Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ-ಸಚಿವ ರಾಮಲಿಂಗಾರೆಡ್ಡಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳಿಗೆ 2025 ನೇ ಏಪ್ರಿಲ್ 01 ರಿಂದ ಜಾರಿಗೆ ಬರುವಂತೆ ಶೇಕಡವಾರು ಎಷ್ಟು ಪ್ರಮಾಣದಲ್ಲಿ ವೇತನ ಹೆಚ್ಚಳ ಪರಿಷ್ಕರಿಸಬೇಕು ಎನ್ನುವ ಸಂಬಂಧ ಕಾರ್ಮಿಕ ಸಂಘಟನೆಗಳೊಡನೆ ಮಾತುಕತೆ ಮತ್ತು ಸಂಧಾನ ಪ್ರಕ್ರಿಯೆ ಪ್ರಾರಂಭಿಸಲು ಆದೇಶಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಹಿಂಬಾಕಿ ಪಾವತಿ: ಒಟ್ಟು 26 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಮತ್ತು ವೆಚ್ಚ ರೂ.1271.92 ಕೋಟಿ-
38 ತಿಂಗಳ ಹಿಂಬಾಕಿ ವೇತನ ಪಾವತಿ ಬೇಡಿಕೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ ಮೂರ್ತಿ, ರವರ ಏಕ ಸದಸ್ಯ ಸಮಿತಿಯ ಶಿಫಾರಸ್ಸಿನಂತೆ 2022ನೇ ಜನವರಿ 01 ರಿಂದ 2023ನೇ ಫೆಬ್ರವರಿ 28ರ ವರೆಗೆ ಅವಧಿಗೆ 14 ತಿಂಗಳ ವರೆಗಿನ ಹಿಂಬಾಕಿ ವೇತನ ನೀಡಲು ಒಪ್ಪಿಗೆ ನೀಡಿ, ತತ್ಸಂಬಂಧ ತಗಲುವ ವೆಚ್ಚ, ರೂ.718.93 ಕೋಟಿಗಳ ವಿಶೇಷ ಅನುದಾನವನ್ನು ಸರ್ಕಾರವು ಬಿಡುಗಡೆ ಮಾಡಲಿದೆ.

38 ತಿಂಗಳ ಹಿಂಬಾಕಿ ಪೈಕಿ ಉಳಿದ 24 ತಿಂಗಳಲ್ಲಿ 2021ನೇ ಜನವರಿ 01 ರಿಂದ ಡಿಸೆಂಬರ್ 31 ಅವಧಿಯ 12 ತಿಂಗಳುಗಳ ವೇತನ ಹಿಂಬಾಕಿ ಮೊತ್ತ ರೂ. 552.99 ಕೋಟಿಗಳ ವಿಶೇಷ ಅನುದಾನವನ್ನು ಸರ್ಕಾರವು ಬಿಡುಗಡೆ ಮಾಡಲಿದೆ.

ವೇತನ ಪರಿಷ್ಕರಣೆ ವಿಳಂಬಕ್ಕೆ ಕಾರಣಗಳು:
ಮಾರ್ಚ್-2023 ರಲ್ಲಿ ರಾಜ್ಯದ ನಾಲ್ಕು ರಸ್ತೆ
, ಸಾರಿಗೆ ಸಂಸ್ಥೆಗಳ ಅಧಿಕಾರಿ/ನೌಕರರ ವೇತನ ಪರಿಷ್ಕರಣೆ ಮಾಡಿ, ಆ ಸಂಬಂಧ ಬಜೆಟ್‍ನಲ್ಲಿ ಯಾವುದೇ ಅನುದಾನವನ್ನು ಮೀಸಲಿಡದೆ ಹಾಗೂ 38 ತಿಂಗಳ ಹಿಂಬಾಕಿ ವೇತನ ಪಾವತಿ ಬೇಡಿಕೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ ಮೂರ್ತಿ ರವರ ಏಕ ಸದಸ್ಯ ಸಮಿತಿಯನ್ನು ರಚಿಸಿ, ಸಮಿತಿಯ ಶಿಫಾರಸ್ಸಿನ ಮೇರೆಗೆ ಹಿಂಬಾಕಿ ವೇತನ ಪಾವತಿ ಎಂಬುದಾಗಿ ಆದೇಶಿಸಿದ್ದರಿಂದ ಈ ರೀತಿಯ ವಿಳಂಬವಾಗಿದೆ.

