Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳ ಎಸ್ಟಿಗೆ ಸೇರಿಸಲು ಪ್ರಸ್ತಾವನೆ ಸ್ವೀಕೃತ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಿ
, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳನ್ನು ಈಗಾಗಲೇ ಕರ್ನಾಟಕದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಜಾತಿಗಳಾದ ಟೋಕರೆ ಕೋಲಿ, ಕೋಯಾ ಕೋಲಿಡೋರ, ಕೋಲ್ಲಾ, ಜಾತಿಗಳ ಪರ್ಯಾಯ ಪದಗಳೆಂದು ಪರಿಗಣಿಸಲು ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನವನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ರವರಿಂದ ದಿನಾಂಕ:19.02.2026 ಪ್ರಸ್ತಾವನೆ ಸ್ವೀಕೃತವಾಗಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ಸಭಾನಾಯಕ ಹಾಗೂ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ತಿಳಿಸಿದರು.

ರಾಜ್ಯ ಸರ್ಕಾರ ಈ ಹಿಂದೆ 2010 ರಲ್ಲಿ ಹೊರಡಿಸಿರುವ ಆದೇಶದಲ್ಲಿ ರಾಜ್ಯದಲ್ಲಿನ ಗಂಗಾಮತ ಮತ್ತು ಅದರ ಉಪ ಜಾತಿಗಳ (ಕೋಲಿ, ಕಬ್ಬಲಿಗ, ಬೆನ್ನ ಅಂಬಿಗ ಮತ್ತು ಬಾರ್ಕಿ ಒಳಗೊಂಡಂತೆ) ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರ ಮೂಲಕ ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡು ವರದಿ ಪಡೆದು ಸಲ್ಲಿಸಲು ಆದೇಶಿಸಲಾಗಿತ್ತು ಎಂದರು.

ಮುಖ್ಯಮಂತ್ರಿಗಳ ಪರವಾಗಿ ವಿಧಾನ ಪರಿಷತ್ತಿನ ಸದಸ್ಯರಾದ ತಿಪ್ಪಣಪ್ಪ ಕಮಕನೂರ ಅವರ  ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಸರ್ಕಾರದ ಆದೇಶದನ್ವಯ ಗಂಗಾಮತ ಮತ್ತು ಅದರ ಉಪ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನವನ್ನು ಕನ್ನಡ ವಿಶ್ವವಿದ್ಯಾಲಯ, ಹಂಪಿ ಇವರ ಮೂಲಕ ಕೈಗೊಂಡು ಅಂತಿಮ ವರದಿಯನ್ನು 2014 ರಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ರವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರದ ಶಿಫಾರಸ್ಸಿನೊಂದಿಗೆ ಕೇಂದ್ರ ಬುಡಕಟ್ಟು, ವ್ಯವಹಾರಗಳ ಮಂತ್ರಾಲಯ ನವದೆಹಲಿ ಇವರಿಗೆ ದಿನಾಂಕ:03/03/2014 ರಲ್ಲಿ, ಮೊದಲ ಬಾರಿಗೆ ಕಳುಹಿಸಲಾಗಿರುತ್ತದೆ.

ಕರ್ನಾಟಕ ರಾಜ್ಯದಲ್ಲಿ ಗಂಗಾಮತ ಮತ್ತು ಅದರ ಉಪ ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಬಗ್ಗೆ ಸಲ್ಲಿಸಲಾದ ಪ್ರಸ್ತಾವನೆಗೆ ಕೇಂದ್ರ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ರವರು ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಿ ಸಮರ್ಥನೆ/ಸ್ಪಷ್ಟಿಕರಣ/ದಾಖಲಾತಿಗಳೊಂದಿಗೆ ವರದಿಗಳನ್ನು ದಿನಾಂಕ:16.02.2018, 23.07.2018 ಮತ್ತು 02.02.2021ರಲ್ಲಿ ಸಲ್ಲಿಸಲಾಗಿರುತ್ತದೆ.

ಅಂತಿಮವಾಗಿ ಕೇಂದ್ರ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ರವರು ದಿನಾಂಕ:30.10.2023ರ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಿ ಮತ್ತೊಮ್ಮೆ ಸೂಕ್ತ ಸಮರ್ಥನೆ/ಸೃಷ್ಟಿಕರಣ/ದಾಖಲಾತಿಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಕುಲಸಚಿವರು, ಕನ್ನಡ ವಿಶ್ವ ವಿದ್ಯಾಲಯ, ಹಂಪಿ ರವರಿಗೆ ಕೋರಲಾಗಿದ್ದು, ಕುಲಸಚಿವರು, ಕನ್ನಡ ವಿಶ್ವ ವಿದ್ಯಾಲಯ, ಹಂಪಿ ರವರಿಂದ ವರದಿ ಬಂದ ತಕ್ಷಣ ಸರ್ಕಾರಕ್ಕೆ ಮಾಹಿತಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!