Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮಾಡುವ ಪಾಪಕ್ಕೆ ಮುಂದೆ ಕಾಂಗ್ರೆಸ್ ಪಶ್ಚಾತ್ತಾಪ ಪಡಲಿದೆ-ಆರ್. ಅಶೋಕ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಅರೋಪಿದರು

 ದೊಡ್ಡಬಳ್ಳಾಪುರ ನಗರದ ಬಿ ಜೆ ಪಿ ಕಛೇರಿಯಲ್ಲಿ  ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್‌ಅವರು ಕೋವಿಡ್‌ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಮನೆಯಲ್ಲೇ ಕುಳಿತಿದ್ದರು. ಆದರೆ ಈಗ ಅವರ ವಿರುದ್ಧ ಕೋವಿಡ್‌ಹಗರಣದ ಆರೋಪ ಹೊರಿಸಲಾಗಿದೆ. ರಾಜ್ಯಪಾಲರ ಮೇಲೆ ಸರ್ಕಾರ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದು, ವಿಶ್ವವಿದ್ಯಾಲಯದಲ್ಲಿ ಅವರ ಅಧಿಕಾರ ಕಿತ್ತುಕೊಳ್ಳಲು ಪ್ರಯತ್ನ ನಡೆಸಲಾಗಿದೆ. ಕಾಂಗ್ರೆಸ್‌ಶಾಶ್ವತವಾಗಿ ಅಧಿಕಾರದಲ್ಲಿ ಇರಲಿದೆ ಎಂಬ ಚಿಂತನೆಯಲ್ಲಿದೆ. ಕಾಂಗ್ರೆಸ್‌ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಹೇಳಿದರು. 

 ಶಾಸಕ ಮುನಿರತ್ನ ಬಿಜೆಪಿಗೆ ಮುನ್ನ ಕಾಂಗ್ರೆಸ್‌ನಲ್ಲೇ ಇದ್ದರು. ಅವರು ಕಾಂಗ್ರೆಸ್‌ನಲ್ಲಿದ್ದಾಗ ಕಾಂಗ್ರೆಸ್‌ನಾಯಕರೇ ಅವರನ್ನು ಬೆಂಬಲಿಸಿದ್ದರು. ರಾಯಚೂರಿನಲ್ಲಿ ಪಿಎಸ್‌ಐ ಕುಟುಂಬದವರು 16 ಗಂಟೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡಿದಾಗ ಶಾಸಕರನ್ನು ಬಂಧಿಸಲಿಲ್ಲ. ಕೃಷಿ ಅಧಿಕಾರಿ ವೀಡಿಯೋ ಮಾಡಿ ಕಳುಹಿಸಿದಾಗ ಸಚಿವರನ್ನು ಬಂಧನ ಮಾಡಿಲ್ಲ. ಮುನಿರತ್ನ ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಏಕಾಏಕಿ ಬಂಧಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದರು. 

 ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಅವರ ವಿರುದ್ಧ 65 ಪ್ರಕರಣಗಳಿದ್ದವು. ಆದರೆ ಅವರು ಮಾತ್ರ ಶುದ್ಧ ಎನ್ನಲಾಗುತ್ತದೆ. ಬಿಜೆಪಿಯವರು ಸಂವಿಧಾನದ ಬಗ್ಗೆ ಸಣ್ಣ ಮಾತು ಹೇಳಿದ್ದಕ್ಕೆ, ಅದನ್ನೇ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಲಾಗಿದೆ. ರಾಹುಲ್‌ಗಾಂಧಿ ವಿದೇಶಕ್ಕೆ ಹೋಗಿ ಮೀಸಲು ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಈ ಕುರಿತು ಕಾಂಗ್ರೆಸ್‌ಪ್ರತಿಭಟನೆ ಮಾಡಲಿ ಎಂದರು.