ನಿವೃತ್ತ ನೌಕರರ ವೇತನ ಪರಿಷ್ಕರಣೆ ಸಂಬಂಧ ಉಪಧನ ಬಾಕಿ ಮೊತ್ತ ರೂ. 224.00 ಕೋಟಿಗಳನ್ನು ಯಾವುದೇ ಅನುದಾನವನ್ನು ಮೀಸಲಿಡದೆ ಇದ್ದಾಗ್ಯೂ ಸಹ ಬಿಡುಗಡೆಗೊಳಿಸಲಾಗಿದೆ.

2019-2023ರ ಅವಧಿಯಲ್ಲಿನ ರೂ.4900 ಕೋಟಿ ಬಾಕಿ ಉಳಿಸಿರುವ ಹೊಣೆಗಾರಿಕೆ ಮೊತ್ತದಲ್ಲಿ, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಬಾಕಿ ಪಾವತಿಗಾಗಿ ನಮ್ಮ ಸರ್ಕಾರವು ಬ್ಯಾಂಕ್‍ನಿಂದ ರೂ.2000 ಕೋಟಿ ಸಾಲವನ್ನು ಪಡೆಯಲು ಸಾರಿಗೆ ಸಂಸ್ಥೆಗಳಿಗೆ ಅನುಮತಿಸಿದ್ದು, ಈ ಸಾಲದ ಅಸಲು ಮತ್ತು ಬಡ್ಡಿಯನ್ನು ಸರ್ಕಾರವು ಪಾವತಿಸುತ್ತಿದೆ.

2019-2023 ರ ಅವಧಿಯಲ್ಲಿ ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಹೊಸ ಬಸ್ಸುಗಳ ಸೇರ್ಪಡೆಯಾಗದೆ ಮತ್ತು ಹೊಸ ನೇಮಕಾತಿ ಸ್ಥಗಿತಗೊಂಡಿದ್ದರಿಂದ, ಕಳೆದ ಎರಡುವರೆ ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 7800 ಹೊಸ ಬಸ್ಸುಗಳ ಸೇರ್ಪಡೆ ರೂ.3510 ಕೋಟಿ ಮತ್ತು 10000 ಹೊಸ ನೇಮಕಾತಿಯನ್ನು ಮಾಡಲಾಗಿದೆ.
ಸಾರಿಗೆ ಸಂಸ್ಥೆಗಳು ಪ್ರತಿ ದಿನ ಗಳಿಸುವ ಆದಾಯದಲ್ಲಿ ಶೇ.34.50 ರಷ್ಟು ಡೀಸೆಲ್ ವೆಚ್ಚ ಮತ್ತು 46.37% ಸಿಬ್ಬಂದಿ ವೆಚ್ಚ ಒಟ್ಟಾರೆ 80.87% ಪಾವತಿಸಲಾಗುತ್ತಿದೆ.


ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಕ್ಲಿಷ್ಟಕರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಳೆದ 2 ವರ್ಷಗಳಲ್ಲಿ ಸಂಸ್ಥೆಗಳು ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆ ಮೊತ್ತ ರೂ. 1219.23 ಕೋಟಿಗೆ ವಿನಾಯಿತಿ ನೀಡಲಾಗಿದೆ.

ಈ ಎಲ್ಲಾ ವಿಷಯಗಳ ಬಗ್ಗೆ ಕಾರ್ಮಿಕ ಸಂಘಟನೆಗಳು ಹಾಗೂ ಅಧಿಕಾರಿ ನೌಕರ ಬಂಧುಗಳು ಗಮನಹರಿಸಿ, ನಾವು ಜಾರಿಗೊಳಿಸಿರುವ ಸದರಿ ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಆದೇಶವನ್ನು ಒಪ್ಪಿಕೊಂಡು ಸಹಕರಿಸುವ ಆಶಯವನ್ನು ಹೊಂದಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!