Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಿವೇಶನ ರಹಿತ ಬಡವರಿಗೆ ನಿವೇಶನ ಮಂಜೂರು ಮಾಡುವಂತೆ ಪ್ರತಿಭಟನೆ  

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಬಡವರಿಗೆ ನಿವೇಶನಗಳನ್ನು ಮಂಜೂರು ಮಾಡುವಂತೆ ಅರುಂಧತಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡುತ್ತ ೩೦-೪೦ ವರ್ಷಗಳಿಂದಲೂ ಚಿತ್ರದುರ್ಗದಲ್ಲಿಯೇ ನೆಲೆಸಿರುವ ಇವರೆಲ್ಲಾ ಕಡು ಬಡವರಾಗಿದ್ದು, ಸ್ವಂತ ನಿವೇಶನವಾಗಲಿ, ಮನೆಯಾಗಲಿ ಇಲ್ಲ. ಬಹುತೇಕರು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಸರ್ಕಾರ ಯಾವುದೇ ಯೋಜನೆಯಡಿಯಲ್ಲಿ ಇವರುಗಳಿಗೆ ನಿವೇಶನಗಳನ್ನು ನೀಡಿಲ್ಲ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಹಾಗಾಗಿ ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಎಂ.ಕೆ.ಹಟ್ಟಿಯ ರಿ.ಸ.ನಂ.೪೫/೨ ರಲ್ಲಿ ಆರು ಎಕರೆ ೩೦ ಗುಂಟೆ ಸರ್ಕಾರಿ ಜಮೀನಿದ್ದು, ಇದರಲ್ಲಿ ನಾಲ್ಕು ಎಕರೆ ಜಮೀನನ್ನು ಮಂಜೂರು ಮಾಡಿದರೆ ಸುಮಾರು ೧೫೦ ಕುಟುಂಬಗಳು ನೆಮ್ಮದಿಯಿಂದ ಜೀವನ ಮಾಡಬಹುದೆಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ನಗರಸಭೆಯ ನಿರ್ಲಕ್ಷೆಯಿಂದ ನಗರದ ಬಹುತೇಕ ಕಡೆ ಯು.ಜಿ.ಡಿ. ತುಂಬಿ ರಸ್ತೆಗಳಲ್ಲಿ ಶೌಚದ ನೀರು ಹರಿಯುತ್ತಿದೆ. ಹೊಳಲ್ಕೆರೆ ರಸ್ತೆಯಲ್ಲಿರುವ ಯಾದವ ಮಠದ ಮುಂಭಾಗದ ರಸ್ತೆಯ ಪಕ್ಕದಲ್ಲಿ ನೂರಾರು ಲೋಡುಗಳಷ್ಟು ತ್ಯಾಜ್ಯವನ್ನು ಸುರಿಯಲಾಗಿದೆ. ನಗರ ಪ್ರದೇಶಗಳಲ್ಲಿ ಹಳೆ ಮನೆಗಳನ್ನು ಕೆಡವಿದಾಗ ಸಿಗುವ ಕಲ್ಲು, ಮಣ್ಣಿನ ರಾಶಿಗಳನ್ನು ತಂದು ಎಗ್ಗಿಲ್ಲದೆ ಇಲ್ಲಿ ಹಾಕಲಾಗಿದೆ. ನಗರದ ಪ್ರಸಾದಂ ಹೋಟೆಲ್‌ನವರು ಪಕ್ಕದಲ್ಲಿರುವ ರಾಜ ಕಾಲುವೆಯನ್ನು ಮುಚ್ಚಿ ಗೋಡೆಗಳನ್ನು ನಿರ್ಮಿಸಿಕೊಂಡಿರುವುದರಿಂದ ಮಳೆ ಬಂದಾಗ ಸರಾಗವಾಗಿ ನೀರು ಹರಿಯಲು ಜಾಗವಿಲ್ಲದಂತಾಗಿದೆ. ನಗರಸಭೆಗೆ ಅನೇಕ ಬಾರಿ ದೂರು ನೀಡಿದ್ದರೂ ಮತದಾರರ ಮತಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಈ ಸಂಬಂಧ ನಗರಸಭೆ ಪೌರಾಯುಕ್ತರ ಮೇಲೆ ಶಿಸ್ತಿನ ಕ್ರಮ ಕೈಗೊಂಡು ನಗರದಲಿ ಸ್ವಚ್ಚತೆಯನ್ನು ಕಾಪಾಡುವಂತೆ ಹನುಮಂತಪ್ಪ ದುರ್ಗ ವಿನಂತಿಸಿದರು.

ಏಕಾಂತಪ್ಪ, ನ್ಯಾಯವಾದಿಗಳಾದ ಸುರೇಶ್, ತಿಪ್ಪೇಸ್ವಾಮಿ, ದಯಾನಂದ, ವಿಶ್ವನಾಥ, ವಿವಿಧ ಬಡಾವಣೆಯ ನಿವಾಸಿಗಳಾದ ಸುನಿತ, ಹಂಸ, ರಾಧಮ್ಮ, ನಾಗೇಂದ್ರಪ್ಪ, ಅಕ್ಕಿತಿಮ್ಮಯ್ಯನಹಟ್ಟಿಯ ಬಸವರಾಜ್, ಸುರೇಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!