆಯನ್ನು ಖಂಡಿಸಿ
, ಕೇಂದ್ರದ ಆಡಳಿತಾರೂಢ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದೆ. ಬಿಜೆಪಿ ನೀಡಿದ್ದ 'ಅಚ್ಛೇ ದಿನ'ದ ಭರವಸೆ ಹುಸಿಯಾಗಿದ್ದು, ನಿರಂತರ ಬೆಲೆ ಏರಿಕೆಯು ಜನಸಾಮಾನ್ಯರ ಹಾಗೂ ಮಧ್ಯಮ ವರ್ಗದ ಕುಟುಂಬ ಬಜೆಟ್‌ಅನ್ನು ಸಂಪೂರ್ಣವಾಗಿ ಹಾಳುಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಧ್ವನಿ ಎತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ಸರ್ಕಾರವು ಅರ್ಥಹೀನ ಮಾತುಗಳು ಹಾಗೂ ಜನರ ಗಮನ ಬೇರೆಡೆ ಸೆಳೆಯುವ ತಂತ್ರಗಳ ಮೂಲಕ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಮತ್ತು ದೇಶದ ಜನತೆ ಸರ್ಕಾರವನ್ನು ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲ," ಎಂದು ಎಚ್ಚರಿಸಿದ್ದಾರೆ.

ಈರುಳ್ಳಿ: ಕಳೆದ ಒಂದು ವರ್ಷದಲ್ಲಿ ಈರುಳ್ಳಿ ಬೆಲೆ ಶೇ.59ರಷ್ಟು ಏರಿಕೆಯಾಗಿದ್ದು, ಹಲವು ನಗರಗಳಲ್ಲಿ ಕೆ.ಜಿ.ಗೆ ರೂ.50–60ಕ್ಕೆ ಮಾರಾಟವಾಗುತ್ತಿದೆ.

ಸಕ್ಕರೆ: ಸಕ್ಕರೆ ಬೆಲೆ ಕೆ.ಜಿ.ಗೆ ರೂ.60–70ರಷ್ಟಿದ್ದು, ಕೆಲವು ಕಡೆಗಳಲ್ಲಿ ರೂ.72ರ ಗಡಿ ದಾಟಿದೆ.
ಸಾಸಿವೆ ಎಣ್ಣೆ: ಅಡುಗೆಗೆ ಬಳಸುವ ಸಾಸಿವೆ ಎಣ್ಣೆ ಲೀಟರ್‌ಗೆ ರೂ.200ಕ್ಕಿಂತ ಹೆಚ್ಚಾಗಿದೆ.
ಹಣದುಬ್ಬರ ದರ: ಪ್ರಸ್ತುತ ಆಹಾರ ಹಣದುಬ್ಬರ ಶೇ.5.52 ಹಾಗೂ ಸಗಟು ಹಣದುಬ್ಬರ ಶೇ.9.78ರಷ್ಟಿದೆ.

ಬರಲಿರುವ ಹಬ್ಬದ ಋತುವಿನಲ್ಲಿ ಈ ರೀತಿ ಬೆಲೆಗಳು ಗಗನಕ್ಕೇರಿರುವುದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ದೈನಂದಿನ ಜೀವನವನ್ನು ದುಸ್ತರಗೊಳಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷಗಳಾಗಿದ್ದರೂ 'ಅಚ್ಛೇ ದಿನ'ದ ವಾಸ್ತವ ರೂಪ ಎಂದರೆ ಬೇಳೆಕಾಳು, ತರಕಾರಿ, ಎಣ್ಣೆ ಮತ್ತು ಸಕ್ಕರೆಯ ಬೆಲೆಗಳು ಜನಸಾಮಾನ್ಯರ ಜೇಬಿಗೆ ಕನ್ನ ಹಾಕ್ತಿರುವುದು ಮಾತ್ರ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ನಿಯಂತ್ರಣದಲ್ಲಿ ಮೋದಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದಿರುವ ಕಾಂಗ್ರೆಸ್, ಈ ಬೆಲೆ ಏರಿಕೆಯ ಬಿಸಿ ಮತ್ತು ಸರ್ಕಾರದ ವೈಫಲ್ಯವನ್ನು ದೇಶದ ಮತದಾರರು ಎಂದಿಗೂ ಮರೆಯುವುದಿಲ್ಲ ಎಂದು ಎಚ್ಚರಿಸಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆತ್ರೇಯ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗೆ ಅತಂತ್ರ ಸ್ಥಿತಿಸಹಬಾಳ್ವೆ ಮತ್ತು ಸಾಮಾಜಿಕ ಸಾಮರಸ್ಯವೇ ನಮ್ಮ ನಾಡಿನ ಶಕ್ತಿ: ಟಿ.ರಘುಮೂರ್ತಿಅದ್ಧೂರಿಯಾಗಿ ನಡೆದ ಈದ್‌ಮಿಲಾದ್ ಮೆರವಣಿಗೆ  ಹೋರಾಟಗಾರ ಎನ್.ಎಸ್.ಹರ್ಡೆಕರ್‌ರವರಲ್ಲಿ ಶಿಸ್ತು, ದೇಶಭಕ್ತಿ ಎದ್ದು ಕಾಣುತ್ತಿತ್ತು‘ರಸ್ತೆ ರಾಜ’ನ ಕ್ಷೇತ್ರದಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯ: ಅನುದಾನದ ಹೊಳೆಯಿದ್ದರೂ ತಪ್ಪದ ಯಮಯಾತನೆ!ಕನ್ನಡ ಸಾಹಿತ್ಯ ಪರಿಷತ್ತು ಕಬ್ಜ ಆಗಲು ಬಿಡುವುದಿಲ್ಲ: ಪ್ರೊ.ಎಸ್.ಜಿ ಸಿದ್ದರಾಮಯ್ಯಚಿಕ್ಕಂದವಾಡಿ ಗ್ರಾಮದ ರೇವಜ್ಜರ ಓಂಕಾರಪ್ಪ ಇನ್ನಿಲ್ಲಧರ್ಮಪುರ ಭಾಗದಲ್ಲಿ ಕೌಂಟ್ ಇಲ್ಲದ ಬಾಲಕೃಷ್ಣ: ಮಾಜಿ ಜಿಪಂ ಉಪಾಧ್ಯಕ್ಷ ದ್ಯಾಮೇಗೌಡ ವಾಗ್ದಾಳಿಅದ್ದೂರಿ ಚಾಲನೆ ಪಡೆದ ಯಶ್ ಅಭಿನಯದ 'ಟಾಕ್ಸಿಕ್': ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿಯತ್ತ ಭರ್ಜರಿ ಮುನ್ನೋಟ!ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ, ‘ಕೂಂಬಿಂಗ್ ಕಿಂಗ್’ ಅಭಿಮನ್ಯುವಿಗೆ ಭಾವಪೂರ್ಣ ಬೀಳ್ಕೊಡುಗೆ