Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಿದ್ದರಾಮಯ್ಯನವರ ರಾಜಕೀಯ ಪ್ರಯಾಣವು ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ವಿರುದ್ಧ ಹೋರಾಡುವುದರಿಂದ ಹಿಡಿದು ಕಾಂಗ್ರೆಸ್ ಪಕ್ಷಕ್ಕೆ ಅಂಟಿಕೊಳ್ಳುವವರೆಗೆ
, ಸಿದ್ದರಾಮಯ್ಯ ನವರ ರಾಜಕೀಯ ಪ್ರಯಾಣವು ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ! ಆಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದ್ದಾರೆ.

1983 ರಲ್ಲಿ ತಮ್ಮ ರಾಜಕೀಯ ಜೀವನವನ್ನು ಕಾಂಗ್ರಸ್ ವಿರೋಧಿ ಪಕ್ಷವಾದ ಭಾರತೀಯ ಲೋಕದಳ(BLD) ದೊಂದಿಗೆ ಪ್ರಾರಂಭಿಸಿದರು. ಕಾಂಗ್ರೆಸ್‌ನ ಸಿದ್ಧಾಂತವನ್ನು ವಿರೋಧಿಸುತ್ತಾ ದಶಕಗಳ ಕಾಲ ಕಳೆದಿರುವ ಮಾನ್ಯ ಶ್ರೀ ಸಿದ್ದರಾಮಯ್ಯ ನವರು, ಈಗ ಹುಟ್ಟಿನಿಂದ ಕಾಂಗ್ರೆಸ್ಸಿಗರ ಪರವಾಗಿ ಹೋರಾಡಿದಂತೆ ಎದೆ ತಟ್ಟಿಕೊಳ್ಳುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ಹರಿಹಾಯ್ದಿದ್ದಾರೆ..

ಕಾಂಗ್ರೆಸ್ ವಿರೋಧಿ ಪಕ್ಷವಾದ ಭಾರತೀಯ ಲೋಕದಳದೊಂದಿಗೆ ತಮ್ಮ ಅವಧಿಯ ನಂತರ ಅವರು ಜನತಾ ಪಕ್ಷ, ನಂತರ ಜನತಾ ದಳ ಮತ್ತು ಜನತಾ ದಳ(ಜಾತ್ಯತೀತ) ಕ್ಕೆ ಸೇರಿದರು. ಹೆಚ್.ಡಿ. ದೇವೇಗೌಡರ ಸಂಪುಟದಲ್ಲಿ ಮೊದಲನೇ ಬಾರಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ ಅವರು ಕಾಂಗ್ರೆಸ್ ವಿರುದ್ಧ ಹೋರಾಡುತ್ತಲೇ ಉಪಮುಖ್ಯಮಂತ್ರಿ ಸಹ ಆದರು.

ಸದಾ ಕಾಲ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದ ಸಿದ್ದರಾಮಯ್ಯನವರು, ಒಂದು ಪಕ್ಷದಿಂದ ಇನ್ನೊಂದಕ್ಕೆ ಹಾರುವುದು ಅವರಿಗೇನು ಹೊಸದಲ್ಲ. 2005 ರಲ್ಲಿ ಜೆಡಿಎಸ್‌ನಿಂದ ಹೊರಬಂದ ನಂತರ, ಅವರು AIPJD ಪಕ್ಷವನ್ನು ರಚಿಸಿದರು. 2006ರಲ್ಲಿ ಅದನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದರು. ತಮ್ಮದೇ ಪಕ್ಷದ ಅಡಿಯಲ್ಲಿ ಒಂದು ಚುನಾವಣೆಯು ಸ್ಪರ್ಧಿಸುವ ಸಾಹಸ ಮಾಡಲಿಲ್ಲ ಎಂಬುದು ನಿಗೂಢ ಪ್ರಶ್ನೆಯಾಗಿಯೇ ಉಳಿದಿದೆ! ಎಂದು ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಅವರು ಬಲಿಷ್ಠ, ಸ್ವತಂತ್ರ ಪಕ್ಷವನ್ನು ಕಟ್ಟಲು ವಿಫಲರಾದರು. ಬದಲಾಗಿ, ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಪಕ್ಷ ಸೇರಿ, ಹಿರಿಯ ಕಾಂಗ್ರೆಸ್ ನಾಯಕರನ್ನು ಬದಿಗಿಟ್ಟು ತಾವು ಅಧಿಕಾರ ಅನುಭವಿಸುವ ಹಾಗೆ ನೋಡಿಕೊಂಡರು. ಈಗ, ಅವರು ತಮ್ಮ ಕಾಂಗ್ರೆಸ್ ವಿರೋಧಿ ಭೂತಕಾಲವನ್ನು ಅಳಿಸಿಹಾಕುತ್ತಾ, ಜೀವಮಾನವಿಡೀ ಕಾಂಗ್ರೆಸ್ಸಿಗರಾಗಿ ಇದ್ದ ರೀತಿ ಕಾಂಗ್ರೆಸ್ ಪಕ್ಷದ 'ಕಾರ್ಯಕರ್ತರಿಗೆ' ಟೋಪಿ ಹಾಕುತ್ತಿದ್ದಾರೆ ಎಂದು ನಿಖಿಲ್ ದೂರಿದರು.

ನಾಲ್ಕು ಪಕ್ಷಗಳು. ನಾಲ್ಕು ಬಾರಿ ದ್ರೋಹ. ಇದು ಸಿದ್ದರಾಮಯ್ಯ ನವರ ಒಂದು ಕಥೆ. ನಾಸ್ತಿಕರಾಗಿ ದೇವಸ್ಥಾನಕ್ಕೆ ಹೋಗುವವರವರೆಗೆ, ಕಾಂಗ್ರೆಸ್ ವಿರೋಧಿ ಹೋರಾಟಗಾರರಿಂದ ಕಾಂಗ್ರೆಸ್‌ನ ಅತ್ಯಂತ ಗಟ್ಟಿಯಾದ ಧ್ವನಿಯವರೆಗೆ, ಸಿದ್ದರಾಮಯ್ಯ ನವರ ರಾಜಕೀಯ ಜೀವನವು ಅವಕಾಶವಾದದಲ್ಲಿ ಒಂದು ಮಾಸ್ಟರ್‌ಕ್ಲಾಸ್ ಆಗಿದೆ.

ಒಂದು ಕಾಲದಲ್ಲಿ ಕಾಂಗ್ರೆಸ್ ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಕೆಂಡಕಾರುತ್ತಿದ ಮಾನ್ಯ ಸಿದ್ದರಾಮಯ್ಯನವರು, ಇಂದು ಅಧಿಕಾರಕ್ಕಾಗಿ ಅವರ ಸೇವೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮತ್ತು  ಡಿಕೆ ಶಿವಕುಮಾರ್ ಅವರು ಈಗಾಗಲೇ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ತಯಾರಿ ನಡೆಸುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.

ದ್ರೋಹದಿಂದ ಬದುಕುವವರು, ದ್ರೋಹದಿಂದಲೇ ಬೀಳುತ್ತಾರೆ. ಇತಿಹಾಸವು ಪುನರಾವರ್ತನೆಯಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!