 ಸೋಲುವ ಭಯ-
ಜವಹರಲಾಲ್‌ನೆಹರೂ ಅಧಿಕಾರದಲ್ಲಿದ್ದಾಗ ಏಕಕಾಲಕ್ಕೆ ಚುನಾವಣೆ   ನಡೆಯುತ್ತಿತ್ತು. ಈಗ ಅದನ್ನೇ ಎನ್‌ಡಿಎ ಸರ್ಕಾರ ಮಾಡಲು ಹೊರಟರೆ ತಪ್ಪು ಎನ್ನಲಾಗುತ್ತಿದೆ. ಇಡೀ ವರ್ಷ ಚುನಾವಣೆ ನಡೆಯುವುದನ್ನು ತಪ್ಪಿಸಲು ಒಂದೇ ಬಾರಿಗೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಉಳಿತಾಯವಾದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದು. ಆದರೆ ಈ ರೀತಿ ಮಾಡಿದರೆ ಸೋಲುತ್ತೇವೆ ಎಂಬ ಭಯ ಕಾಂಗ್ರೆಸ್‌ಗಿದೆ. ಆದ್ದರಿಂದ ಈ ಹೊಸ ವ್ಯವಸ್ಥೆಯನ್ನು ಕಾಂಗ್ರೆಸ್‌ನಾಯಕರು ವಿರೋಧಿಸುತ್ತಿದ್ದಾರೆ ಎಂದರು.  

 ಬಿಜೆಪಿ ಸದಸ್ಯತ್ವ ಅಭಿಯಾನ-
ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌.ಅಶೋಕ, ಬಿಜೆಪಿ ಅತಿ ಹೆಚ್ಚು ಸದಸ್ಯರನ್ನು ಹೊಂದಿದ್ದು, ಈಗ ಸದಸ್ಯತ್ವ ಅಭಿಯಾನ ಮಾಡಲಾಗುತ್ತಿದೆ. ಬಿಜೆಪಿ ಪಕ್ಷ ಎಂದರೆ ದೇವಾಲಯ ಇದ್ದಂತೆ. ಇಲ್ಲಿ ಕಾರ್ಯಕರ್ತರಿಗೆ ಹೆಚ್ಚು ಅವಕಾಶವಿದೆ. ಎಲ್ಲ ಕಾರ್ಯಕರ್ತರು ನಿಗದಿತ ಗುರಿ ಇಟ್ಟುಕೊಂಡು ಜನರನ್ನು ಪಕ್ಷಕ್ಕೆ ಸೇರಿಸಬೇಕು. ಅನೇಕ ಸಲ ಕಾರ್ಯಕರ್ತರ ಕುಟುಂಬದವರೇ ಸದಸ್ಯರಾಗಿ ಪಕ್ಷಕ್ಕೆ ಸೇರಿರುವುದಿಲ್ಲ. ಅಂತಹ ಕಡೆ ಗಮನಿಸಿ ಪಕ್ಷಕ್ಕೆ ಹೆಸರು ನೋಂದಾಯಿಸಬೇಕು ಎಂದು ಕಿವಿಮಾತು ಹೇಳಿದರು. 



 ಹೊಸಕೆರೆಹಳ್ಳಿಯ ವಿಶೇಷ ಚೇತನ ಕಾರ್ಯಕರ್ತೆಯೊಬ್ಬರು ಒಂದೇ ದಿನದಲ್ಲಿ 940 ಜನರನ್ನು ಸದಸ್ಯರಾಗಿ ಪಕ್ಷಕ್ಕೆ ಸೇರಿಸಿದ್ದಾರೆ. ಅವರು ಒಂದು ಸಾವಿರ ಗುರಿ ತಲುಪುವುದಾಗಿ ಹೇಳಿದ್ದರು. ಇದನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಸದಸ್ಯತ್ವ ಅಭಿಯಾನ ಮಾಡಬೇಕು. ಬೂತ್‌ಮಟ್ಟದಲ್ಲಿ ಐದು ಜನರನ್ನು ಸದಸ್ಯತ್ವ ಅಭಿಯಾನಕ್ಕಾಗಿ ಕೆಲಸ ಮಾಡಲು ನಿಯೋಜಿಸಬೇಕು. ಈ ಮೂಲಕ ಕೆಲಸವನ್ನು ವಿಂಗಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ತಾಲ್ಲೂಕು ಬಿ ಜೆ ಪಿ ಯ ಕಾರ್ಯಕರ್ತರು ಪದಾಧಿಕಾರಿಗಳು ಹಾಜರಿದ್ದರು

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!