Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ತಳಸಮುದಾಯಗಳು ಸಂಘಟಿತರಾದರೆ ಮಾತ್ರ ವಿಕಸನ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ
,ರಾಜಕೀಯ, ಆರ್ಥಿಕ ವಿಕಸನ ಸಾಧ್ಯ. ಸಂಘಟನೆ ಕಾರ್ಯ ಎಂಬುದು ನಿರಂತರ ಪ್ರಕ್ರಿಯೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.

ಇಲ್ಲಿನ ಗಾಂಧಿನಗರದ ಸ್ಯಾಂಕ್ಟಮ್ ಹೋಟೇಲಿನ ಸಭಾಂಗಣದಲ್ಲಿ ಅಗಸ್ಟ್ 20 ರ ಮಂಗಳವಾರ ಸಂಜೆ ಆಯೋಜಿಸಿದ್ದ " ಪರಿಶಿಷ್ಟ ಪಂಗಡಗಳ ನೌಕರರು ಹಾಗೂ ಜನಪ್ರತಿನಿಧಿಗಳ ಸಮಾಲೋಚನೆ ಸಭೆ" ಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶೋಷಿತ ಸಮಾಜದಲ್ಲಿ ಶಿಕ್ಷಣ ಪಡೆದು ನೌಕರಿ ಮಾಡುತ್ತಿರುವ ಜನರ ಮೇಲೆ ಹೆಚ್ಚು ಜವಾಬ್ದಾರಿಗಳಿವೆ.ಪರಿಶಿಷ್ಟ ಪಂಗಡದ ನೌಕರರು ತಮ್ಮ ವೃತ್ತಿ ಸಂಬಂಧಿತ ಮುಂಬಡ್ತಿ, ವರ್ಗಾವಣೆ, ಸ್ಥಳ ನಿಯುಕ್ತಿ ಸೇರಿದಂತೆ ಅನೇಕ ವಿಷಯಗಳಲ್ಲಿ ಎದುರಿಸುತ್ತಿರುವ ಸಮಸ್ಯೆ , ಸವಾಲುಗಳನ್ನು ಸಂಘಟಿತರಾದಾಗ ‌ಮಾತ್ರ ಪರಿಹಾರ ಕಂಡುಕೊಳ್ಳಲು  ಮಾರ್ಗಗಳು ದೊರೆಯುತ್ತವೆ. ಕಾನೂನು ತಜ್ಞ ಎಲ್.ಜಿ.ಹಾವನೂರ ಹಾಗೂ ಅವರಿಗಿಂತ ಹಿಂದಿನಿಂದಲೂ ಸಮಾಜದ ಸಂಘಟನೆಗೆ ಅನೇಕರು ಶ್ತಮಿಸಿದ್ದಾರೆ.ಇದೊಂದು ನಿರಂತರ ಪ್ರಕ್ರಿಯೆ, ಪ್ರತಿಯೊಬ್ಬ ಪ್ರಜ್ಞಾವಂತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಮಹಾಸ್ವಾಮಿಗಳು ಮಾತನಾಡಿ, ಆದಿಕವಿ ಮಹರ್ಷಿ ವಾಲ್ಮೀಕಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದರು.

ಶಾಸಕರಾದ ಅನ್ನಪೂರ್ಣ ತುಕಾರಾಮ, ಕರೆಮ್ಮನಾಯಕ, ಅನೀಲ್ ಚಿಕ್ಕಮಾದು, ಟಿ.ರಘುಮೂರ್ತಿ, ಜೆ.ಎನ್. ಗಣೇಶ್ , ಡಾ.ಎನ್.ಟಿ.ಶ್ರೀನಿವಾಸ ,ಚನ್ನಗಿರಿಯ ಮುಖಂಡ ಹೊದಿಗೆರೆ ರಮೇಶ ಮತ್ತಿತರರು ಮಾತನಾಡಿದರು.

ಕರ್ನಾಟಕ ರಾಜ್ಯ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ವರಮೂರ್ತಿ ವೈ.ಪಿ.,ಲೋಕೇಶ ನಾಯಕ , ಪಂಪಾಪತಿ ಮತ್ತಿತರರು ನೌಕರರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಈ ಕುರಿತು ಸಚಿವರಿಗೆ ಮನವಿ ಅರ್ಪಿಸಿದರು.

ಸಭೆಯಲ್ಲಿ ರಾಜ್ಯದ ಆನೇಕ ಜಿಲ್ಲೆಗಳಿಂದ ಸಮುದಾಯದ ಅಧಿಕಾರಿ ನೌಕರರು, ಸಮಾಜದ ಮುಖಂಡರುಗಳು, ನಿವೃತ್ತ ಅಧಿಕಾರಿಗಳು ಉಪಸ್ಥಿತರಿದ್ದರು.

ಅನ್ನಪೂರ್ಣ ಪ್ರಾರ್ಥಿಸಿದರು, ಮಂಜುನಾಥ ಡೊಳ್ಳಿನ ಸ್ವಾಗತಿಸಿದರು,ಸಂಘದ ಗೌರವಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಗವಿಸಿದ್ದಪ್ಪ ಮುತ್ತಾಳ ನಿರೂಪಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!