Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.


ಸಂಘದ ಪರವಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ. ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕ ಸಿ.ಕೆ. ರಾಮಮೂರ್ತಿ, ಆಮ್ ಆದ್ಮಿ ಪಾರ್ಟಿ ಮುಖಂಡ ರವಿಕೃಷ್ಣಾ ರೆಡ್ಡಿ ಸೇರಿದಂತೆ ಇತರೆ ರಾಜಕೀಯ ಮುಖಂಡರು ಭಾಗಿಯಾಗಿ ಬೆಂಬಲ ಸೂಚಿಸಿದರು ಹಾಗೂ ಆಡಳಿತ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಪ್ರಮುಖ ವಿಚಾರವನ್ನು ವಿಧಾನ ಮಂಡಲ ಕಲಾಪದಲ್ಲಿ ಪ್ರಶ್ನಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, "ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಪ್ರತಿಯೊಂದು ವಿಚಾರದಲ್ಲಿ ವಸೂಲಿಗೆ ನಿಂತಿದೆ. ಬಡವರು ಇಂದು ಜೀವನ ಮಾಡುವುದು ದುಸ್ಥರವಾಗಿದೆ. ಬಡವರ ಪರವಾಗಿ ಕೆಲಸ ಮಾಡಲು ಜನರು ಆಯ್ಕೆ ಮಾಡಿದ ಸರಕಾರ, ಜನರ ಮೇಲೆ ಸವಾರಿ ಮಾಡುತ್ತಿದೆ ಎಂದು ಆಕ್ರೋಶ" ವ್ಯಕ್ತಪಡಿಸಿದರು.

"ಕಷ್ಟಪಟ್ಟು ಮನೆಕಟ್ಟಿಕೊಳ್ಳುವುದಕ್ಕೆ ಮುಂದಾಗಿರುವ ಜನರಿಗೆ ಕರೆಂಟ್ ಸಂಪರ್ಕ ನೀಡಲು ಸರಕಾರ ಈ ರೀತಿಯ ಷರತ್ತು, ನಿಯಮಗಳನ್ನು ಹೇರಿಕೆ ಮಾಡುವ ಮೂಲಕ ಜನರ ಜೀವ ಹಿಂಡುವ ಕೆಲಸ ಮಾಡುತ್ತಿದೆ. ಸರಕಾರ ಸುಪ್ರೀಂ ಕೋರ್ಟ್ ನಿಯಮವನ್ನು ಪಾಲಿಸುವ ನೆಪದಲ್ಲಿ ಜನರ ಮೇಲೆ ದೌರ್ಜನ್ಯ ಎಸಗುತ್ತಿದೆ. ಮೊದಲು ಇದು ನಿಲ್ಲಬೇಕು. ಜನರ ಪರವಾಗಿ ಸರಕಾರ ನಿರ್ಧಾರ ತೆಗೆದುಕೊಳ್ಳಬೇಕೆಂದು" ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಮಾತನಾಡಿ, "ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು" ಎಂದು ಆಗ್ರಹಿಸಿದರು.

"ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು" ಒತ್ತಾಯಿಸಿದರು.

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಮುಖ ಬೇಡಿಕೆಗಳು-
ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಒಮ್ ಟೈಮ್ ವಿನಾಯಿತ ನೀಡಬೇಕು.
ಸುಪ್ರೀಂ ಕೋರ್ಟ್ ಆದೇಶ ತೋರಿಸಿ ವಿದ್ಯುತ್ ಸಂಪರ್ಕ ನಿಲ್ಲಿಸುವುದು ನೀಡಬೇಕು. ಗುತ್ತಿಗೆದಾರು ಹಾಗೂ ಕಟ್ಟಡ ಮಾಲೀಕರಿಗೆ ಅನುಕೂಲ ಮಾಡಿಕೊಡಬೇಕು. ಎಂಎಸ್ಎಂಇ ಕೈಗಾರಿಕೆಗಳಿಗೆ ಓಸಿಯಿಂದ ವಿನಾಯಿತಿ ನೀಡಬೇಕು.


ಪ್ರತಿಭಟನೆ ನಡೆಸುತ್ತಿರುವವರು ಯಾರು ನಮಗೆ ಬಸ್ ಉಚಿತವಾಗಿ ನೀಡಿ, ನಮ್ಮ ಖಾತೆಗೆ ಹಣ ಹಾಕಿ ಅಂತಾ ಕೇಳುತ್ತಿಲ್ಲ. ಬದಲಾಗಿ ನಮಗೆ ಕೆಲಸ ಮಾಡಲು ಅವಕಾಶ ನೀಡಿ ಎಂದು ಕೇಳುತ್ತಿದ್ದಾರೆ. ಆದರೆ, ಆಡಳಿತದಲ್ಲಿರುವ ಸರ್ಕಾರ ಓಸಿ, ಸಿಸಿ ಹೆಸರಿನಲ್ಲಿ ವಿದ್ಯುತ್ ಸಂಪರ್ಕ ನೀಡದೆ, ಜನರನ್ನು ಸುಲಿಗೆ ಮಾಡುತ್ತಿದೆ. ಇದು ಯಾವ ನ್ಯಾಯ? ಮೊದಲು ಇವರ ಕಷ್ಟ ಪರಿಹಾರ ಮಾಡಿ. ಎನ್.ರವಿಕುಮಾರ್, ವಿರೋಧ ಪಕ್ಷದ ಮುಖ್ಯ ಸಚೇತಕ, ವಿಧಾನ ಪರಿಷತ್.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!